ಎಸ್ಸಿಒ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಗೆ ಭಾರತದ ಆತಿಥ್ಯ
ಭಾರತವು ಇಂದು ಶಾಂಘೈ ಸಹಕಾರ ಒಕ್ಕೂಟ(SCO)ದ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯನ್ನು ಆಯೋಜಿಸಲಿದೆ. ಪಾಕಿಸ್ತಾನ ಮತ್ತು ಚೀನಾದ ಪ್ರತಿನಿಧಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಬಿಜೆಪಿ ಕೇಂದ್ರ ಕಚೇರಿಯ ವಿಸ್ತರಿತ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಚೇರಿಯ ವಿಸ್ತರಿತ ಕಟ್ಟಡವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ವೇಳೆ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣಕ್ಕೆ ಬಿಜೆಪಿ ಅವಶ್ಯ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.
ಚೀನಾ ಗುಮ್ಮ: ರಕ್ಷಣಾ ಬಜೆಟ್ ಗಾತ್ರ ಹೆಚ್ಚಳಕ್ಕೆ ಮುಂದಾದ ಅಮೆರಿಕ
ಚೀನಾದೊಂದಿಗಿನ ತೀವ್ರ ಸ್ಪರ್ಧೆಯ ಹಿನ್ನೆಲೆಯಲ್ಲಿ, ಅಮೆರಿಕವು ತನ್ನ ರಕ್ಷಣಾ ಬಜೆಟ್ ಗಾತ್ರವನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್, ಬರೋಬ್ಬರಿ 842 ಶತಕೋಟಿ ಅಮೆರಿಕನ್ ಡಾಲರ್ ಬಜೆಟ್ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂಗ್ಲೆಂಡ್ ಭೇಟಿಗೆ ಸಜ್ಜಾದ ಬೈಡನ್: ಭಯೋತ್ಪಾದಕ ದಾಳಿ ಬೆದರಿಕೆ ತೀವ್ರ!
ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಇಂಗ್ಲೆಂಡ್ಗೆ ಭೇಟಿ ನೀಡಲಿದ್ದು, ಇದಕ್ಕೂ ಮೊದಲೇ ಉತ್ತರ ಐರ್ಲೆಂಡ್ನಲ್ಲಿ ಭಯೋತ್ಪಾದಕ ದಾಳಿಯ ಬೆದರಿಕೆ ಹೆಚ್ಚಾಗಿದೆ. ಬೈಡನ್ ಭೇಟಿ ಸಂದರ್ಭದಲ್ಲಿ ಭಯೋತ್ಪಾದಕ ದಾಳಿಗಳು ನಡೆಯಬಹುದು ಎಂದು ಗುಪ್ತಚರ ಮೂಲಗಳು ಎಚ್ಚರಿಕೆ ನೀಡಿವೆ.
ಸಿಎಂ ಬೊಮ್ಮಾಯಿ ಆಪ್ತ ಮಂಜುನಾಥ್ ಕುನ್ನೂರ ಕಾಂಗ್ರೆಸ್ ಸೇರ್ಪಡೆ!
ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಂಸದ, ಹಾವೇರಿ ಜಿಲ್ಲೆ ಶಿಗ್ಗಾವ್ ನ ಬಿಜೆಪಿ ಮುಖಂಡ ಹಾಗೈ ಸಿಎಂ ಬಸವರಾಜ ಬೊಮ್ಮಾಯಿ ಅವರ ಆಪ್ತ ಮಂಜುನಾಥ್ ಕುನ್ನೂರ ಹಾಗೂ ಅವರ ಪುತ್ರ ರಾಜು ಕುನ್ನೂರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅದೇ ರೀತಿ ಕೆ.ಆರ್. ಪೇಟೆಯ ಜೆಡಿಸ್ ನಾಯಕ ದೇವರಾಜ್, ಶಿವಮೊಗ್ಗದ ಬಿಜೆಪಿ ಮುಖಂಡ ಅರುಣ್ ಕೂಡ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ.