• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

2022ರ BJP ಸರ್ಕಾರದ ಆದೇಶ ವಾಪಸ್: ಹಿಜಾಬ್​​ಗೆ ಅವಕಾಶ!

Sambrama Prabha News by Sambrama Prabha News
May 14, 2026
in Nation News, Politics
0
2022ರ BJP ಸರ್ಕಾರದ ಆದೇಶ ವಾಪಸ್: ಹಿಜಾಬ್​​ಗೆ ಅವಕಾಶ!

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: 2022ರಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದ್ದು, ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಕಾನೂನು ಸಮರಕ್ಕೂ ಕಾರಣವಾಗಿತ್ತು. ಇದೀಗ ರಾಜ್ಯ ಸರ್ಕಾರ ಹಿಜಾಬ್ ವಿಚಾರದಲ್ಲಿ ತನ್ನ ನಿಲುವನ್ನು ಬದಲಿಸಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅನುಮತಿ ನೀಡಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.

Tags: ಹಿಜಾಬ್
Previous Post

CBSE Class 12 results: ಕರ್ನಾಟಕಕ್ಕೆ ಮೂರನೇ ಸ್ಥಾನ

Next Post

ಸ್ಪೀಕರ್ ಯು.ಟಿ ಖಾದರ್ ಮೇಲೆ ಹಲ್ಲೆಗೆ ಯತ್ನ: 11 ಜನರ ವಿರುದ್ಧ ಪ್ರಕರಣ ದಾಖಲು

Next Post
ಸ್ಪೀಕರ್ ಯು.ಟಿ ಖಾದರ್ ಮೇಲೆ ಹಲ್ಲೆಗೆ ಯತ್ನ: 11 ಜನರ ವಿರುದ್ಧ ಪ್ರಕರಣ ದಾಖಲು

ಸ್ಪೀಕರ್ ಯು.ಟಿ ಖಾದರ್ ಮೇಲೆ ಹಲ್ಲೆಗೆ ಯತ್ನ: 11 ಜನರ ವಿರುದ್ಧ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.