Updated By: Priyalachhi 

ಬೆಂಗಳೂರು: ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗುತ್ತಿದೆ. ಇದರಂತೆ ನಗರದಲ್ಲಿ 20 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಹೇಳಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕ ಎಂ.ಎ. ಸಲೀಂ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರೊಂದಿಗೆ ಸಭೆ ನಡೆಸಿದ ನಂತರ ಸಚಿವರು ಮಾಹಿತಿ ನೀಡಿದರು.

ಯಾವುದೇ ಅಹಿತಕರ ಘಟನೆಗಳನ್ನು ತಡೆಗಟ್ಟಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಸೇರಲಿದ್ದಾರೆ ಎಂದು ಪೊಲೀಸ್ ಇಲಾಖೆ ಅಂದಾಜಿಸಿದೆ. ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ 14 ಸಾವಿರ ಪೊಲೀಸರು, 2,500 ಮಂದಿ ಸಂಚಾರ ಪೊಲೀಸರು, 88 ಕೆಎಸ್‍ಆರ್‌ಪಿ ತುಕಡಿ, 21 ಸಿಎಆರ್ ತುಕಡಿ, 266 ಹೊಯ್ಸಳ ವಾಹನ, 250 ಕೋಬ್ರಾ ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅಲ್ಲದೆ, 400 ಮಂದಿ ಟ್ರಾಫಿಕ್ ವಾರ್ಡನ್‍ಗಳು, ಪೌರ ರಕ್ಷಣೆ ಮತ್ತು ಗೃಹರಕ್ಷಕ ದಳ ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಜನದಟ್ಟಣೆ ನಿಯಂತ್ರಿಸಲು ಜಲ ಫಿರಂಗಿ ವಾಹನಗಳನ್ನು ಬಳಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version