Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮಹಾಂತೇಶ ಬೀಳಗಿ ಸೇರಿ ನಾಲ್ವರ ಅಂತ್ಯಕ್ರಿಯೆ
Nation News

ಮಹಾಂತೇಶ ಬೀಳಗಿ ಸೇರಿ ನಾಲ್ವರ ಅಂತ್ಯಕ್ರಿಯೆ

Sambrama Prabha NewsBy Sambrama Prabha NewsNovember 26, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಳಗಾವಿ: ವಿಭೂತಿ ಪುರುಷ, ಜನಸ್ನೇಹಿ ಆಡಳಿತಗಾರ, ಬಡವರ ಪಾಲಿಗೆ ದೇವರೇ ಆಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರು ದುರಂತ ಅಂತ್ಯ ಕಂಡಿದ್ದಾರೆ. ಇನ್ನೂ ಬದುಕಿ ಬಾಳಬೇಕಿದ್ದ ಅವರು, ಅರ್ಧದಲ್ಲೇ ಪಯಣ ಮುಗಿಸಿ‌ ಬಾರದ ಲೋಕಕ್ಕೆ ಪಯಣ ಬೆಳೆಸಿದರು. ಸಾವಿರಾರು ಜನರು ಒಲ್ಲದ ಮನಸ್ಸಿನಿಂದಲೇ ಅವರಿಗೆ ಅಂತಿಮ ವಿದಾಯ ಹೇಳಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಾಘತದಲ್ಲಿ ಮೃತಪಟ್ಟ ಮಹಾಂತೇಶ ಬೀಳಗಿ ಸೇರಿ ನಾಲ್ವರ ಮೃತದೇಹಗಳ ಅಂತ್ಯಕ್ರಿಯೆ ಇಂದು ಸಂಜೆ 5:40ರ ವೇಳೆಗೆ ರಾಮದುರ್ಗ ಹೊರ ವಲಯದ ಅವರ ತೋಟದಲ್ಲಿ ಲಿಂಗಾಯತ ಧರ್ಮದ ವಿಧಿವಿಧಾನಗಳ ಪ್ರಕಾರ ನೆರವೇರಿತು.

ಮಹಾಂತೇಶ ಬೀಳಗಿ ಅವರ ಚಿತೆಗೆ ಅಣ್ಣ ಸಿದ್ದರಾಮಪ್ಪ ಅವರು ಅಗ್ನಿಸ್ಪರ್ಶ ಮಾಡಿದರು. ಕುಟುಂಬಸ್ಥರ ಆಕ್ರಂದನದ ನಡುವೆ ನಾಲ್ವರ ಅಂತ್ಯಸಂಸ್ಕಾರ ಮಾಡಲಾಯಿತು. ಮಹಾಂತೇಶ ಅವರ ಪಕ್ಕದಲ್ಲಿ ಶಂಕರ ಬೀಳಗಿ, ಈರಣ್ಣಾ ಬೀಳಗಿ, ಈರಣ್ಣಾ ಶಿರಸಂಗಿ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು.‌ ಈ ವೇಳೆ ಪತ್ನಿ ರೇಖಾ, ಪುತ್ರಿ ಚೈತನ್ಯ ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

50ಕ್ಕೂ ಅಧಿಕಾರಿಗಳಿಂದ ಅಂತಿಮ ದರ್ಶನ: ಇದಕ್ಕೂ ಮುನ್ನ ಶಾಸಕ ಅಶೋಕ ಪಟ್ಟಣ, ಜಿ.ಎಸ್.ಪಾಟೀಲ್, ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ, ವೈ.ಎಸ್.ಪಾಟೀಲ, ಶಿವಾನಂದ ಕಾಪಶಿ, ವಿಜಯಮಹಾಂತೇಶ, ಸುರೇಶ ಇಟ್ನಾಳ್, ವೈಶಾಲಿ, ರವಿ ಚೆನ್ನಣ್ಣವರ, ಯಶೋಧಾ ವಂಟಗೋಡಿ, ಚನ್ನಬಸವಣ್ಣ ಲಂಗೋಟಿ, ಡಾ.ಭೀಮಾಶಂಕರ ಗುಳೇದ, ಹಣಮಂತರಾಯಪ್ಪ, ರಿಷಂತ್, ಯಶವಂತ ಗುರಿಕಾರ, ಗಂಗಾಧರಸ್ವಾಮಿ, ಗೋವಿಂದರೆಡ್ಡಿ, ಪದ್ಮಾ ಬಸವಂತಪ್ಪ, ಶಶಿಧರ ಕುರೇರ ಸೇರಿದಂತೆ 50ಕ್ಕೂ ಅಧಿಕ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು ಹಾಜರಿದ್ದು ಅಂತಿಮ ದರ್ಶನ ಪಡೆದರು.

ಕಂಬನಿ ಮಿಡಿದ ಅಧಿಕಾರಿಗಳು: ಮಹಾಂತೇಶ ಬೀಳಗಿ ಅವರ ಅಕಾಲಿಕ ಮರಣಕ್ಕೆ ಅವರ ಬ್ಯಾಚ್​ಮೇಟ್​, ಅವರ ಅಧೀನದಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕಣ್ಣೀರು ಹಾಕಿದರು‌‌. ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಇದೇ ವೇಳೆ ಪುತ್ರಿ ಚೈತನ್ಯಾಗೆ ನೀನು ಐಎಎಸ್ ಅಧಿಕಾರಿ ಆಗಬೇಕು. ಒಳ್ಳೆಯ ಹೆಸರು ಸಂಪಾದಿಸಬೇಕು. ದಕ್ಷ ಆಡಳಿತದ ಮೂಲಕ ಜನ ಮೆಚ್ಚುಗೆ ಗಳಿಸಬೇಕು. ಆ ಮೂಲಕ ತಂದೆಯ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಬೇಕು ಎಂದು ಹರಸಿದರು.

ಹಲವು ಸ್ವಾಮೀಜಿಗಳು ಭಾಗಿ: ಇಳಕಲ್ ಮಠದ ಗುರುಮಹಾಂತ ಸ್ವಾಮೀಜಿ, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಗಚ್ಚಿನಹಿರೇಮಠದ ಚನ್ನಮಲ್ಲ ಶಿವಾಚಾರ್ಯ ಸ್ವಾಮೀಜಿ, ಚಂದರಗಿಯ ಗಡದೇಶ್ವರ ಸ್ವಾಮೀಜಿ, ಢವಳೇಶ್ವರ ಸ್ವಾಮೀಜಿ, ಬಡೇಕೊಳ್ಳಮಠದ ನಾಗೇಂದ್ರ ಸ್ವಾಮೀಜಿ, ಮುಳ್ಳೂರಿನ ಚಂದ್ರಶೇಖರ ಸ್ವಾಮೀಜಿ, ಅವರಾದಿಯ ಶಿವಮೂರ್ತಿ ಸ್ವಾಮೀಜಿ, ರಾಮದುರ್ಗದ ಶಾಂತವೀರ ಸ್ವಾಮೀಜಿ, ಮುನವಳ್ಳಿಯ ಮುಕ್ತಾನಂದ ಸ್ವಾಮೀಜಿ ಸೇರಿ ಮತ್ತಿತರರು ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಪಾಲ್ಗೊಂಡಿದ್ದರು

ಬೆಳಗ್ಗೆಯಿಂದ ಏನೇನಾಯಿತು?:

  • ಬೆಳಗ್ಗೆ 7:30ರ ಸುಮಾರಿಗೆ ಕಲಬುರಗಿಯಿಂದ ಮಹಾಂತೇಶ ಬೀಳಗಿ ಸೇರಿ ಮೂವರ ಮೃತದೇಹಗಳನ್ನು ರಾಮದುರ್ಗಕ್ಕೆ ತರಲಾಯಿತು.
  • ನವಿಪೇಟದಲ್ಲಿರುವ ಸ್ವಗೃಹದಲ್ಲಿ ಧಾರ್ಮಿಕ‌ ವಿಧಿವಿಧಾನ ನಡೆಯಿತು.
  • 10 ಗಂಟೆಯ ಸುಮಾರಿಗೆ ರಾಮದುರ್ಗದ ಪಂಚಗಟ್ಟಿಮಠ ಶಾಲಾ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
  • ಸಂಜೆ ಆರು ಗಂಟೆಗಳ‌ವರೆಗೆ ಸಾವಿರಾರು ಜನರು, ಗಣ್ಯರು, ವಿದ್ಯಾರ್ಥಿಗಳು ಆಗಮಿಸಿ ಅಂತಿಮ‌ ದರ್ಶನ ಪಡೆದರು.
  • ಪೊಲೀಸರು‌ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು.
  • ಪಾರ್ಥಿವ ಶರೀರದ ಮೆರವಣಿಗೆ ಅಂತ್ಯಕ್ರಿಯೆ ನಡೆಯಲಿರುವ ಹಲಗತ್ತಿ ತೋಟದವರೆಗೆ ನಡೆಯಿತು.

ಇದಕ್ಕೂ ಮೊದಲು, ಮಹಾಂತೇಶ ಬೀಳಗಿ ಅವರ ಪಾರ್ಥಿವ ಶರೀರದ ಮೇಲೆ ಪುಷ್ಪಗುಚ್ಛ ಇಟ್ಟು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಗೌರವ ಸಮರ್ಪಿಸಿದರು. ಇದೇ ವೇಳೆ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು‌. ನಂತರ ಪಂಚಗಟ್ಟಿಮಠ ಶಾಲಾ‌ ಮೈದಾನದಿಂದ ಹಲಗತ್ತಿ ತೋಟದ ಮನೆವರೆಗೆ ಅಂತಿಮ ಯಾತ್ರೆ ನಡೆಯಿತು. ರಸ್ತೆಯ ಇಕ್ಕೆಲಗಳಲ್ಲಿ ಜನರು ನಿಂತು ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಮಹಾಂತೇಶ ಬೀಳಗಿ
Add as Preferred on Google Follow on Google News
Share. WhatsApp Facebook Twitter Telegram
Previous Articleಡಿ.ಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ವಾಟ್ಸ್​ಆ್ಯಪ್​​ ಸಂದೇಶ
Next Article ನಿಯಮಿತವಾಗಿ ಸೇವಿಸಿದರೆ ಶುಗರ್ ನಿಯಂತ್ರಣ ಸಾಧ್ಯ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026

ಶಿವಮೊಗ್ಗ-ತುಮಕೂರು ಚತುಷ್ಪಥ ಹೆದ್ದಾರಿ: 2027ರ ಮಾರ್ಚ್‌ಗೆ ಪೂರ್ಣ | ನಿತಿನ್ ಗಡ್ಕರಿ

August 1, 2026

ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?

July 29, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.