—Advertisement—

ಸಿಎಂ ಸ್ಥಾನದಿಂದ ಸಿದ್ದು ಕೆಳಗಿಳಿಸುವ ಪ್ರಯತ್ನ- ವಾಟಾಳ್ ನಾಗರಾಜ್

Author Picture
Published On: November 24, 2025

—Advertisement—

Updated By: Priyalachhi

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಯತ್ನ ಬೆಂಕಿಯೊಂದಿಗೆ ಆಡುವ ಸರಸವಾಗಬಹುದು ಎಂದು ಕನ್ನಡ ಹೋರಾಟಗಾರ ಮತ್ತು ಮಾಜಿ ಶಾಸಕ ವಾಟಾಳ್ ನಾಗರಾಜ್ ಭಾನುವಾರ ಎಚ್ಚರಿಸಿದ್ದಾರೆ. ಪ್ರಸ್ತುತ ರಾಜ್ಯದ ಯಾವುದೇ ಪಕ್ಷದಲ್ಲಿ ಸಿದ್ದರಾಮಯ್ಯರಂತಹ ಸಾಮರ್ಥ್ಯ ಹೊಂದಿರುವ ನಾಯಕರಿಲ್ಲ ಎಂದಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ನಾಗರಾಜ್, ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಅಗತ್ಯವಿಲ್ಲ. ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಯಾವುದೇ ಪಕ್ಷದಲ್ಲೂ ಸಿದ್ದರಾಮಯ್ಯರಂತಹ ನಾಯಕರಿಲ್ಲ. ಅವರು ಅದ್ಭುತ ವಿಚಾರಗಳನ್ನು ಹೊಂದಿರುವ ವ್ಯಕ್ತಿ ಮತ್ತು ಮುಖ್ಯಮಂತ್ರಿಯಾಗಲು ಅಗತ್ಯವಿರುವ ಎಲ್ಲಾ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಎಂದರು.

ಅವರು ಏಳು ವರ್ಷಗಳಿಗೂ ಹೆಚ್ಚು ಕಾಲ ರಾಜ್ಯವನ್ನು ಸಮರ್ಥವಾಗಿ ನಡೆಸಿದ್ದಾರೆ. ಅವರನ್ನು ಬದಲಾಯಿಸಲು ಯಾರಿಂದಲೂ ಆಗಲ್ಲ ಎಂದು ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp