ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿ ನಡುವೆ ಐಕ್ಯತೆಯ ಪ್ರದರ್ಶನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತುಮಕೂರಿನಲ್ಲಿ ನಡೆದ ‘ಸಾಧನಾ ಸಮರ್ಪಣಾ ಸಮಾವೇಶ’ದಲ್ಲಿ ಒಂದೇ ವೇದಿಕೆ ಹಂಚಿಕೊಂಡರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನೆಯನ್ನು ಆಚರಿಸಲು ಈ ಸಮಾವೇಶ ಆಯೋಜಿಸಲಾಗಿತ್ತು.
ಅಗತ್ಯ ವಸ್ತುಗಳ, ವಿಶೇಷವಾಗಿ ಇಂಧನದ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣರಾಗಿದ್ದಾರೆ ಎಂದು ಆರೋಪಿಸಿದ ಇಬ್ಬರು ನಾಯಕರು, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ರಕ್ಷಾಕವಚದಂತೆ ಕೆಲಸ ಮಾಡಿರುವುದರಿಂದ 2028ರಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯಾವುದೇ ಕಾಂಗ್ರೆಸ್ ರಾಜ್ಯ ಸರ್ಕಾರ ಸತತ ಎರಡನೇ ಬಾರಿ ಜನರಿಂದ ಮರು ಆಯ್ಕೆಯಾಗಿಲ್ಲ ಎಂಬ ಪ್ರಧಾನಿ ಮೋದಿಯವರ ಇತ್ತೀಚಿನ ಹೇಳಿಕೆಗೆ ಪ್ರತಿಯಾಗಿ ಕರ್ನಾಟಕದ ಈ ನಾಯಕರ ಹೇಳಿಕೆಗಳು ಬಂದಿವೆ.



