Updated By: Priyalachhi
ಬೆಂಗಳೂರು: 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಟ ಮತ್ತು ದೈಹಿಕ ಶಿಕ್ಷಣ ತರಗತಿಗಳಿಗೆ ವಿಷಯ ಶಿಕ್ಷಕರು ಅಡ್ಡಿಪಡಿಸದಂತೆ ನೋಡಿಕೊಳ್ಳಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ ಎಲ್ಲ ಪ್ರೌಢಶಾಲೆಗಳ ಶಿಕ್ಷಕರು ಮತ್ತು ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.
10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಟ ಮತ್ತು ದೈಹಿಕ ಶಿಕ್ಷಣದ ಕೊರತೆಯ ಬಗ್ಗೆ ಕೆಎಸ್ಸಿಪಿಸಿಆರ್ ಸದಸ್ಯರು ಪತ್ರ ಬರೆದ ನಂತರ ಶಿಕ್ಷಣ ಇಲಾಖೆಯಿಂದ ಈ ಸೂಚನೆಯನ್ನು ನೀಡಲಾಗಿದೆ.
ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ ಟಿ ತಿಪ್ಪೇಸ್ವಾಮಿ, “ಕಳೆದ ತಿಂಗಳು, ನಾನು ವಿವಿಧ ಶಾಲೆಗಳಿಗೆ ಭೇಟಿ ನೀಡಿ 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದೇನೆ. ಕ್ರೀಡಾ ಅವಧಿಯಲ್ಲಿ ಆಟವಾಡಲು ಅಥವಾ ದೈಹಿಕ ತರಗತಿಗಳನ್ನು ನಡೆಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಯೋಗಕ್ಕೆ ತಿಳಿಸಿದ್ದಾರೆ. ಈ ದೈಹಿಕ ಶಿಕ್ಷಣ ತರಗತಿಗಳನ್ನು ಹೆಚ್ಚುವರಿ ತರಗತಿಗಳನ್ನು ನಡೆಸಲು ಮತ್ತು ಅವರ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಇತರ ವಿಷಯದ ಶಿಕ್ಷಕರು ಬಳಸಿಕೊಳ್ಳುತ್ತಿರೆ” ಎಂದು ಹೇಳಿದ್ದಾರೆ.

