Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸತತ 2ನೇ ಬಾರಿಗೆ ಕಬಡ್ಡಿ ವಿಶ್ವಕಪ್​ ಗೆದ್ದ ಭಾರತ
Sports News

ಸತತ 2ನೇ ಬಾರಿಗೆ ಕಬಡ್ಡಿ ವಿಶ್ವಕಪ್​ ಗೆದ್ದ ಭಾರತ

Sambrama Prabha NewsBy Sambrama Prabha NewsNovember 25, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಭಾರತೀಯ ಮಹಿಳಾ ಕಬಡ್ಡಿ ತಂಡ ವಿಶ್ವಕ್ಕೆ ಮತ್ತೊಮ್ಮೆ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನಡೆದಿದ್ದ 2025ರ ಮಹಿಳಾ ಕಬಡ್ಡಿ ವಿಶ್ವಕಪ್ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಪ್ರಶಸ್ತಿ ನಿರ್ಣಾಯಕ ಪಂದ್ಯದಲ್ಲಿ, ಭಾರತ ತಂಡವು ಬಲಿಷ್ಠ ಚೈನೀಸ್ ತೈಪೆಯನ್ನು 35-28 ಅಂತರದಿಂದ ಸೋಲಿಸುವ ಮೂಲಕ ಸತತ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಪಂದ್ಯಾವಳಿಯಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋಲದೆ ಅಜೇಯವಾಗಿ ವಿಶ್ವಕಪ್ ಗೆದ್ದುಕೊಂಡಿರುವದು ವಿಶೇಷ.

ರೋಚಕದಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವು ಭಾರತೀಯ ಮಹಿಳಾ ತಂಡಕ್ಕೆ ಕಠಿಣ ಸ್ಪರ್ಧೆ ನೀಡಿತು. ಆದಾಗ್ಯೂ, ಭಾರತೀಯ ನಾಯಕಿ ರಿತು ನೇಗಿ ಮತ್ತು ಉಪನಾಯಕಿ ಪುಷ್ಪಾ ರಾಣಾ ಅತ್ಯುತ್ತಮ ನಾಯಕತ್ವ ಕೌಶಲ್ಯವನ್ನು ಪ್ರದರ್ಶಿಸಿದರು. ವಿಶೇಷವಾಗಿ ಸಂಜು ದೇವಿ ಅವರ ಸೂಪರ್ ರೈಡ್ ತಂಡಕ್ಕೆ ನಿರ್ಣಾಯಕ ತಿರುವು ನೀಡಿ ಪಂದ್ಯದ ದಿಕ್ಕನ್ನು ಬದಲಾಯಿಸಿತು. ಇದರಿಂದಾಗಿ ಭಾರತಕ್ಕೆ ಗೆಲುವು ಸುಲಭವಾಯ್ತು. ಭಾರತ ತಂಡವು ಫೈನಲ್‌ನಲ್ಲಿ ಮಾತ್ರವಲ್ಲದೆ ಪಂದ್ಯಾವಳಿಯಾದ್ಯಂತ ಪ್ರಾಬಲ್ಯ ಮೆರೆಯಿತು.

ಗುಂಪು ಹಂತದ ಪಂದ್ಯಾವಳಿಗಳಲ್ಲಿ ಟೀಮ್​ ಇಂಡಿಯಾ, ಥೈಲ್ಯಾಂಡ್ ಅನ್ನು 68-17 ಮತ್ತು ನೇಪಾಳವನ್ನು 50-12 ಅಂತರದಿಂದ ಸೋಲಿಸಿತು. ಇದಲ್ಲದೇ ಸೆಮಿಫೈನಲ್‌ನಲ್ಲಿ ಬಲಿಷ್ಠ ಇರಾನ್ ತಂಡವನ್ನು 33-21 ಅಂತರದಿಂದ ಮಣಿಸಿ ಫೈನಲ್ ಪ್ರವೇಶ ಪಡೆದುಕೊಂಡಿತು. ಮತ್ತೊಂದೆಡೆ, ಚೈನೀಸ್ ತೈಪೆ ಕೂಡ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ನಾಕೌಟ್ ಹಂತವನ್ನು ತಲುಪಿತು. ತಂಡವು ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 25-18 ಅಂಕಗಳ ಅಂತರದಿಂದ ಮಣಿಸಿ ಫೈನಲ್ ತಲುಪಿತು.

ಭಾರತ ಮತ್ತು ಚೈನೀಸ್ ತೈಪೆ ಎರಡೂ ಅಜೇಯವಾಗಿ ಫೈನಲ್​ ಪಂದ್ಯಕ್ಕೆ ಅರ್ಹತೆ ಪಡೆದಿದ್ದರಿಂದ ಅಂತಿಮ ಕದನ ಮತ್ತಷ್ಟೋ ರೋಚಕತೆಗೆ ತೆರೆಳಿತ್ತು. ಏತನ್ಮಧ್ಯೆ ಈ ಪಂದ್ಯಾವಳಿಯಲ್ಲಿ ಒಟ್ಟು 11 ತಂಡಗಳು ಭಾಗವಹಿಸಿದ್ದವು. ಗುಂಪು ‘ಎ’ಯಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಭಾರತ ಗೆದ್ದಿತು. ಅದೇ ರೀತಿ, ಗುಂಪು ‘ಬಿ’ಯಲ್ಲಿ ಆಡಿದ ಐದು ಪಂದ್ಯಗಳಲ್ಲಿಯೂ ಚೈನೀಸ್ ತೈಪೆ ಜಯಗಳಿಸಿತು.

ಈ ಪಂದ್ಯಾವಳಿಯಲ್ಲಿ ಭಾರತ ತಂಡದ ಗೆಲುವಿನಲ್ಲಿ ನಾಯಕಿ ರಿತು ನೇಗಿ ಮತ್ತು ಉಪನಾಯಕಿ ಪುಷ್ಪಾ ರಾಣಾ ಪ್ರಮುಖ ಪಾತ್ರ ವಹಿಸಿದರು. ರಿತು ರೈಡಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ಪುಷ್ಪಾ ರಾಣಾ ರಕ್ಷಣಾ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದರು. ಇದರೊಂದಿಗೆ ಭಾರತ ಎದುರಾಳಿ ತಂಡಗಳ ಮೇಲೆ ಪ್ರಾಬಲ್ಯ ಸಾಧಿಸಿತು. ಅವರೊಂದಿಗೆ ಚಂಪಾ ಠಾಕೂರ್, ಭಾವನಾ ಠಾಕೂರ್ ಮತ್ತು ಸಾಕ್ಷಿ ಶರ್ಮಾ ಕೂಡ ಉತ್ತಮ ಪ್ರದರ್ಶನ ನೀಡಿದರು. ಕರ್ನಾಟಕದ ತೇಜಸ್ವಿ ಬಾಯಿ ತಂಡದ ಮುಖ್ಯ ಕೋಚ್ ಮತ್ತು ಸಹಾಯಕ ಕೋಚ್ ಪ್ರಿಯಾಂಕಾ ಆಟಗಾರ್ತಿಯರಲ್ಲಿ ಆತ್ಮವಿಶ್ವಾಸ ತುಂಬಿದರು ಇದು ಅದ್ಭುತ ಪ್ರದರ್ಶನಕ್ಕೆ ಸಹಾಯ ಮಾಡಿತು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
India Kabaddi World Cup
Add as Preferred on Google Follow on Google News
Share. WhatsApp Facebook Twitter Telegram
Previous Articleಕೊಲೆಯಾದ ರೀತಿಯಲ್ಲಿ ಬಿಬಿಎಂ ವಿದ್ಯಾರ್ಥಿನಿಯ ಶವ ಪತ್ತೆ!
Next Article ಗೇಮಿಂಗ್ ಆ್ಯಪ್‌ಗಳ ಮೇಲೆ ದಾಳಿ: ಬ್ಯಾಂಕ್‌ ಖಾತೆ, ಬಾಂಡ್‌, ಮ್ಯೂಚುವಲ್‌ ಫಂಡ್‌ಗಳು ಜಪ್ತಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಹೊಸ ಇತಿಹಾಸ ಸೃಷ್ಟಿಸಿದ ಬಾಬರ್ ಅಜಮ್; ಕೊಹ್ಲಿ ದಾಖಲೆ ಉಡೀಸ್

April 16, 2026

IPL 2026: ಸತತ ಮೂರು ಸೋಲು ಕಂಡಿರುವ ಮುಂಬೈ ಇಂಡಿಯನ್ಸ್‌ಗೆ ಹೊಡೆತ

April 15, 2026

T20 ವಿಶ್ವಕಪ್ 2026: ಪಾಕಿಸ್ತಾನ ಆಡೋದು ಡೌಟ್?

January 31, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.