ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಕೃಷ್ಣನಗರ: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ TMC ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷ ಹಲವು ಜಿಲ್ಲೆಗಳಲ್ಲಿ ತನ್ನ ಖಾತೆ ತೆರೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೂ ಮುನ್ನ ಕೃಷ್ಣನಗರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣವನ್ನು ಗುರಿಯಾಗಿಟ್ಟುಕೊಂಡು 10 ಅಂಶಗಳ ಗ್ಯಾರಂಟಿ ನೀಡಿದರು.

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಶಿಕ್ಷೆಯಾಗುತ್ತದೆ” ಎಂದು ಅವರು ಪ್ರತಿಜ್ಞೆ ಮಾಡಿದರು. ಪ್ರತಿ ಬ್ಲಾಕ್‌ನಲ್ಲಿ ಮಹಿಳಾ ಠಾಣೆ ಇರುತ್ತದೆ. ಮಹಿಳೆಯರನ್ನು ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಪಡೆಗೆ ನೇಮಿಸಿಕೊಳ್ಳಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಒಂದು ವರ್ಷದೊಳಗೆ, 36,000 ರೂ.ಗಳನ್ನು ಮಹಿಳೆಯರ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂದು ಅವರು ಭರವಸೆ ನೀಡಿದರು. ಬಿಜೆಪಿ ಸರ್ಕಾರ ರಚನೆಯಾದರೆ ಪದವೀಧರ ವಿದ್ಯಾರ್ಥಿನಿಯರಿಗೆ 50,000 ರೂ. ಹಾಗೂ ಗರ್ಭಿಣಿ ಮಹಿಳೆಯರಿಗೆ 21,000 ರೂ.ಗಳ ಆರ್ಥಿಕ ನೆರವು ಸಿಗುತ್ತದೆ ಎಂದು ಅವರು ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version