Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಉಡುಪಿ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್​ಗೆ ಅಭಿನವ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ನೀಡಿದ ಕೃಷ್ಣಮಠ
Politics Latest News

ಉಡುಪಿ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್​ಗೆ ಅಭಿನವ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ನೀಡಿದ ಕೃಷ್ಣಮಠ

Sambrama Prabha NewsBy Sambrama Prabha NewsDecember 8, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಉಡುಪಿ: ಖ್ಯಾತ ನಟ, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್​​ ಕಲ್ಯಾಣ್ ಅವರು​ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಸೋಮವಾರ ನಡೆದ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ರಥ ಬೀದಿಗೆ ಆಗಮಿಸಿ ಕನಕನ ಗುಡಿಗೆ ಮಾಲಾರ್ಪಣೆ ಮಾಡಿ ಕನಕನ ಕಿಂಡಿಯ ಮೂಲಕ ದೇವರ ದರ್ಶನ ಮಾಡಿದರು. ಬಳಿಕ ಅನಂತೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜಿ ಸಲ್ಲಿಸಿದರು. ಪರ್ಯಾಯ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು ಪವನ್ ಕಲ್ಯಾಣ್​ಗೆ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಮಾಡಿಸಿ, ಸುವರ್ಣತೀರ್ಥ ಮಂಟಪದಲ್ಲಿ ಪ್ರಸಾದ ನೀಡಿದರು. ಬಳಿಕ ಗೀತಾ ಮಂದಿರಕ್ಕೆ ತೆರಳಿದ ಡಿಸಿಎಂ, ಧ್ಯಾನ ಮಂದಿರದ ಅನಂತಪದ್ಮನಾಭ ಸ್ವಾಮಿ ಮೂರ್ತಿ ದರ್ಶನ ಮಾಡಿಸಿದರು.

ಸಂಜೆ ಮಠದ ರಾಜಾಂಗಣದಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಪರ್ಯಾಯ ಮಠದ ವತಿಯಿಂದ ಅಭಿನವ ಶ್ರೀ ಕೃಷ್ಣದೇವರಾಯ ಪ್ರಶಸ್ತಿಯನ್ನು ಪವನ್ ಕಲ್ಯಾಣ್​ಗೆ ನೀಡಿ ಗೌರವಿಸಲಾಯಿತು. ಧರ್ಮರಕ್ಷಣೆಯ ಕಾರ್ಯವನ್ನು ಮಾಡುತ್ತಿರುವುದರಿಂದ ಈ ಬಿರುದು ನೀಡುತ್ತಿದ್ದೇವೆ ಎಂದು ಸ್ವಾಮೀಜಿ ಆಶೀರ್ವಚನದಲ್ಲಿ ಹೇಳಿದರು.

ಯುದ್ಧಕಾಲಕ್ಕೆ ಭಗವದ್ಗೀತೆಯೆ ಪರಿಹಾರ: “ಯುವ ಜನರ ಒತ್ತಡ ಪರಿಹಾರಕ್ಕೆ ಭಗವದ್ಗೀತೆಯೇ ಏಕೈಕ ಮಾರ್ಗ. ಗೋವು ರಕ್ಷಣೆ ವಿಚಾರದಲ್ಲಿ ಅನ್ಯ ಧರ್ಮವನ್ನು ದೂರುವ ಬದಲು, ಪ್ರತಿ ಕುಟುಂಬ ಒಂದು ಗೋವನ್ನು ಸಾಕಿ ಎಂದು ಪವನ್ ಕಲ್ಯಾಣ್ ಕರೆ ನೀಡಿದರು.

ರಾಜಕೀಯದಲ್ಲಿ ಸೋಲು ಗೆಲುವು ನನಗೆ ಮುಖ್ಯ ಅಲ್ಲ. ಯಾಕಂದ್ರೆ ಭಗವದ್ಗೀತೆ ನಿಷ್ಕಾಮ ಕರ್ಮವನ್ನು ನನಗೆ ಬೋಧಿಸಿದೆ. ರಷ್ಯಾ ಅಧ್ಯಕ್ಷ ಪುಟಿನ್​ಗೆ ಪ್ರಧಾನಿ ಮೋದಿ ಭಗವದ್ಗೀತೆಯನ್ನು ನೀಡಿದ್ದಾರೆ. ಯುದ್ಧಕಾಲಕ್ಕೆ ಇದೇ ಪರಿಹಾರ” ಎಂದರು.

ಡಿ.13ಕ್ಕೆ ವಿಶ್ವಶಾಂತಿ ಸಮಾವೇಶ: ಡಿ.6 ರಂದು ಗೀತಾ ಮಂದಿರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಶ್ರೀಸುಗುಣೇಂದ್ರ ತೀರ್ಥ ಶ್ರೀಗಳು, “ವಿಶ್ವಗೀತಾ ಪರ್ಯಾಯ ಮಹೋತ್ಸವದ ಅಂಗವಾಗಿ ಡಿ.13ರಂದು ರಾಜಾಂಗಣದಲ್ಲಿ ವಿಶ್ವಶಾಂತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ಅಮೆರಿಕದ ವರ್ಲ್ಡ್ ರಿಲೀಜಿಯಸ್ ಫಾರ್ ಪೀಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ವಿಲಿಯಂ ಎಫ್. ವಿಂಡ್ಲೆ, ಒನ್ ವರ್ಲ್ಡ್ ಒನ್ ಫ್ಯಾಮಿಲಿ ಸಂಸ್ಥಾಪಕ ಸದ್ಗುರು ಶ್ರೀಮಧುಸೂದನ ಸಾಯಿ ಹಾಗೂ ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ” ಎಂದು ತಿಳಿಸಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಪವನ್ ಕಲ್ಯಾಣ್ ಶ್ರೀ ಕೃಷ್ಣದೇವರಾಯ ಪ್ರಶಸ್ತಿ
Add as Preferred on Google Follow on Google News
Share. WhatsApp Facebook Twitter Telegram
Previous Articleಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ: ಡಿ.ಕೆ. ಸುರೇಶ್
Next Article ಕೆಎಸ್‌ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಬಣಕ್ಕೆ ಭರ್ಜರಿ ಜಯ, 12 ವರ್ಷಗಳ ಬಳಿಕ ಆಡಳಿತಕ್ಕೆ ಮರಳಿದ ಟೀಂ‌ ಇಂಡಿಯಾ ಮಾಜಿ ವೇಗಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

September 2, 2026

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

September 2, 2026

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

August 31, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.