BREAKING NEWS
ಕೇವಲ 39 ಸೆಕೆಂಡುಗಳ ಅಂತರದಲ್ಲಿ 2 ಭೀಕರ ಭೂಕಂಪ: ವೆನೆಜುವೆಲಾದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿನ ಶಂಕೆ!   •   “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ   •   ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?   •   ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •  

—Advertisement—

ಕಾನೂನುಬದ್ಧ ಪತಿಗೆ ಮಾತ್ರವಲ್ಲ, ಲಿವ್‌-ಇನ್‌ ಸಂಬಂಧಕ್ಕೂ ಐಪಿಸಿ 498ಎ ಅನ್ವಯ: ಹೈಕೋರ್ಟ್‌

Author Picture
Published On: November 27, 2025

—Advertisement—

Updated By: Priyalachhi

ಬೆಂಗಳೂರು: ಐಪಿಸಿ 498ಎ (ವಿವಾಹಿತ ಮಹಿಳೆಯ ಮೇಲೆ ಕ್ರೌರ್ಯ ಮತ್ತು ಕಿರುಕುಳ) ಕಾನೂನುಬದ್ಧವಾಗಿ ವಿವಾಹವಾಗಿರುವ ಪತಿಗೆ ಮಾತ್ರ ಸೀಮಿತವಾಗದೆ, ಮದುವೆಯ ಗುಣಲಕ್ಷಣಗಳನ್ನು ಹೊಂದಿರುವ ಲಿವ್‌–ಇನ್‌(ಪುರುಷ-ಮಹಿಳೆ ವಿವಾಹವಾಗದೆ ಒಟ್ಟಿಗೆ ಇರುವುದು) ಸಂಬಂಧಗಳಿಗೂ ಅನ್ವಯವಾಗುತ್ತದೆ ಎಂದು ಹೈಕೋರ್ಟ್‌ ಇಂದು ಮಹತ್ವದ ಆದೇಶ ನೀಡಿತು.

ಮಹಿಳೆಯೊಬ್ಬರು(ಎರಡನೇ ಪತ್ನಿ) ದಾಖಲಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಶಿವಮೊಗ್ಗದ ಡಾ.ಬಿ.ಎಚ್‌.ಲೋಕೇಶ್‌ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಪೀಠ ಈ ಆದೇಶ ನೀಡಿದೆ.

ಈ ಪ್ರಕರಣದಲ್ಲಿ ಅರ್ಜಿದಾರರು ಮತ್ತು ದೂರುದಾರರು ವೈವಾಹಿಕವಾಗಿ ಒಂದಾಗುವಂತಹ ಎಲ್ಲ ಲಕ್ಷಣಗಳನ್ನು ಹೊಂದಿದ್ದು, ಒಟ್ಟಾಗಿ ನೆಲೆಸಿ, ಸಹಬಾಳ್ವೆಯಿಂದ ನಡೆದುಕೊಂಡು ಪತಿ-ಪತ್ನಿ ಎಂಬುದಾಗಿ ಗುರುತಿಸಿಕೊಂಡು ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸಿರುವುದು ಸ್ಪಷ್ಟವಾಗಿದೆ. ಹೀಗಾಗಿ ಪತಿ-ಪತ್ನಿಯ ಹೊಂದಾಣಿಕೆಯಂತೆ ತೋರುವ ಈ ಸಂಬಂಧಕ್ಕೂ ಕ್ರೌರ್ಯ ನೀಡಿರುವುದು ಸಾಬೀತಾದಲ್ಲಿ ಐಪಿಸಿ ಸೆಕ್ಷನ್ 498(ಎ) ಅಡಿ ರಕ್ಷಣೆ ದೊರೆಯಲಿದೆ. ಈ ರೀತಿಯ ಆರೋಪವಿರುವ ಪ್ರಕರಣಗಳಲ್ಲಿ ಕಾನೂನುಬದ್ದ ಪತಿ-ಪತ್ನಿಯ ಸಂಬಂಧ ಹೊಂದಿರಬೇಕು ಎಂಬ ಅವಶ್ಯಕತೆ ಇಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಆರೋಪಿಯಾಗಿರುವ ಅರ್ಜಿದಾರರು ದೂರುದಾರರನ್ನು ಮೊದಲನೇ ಮದುವೆಯಾದ ಬಳಿಕ ಎರಡನೇ ಮದುವೆಯಾಗಿ ದುರುದ್ದೇಶದಿಂದ ವರ್ತಿಸಿದ್ದಾರೆ. ಬಳಿಕ ಮದುವೆಯಾಗಿಲ್ಲ ಎಂಬ ಕಾರಣ ನೀಡಿ ತನ್ನ ತಪ್ಪಿನಿಂದ ನುಣುಚಿಕೊಳ್ಳುವುದಕ್ಕೆ ಮುಂದಾಗಿದ್ದು ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪೀಠ ತಿಳಿಸಿತು.

ಅರ್ಜಿದಾರರು ಈಗಾಗಲೇ ಮದುವೆಯಾಗಿ ಮಗುವನ್ನು ಹೊಂದಿದ್ದರೂ, ಈ ಅಂಶವನ್ನು ಮರೆಮಾಚಿ ದೂರುದಾರ ಮಹಿಳೆಯೊಂದಿಗೆ ನೆಲೆಸಿದ್ದಾರೆ. ದೂರುದಾರರ ಕುಟುಂಬದಿಂದ ಚಿನ್ನಾಭರಣ ಮತ್ತು ಹಣ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ. ದೂರುದಾರ ಮಹಿಳೆಗೆ ಮತ್ತಷ್ಟು ಹಣದ ಬೇಡಿಕೆಯಿಟ್ಟು ಕಿರುಕುಳ ನೀಡಿ ಹಿಂಸೆಗೆ ಒಳಪಡಿಸಲಾಗಿದೆ. ಇದೇ ಕಾರಣದಿಂದ ದೂರುದಾರರು ಆತ್ಮಹತ್ಯೆಗೂ ಯತ್ನಿಸಿದ್ದಾರೆ. ಈ ಅಂಶಗಳು ನ್ಯಾಯಪೀಠದ ಮುಂದಿರುವಾಗ ಅರ್ಜಿದಾರರು ದೂರುದಾರರನ್ನು ಕಾನೂನುಬದ್ಧವಾಗಿ ವಿವಾಹವಾಗಿಲ್ಲ ಎಂಬ ವಾದ ಅಂಗೀಕರಿಸಿದರೆ ಅದು ಅನ್ಯಾಯವಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಅರ್ಜಿದಾರ ಪತಿ ತನ್ನ ಮೊದಲ ಮದುವೆಯನ್ನು ಮರೆಮಾಚುವ ಮೂಲಕ ಮಹಿಳೆಯನ್ನು ವಂಚಿಸುವ ಮತ್ತು ಅನೂರ್ಜಿತ ವಿವಾಹಕ್ಕೆ ಒಳಪಡಿಸುವ ಪುರುಷನು ಸೆಕ್ಷನ್‌ 498ಎ ಅಡಿಯಲ್ಲಿ ಕ್ರಿಮಿನಲ್‌ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ಸಂದೇಶ ನೀಡುತ್ತದೆ. ಇದು ಕಾಯಿದೆಯ ಉದ್ದೇಶವನ್ನೇ ಕ್ಷೀಣಿಸುವುದಲ್ಲದೆ, ಅಮಾನ್ಯವಾಗಿರುವ ವೈವಾಹಿಕ ಸಂಬಂಧಗಳ ಸೋಗಿನಲ್ಲಿ ಮಹಿಳೆಯರ ವಂಚನೆ ಮತ್ತು ಶೋಷಣೆಯನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಅಂತಹ ಬೆಳವಣಿಗೆಗೆ ನ್ಯಾಯಾಲಯ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಪ್ರಕರಣದಲ್ಲಿ ದೂರುದಾರರು ಮತ್ತು ಅರ್ಜಿದಾರರ ಸಂಬಂಧ ಲಿವ್‌-ಇನ್‌ ಸಂಬಂಧವಿತ್ತು ಎಂಬ ವಾದ ಸಮರ್ಥನೀಯವಲ್ಲ. ಇಬ್ಬರ ಸಂಬಂಧ ಕಾನೂನುಬದ್ಧವಲ್ಲ ಎಂದರೂ, ಇಬ್ಬರೂ ಒಟ್ಟಾಗಿ ವಾಸಿಸುತ್ತಿದ್ದರು. ಮಹಿಳೆ ಕಿರುಕುಳಕ್ಕೆ ಒಳಗಾಗಿದ್ದಾರೆ. ಮೊದಲ ಮದುವೆ ಮರೆಮಾಚಿದ್ದರಿಂದ ದೂರುದಾರ ಮಹಿಳೆ ಕಾನೂನುಬದ್ಧವಾಗಿ ಮದುವೆ ಆಗಿದ್ದೇನೆ ಎಂಬ ನಂಬಿಕೆಯಲ್ಲಿದ್ದರು. ಅದರೆ, ಈ ಮದುವೆ ಅನೂರ್ಜಿತ ಎಂಬುದು ಪತಿಗೆ ಮಾತ್ರ ಗೊತ್ತಿರಲಿದೆ. ಆದರೆ, ಕ್ರೌರ್ಯದ ಆರೋಪವನ್ನು ಅನೂರ್ಜಿತ ಮದುವೆ ಎಂದು ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿರುವ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಆರೋಪದ ಸ್ವರೂಪ ಸೆಕ್ಷನ್‌ 498ಎ ಅಡಿಗೆ ಬರಲಿದೆ ಎಂದು ಪೀಠ ಹೇಳಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp