BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಹೊಸ ವಾಹನಗಳಿಗೆ ವಿಧಿಸುವ ಸೆಸ್​​ನ ಗರಿಷ್ಠ ಮಿತಿ ಕೈ ಬಿಡುವ ತಿದ್ದುಪಡಿ ಮಸೂದೆ ಮಂಡನೆ

Author Picture
Published On: December 16, 2025

—Advertisement—

Updated By: Priyalachhi

ಬೆಳಗಾವಿ: ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರ (ತಿದ್ದುಪಡಿ) ಬಿಲ್, ಬೆಂಗಳೂರು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ಮಸೂದೆ, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ತಿದ್ದುಪಡಿ) ಮಸೂದೆ ಹಾಗೂ ಬಾಂಬೆ ಸಾರ್ವಜನಿಕ ನ್ಯಾಸ ( ಕರ್ನಾಟಕ ತಿದ್ದುಪಡಿ) ವಿಧೇಯಕಗಳನ್ನು ಮಂಡನೆ ಮಾಡಲಾಯಿತು.

ಹೊಸ ವಾಹನಗಳಿಗೆ ಸೆಸ್ ವಿಧಿಸುವ ತಿದ್ದುಪಡಿ ಮಸೂದೆ ಮಂಡನೆ: ವಾಹನ ನೋಂದಣಿ ವೇಳೆ ಸಂಗ್ರಹಿಸುವ ಒಂದು ಬಾರಿಯ ಸೆಸ್​​ನ ಗರಿಷ್ಠ ಮಿತಿ ಕೈಬಿಡುವ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರ (ತಿದ್ದುಪಡಿ) ಬಿಲ್ ಅನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು. ಇದರ ಪ್ರಕಾರ ವಾಹನಗಳ ಮೌಲ್ಯಕ್ಕೆ ಅನುಗುಣವಾಗಿ ಸೆಸ್ ವಿಧಿಸಲು ಪ್ರಸ್ತಾಪಿಸಲಾಗಿದೆ.‌ ಕನಿಷ್ಠ 1,000 ರೂ.ನಿಂದ ಆರಂಭವಾಗಿ ವಾಹನಗಳ ಮೌಲ್ಯಕ್ಕೆ ಅನುಗುಣವಾಗಿ ಸ್ಲ್ಯಾಬ್ ವೈಸ್ ಸೆಸ್ ವಿಧಿಸಲು ಪ್ರಸ್ತಾಪಿಸಲಾಗಿದೆ. ಈ ಹಿಂದಿನ ಕಾಯ್ದೆಯಲ್ಲಿ ವಾಹನ ನೋಂದಣಿ ಸಮಯದಲ್ಲಿ ರಾಜ್ಯ ಸರ್ಕಾರ ವಿಧಿಸುವ ‘1,000 ರೂ.ಗೆ ಹೆಚ್ಚಿರದಂಥ’ ಉಪಕರ ಎಂಬ ಪದವನ್ನು ಕೈ ಬಿಡಲಾಗಿದೆ. ಅಂದರೆ ಗರಿಷ್ಠ ಉಪಕರ ಮಿತಿಯನ್ನು ಕೈ ಬಿಡಲಾಗಿದೆ.‌

ಬೆಂಗಳೂರು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ಮಸೂದೆ ಮಂಡನೆ ಮಾಡಲಾಯಿತು. ಈ ತಿದ್ದುಪಡಿ ಮಸೂದೆಯಲ್ಲಿ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆ ನಿರ್ದೇಶಕರು ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಖ್ಯ ನಗರ ಯೋಜಕರನ್ನು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ಸೇರಿಸಲು, ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2018 (2018ರ ಕರ್ನಾಟಕ ಅಧಿನಿಯಮ 12)ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಪ್ರಸ್ತಾಪಿಸಲಾಗಿದೆ.‌

ಬಾಂಬೆ ಸಾರ್ವಜನಿಕ ನ್ಯಾಸ ( ಕರ್ನಾಟಕ ತಿದ್ದುಪಡಿ) ವಿಧೇಯಕ 2025ಕ್ಕೆ ಮಂಡನೆ ಮಾಡಲಾಯಿತು.‌ ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಇವರನ್ನು ಧರ್ಮಾದಾಯ ಆಯುಕ್ತರನ್ನಾಗಿ, ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಯನ್ನು ಜಂಟಿ ಧರ್ಮಾದಾಯ ಆಯುಕ್ತರನ್ನಾಗಿ, ಸಂಬಂಧಪಟ್ಟ ಉಪ ವಿಭಾಗದ ಉಪ ವಿಭಾಗಾಧಿಕಾರಿಯು ಉಪ ಧರ್ಮಾದಾಯ ಆಯುಕ್ತರನ್ನಾಗಿ ಮತ್ತು ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರು ಸಹಾಯಕ ಧರ್ಮಾದಾಯ ಆಯುಕ್ತರನ್ನಾಗಿ ನೇಮಿಸಲು ತಿದ್ದುಪಡಿ ಮಾಡಲು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp