• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

5 ವರ್ಷದಲ್ಲಿ ನಾಪತ್ತೆಯಾದವರ ಕುರಿತು ಸಂಪೂರ್ಣ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

Sambrama Prabha News by Sambrama Prabha News
December 3, 2025
in Politics
0
5 ವರ್ಷದಲ್ಲಿ ನಾಪತ್ತೆಯಾದವರ ಕುರಿತು ಸಂಪೂರ್ಣ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

Updated By: Priyalachhi

ಬೆಂಗಳೂರು: ರಾಜ್ಯದಲ್ಲಿ 2020 ರಿಂದ 2025 ರವರೆಗಿನ ಐದು ವರ್ಷದ ಅವಧಿಯಲ್ಲಿ ಕಾಣೆಯಾದವರ ಕುರಿತು ದಾಖಲಾಗಿರುವ ದೂರುಗಳ ಸಂಖ್ಯೆ ಮತ್ತು ಅಂತಹ ದೂರುಗಳ ಮೇಲೆ ಎಷ್ಟು ಕ್ರಮ ಕೈಗೊಳ್ಳಲಾಗಿದೆ ಮತ್ತು ಎಷ್ಟು ಪ್ರಕರಣಗಳಲ್ಲಿ ನಾಪತ್ತೆಯಾದವರನ್ನು ಪತ್ತೆ ಹಚ್ಚಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ಅಂಕಿ – ಅಂಶಗಳನ್ನು ಸಲ್ಲಿಸುವಂತೆ ಹೈಕೋರ್ಟ್​ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ತಮ್ಮ ಸಹೋದರ ಕುಮಾರ್​​ ಅವರು ಕಾಣೆಯಾದ ಪ್ರಕರಣ ಸಂಬಂಧ ದಾಖಲಾಗಿರುವ ದೂರಿನ ಕುರಿತ ವಿವರವಾದ ತನಿಖೆ ನಡೆಸಿ ಪತ್ತೆ ಹಚ್ಚಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಮಹೇಶ್ ಎಂಬವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್​​ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

2020 ರಿಂದ 2025ರವರೆಗಿನ ಕಳೆದ ಐದು ವರ್ಷಗಳಲ್ಲಿ ಕಾಣೆಯಾದ ಆರೋಪದ ದೂರುಗಳ ಸಂಖ್ಯೆ, ಪುರುಷರು, ಮಹಿಳೆಯರು, ಮಕ್ಕಳಂತೆ (ಪುರಷ ಮತ್ತು ಮಹಿಳೆ), ವಯಸ್ಸು ಸೇರಿದಂತೆ ವರ್ಗವಾರು ಅಂಕಿ – ಅಂಶಗಳನ್ನು ಸಲ್ಲಿಸಬೇಕು. ಅಲ್ಲದೇ, ಎಷ್ಟು ಪ್ರಕರಣಗಳಲ್ಲಿ ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಿರುವುದು ಸೇರಿದಂತೆ ಕೈಗೊಂಡ ಕ್ರಮಗಳೂ ಸೇರಿ ಸಂಪೂರ್ಣ ದತ್ತಾಂಶವನ್ನು ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
ಮಹಿಳೆಯರು, ಮಕ್ಕಳು, ವೃದ್ಧರು ಕಾಣೆಯಾಗುವಂತೆ ಪ್ರಕರಣಗಳು ಅತ್ಯಂತ ಗಂಭೀರ ವಿಚಾರವಾಗಿದೆ. ಈ ರೀತಿಯ ಆರೋಪಗಳಲ್ಲಿ ದಾಖಲಾಗುತ್ತಿರುವ ಪ್ರಕರಣಗಳ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ ಎಂದು ಪೀಠ ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಈ ಪ್ರಕರಣದಲ್ಲಿ ಕುಮಾರ್​​ ಎಂಬುವರು ಕಾಣೆಯಾದ ಒಂದು ವರ್ಷದ ಬಳಿಕ ದೂರು ದಾಖಲಾಗಿದೆ ಮತ್ತು ಕಾಣೆಯಾದ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರು ಅಗತ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದಾರೆ ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ಈ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

Tags: ಹೈಕೋರ್ಟ್
Previous Post

ಮಗಳ ಕೆನ್ನೆಗೆ ಅರಿಶಿನ ಹಚ್ಚಿದ ಕಿಚ್ಚ ಸುದೀಪ್

Next Post

ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿಕೆ ಶಿವಕುಮಾರ್

Next Post
ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿಕೆ ಶಿವಕುಮಾರ್

ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿಲ್ಲ: ದೆಹಲಿಯಲ್ಲಿ ಡಿಕೆ ಶಿವಕುಮಾರ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.