ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

0
60

Updated By: Priyalachhi

ಬೆಳಗಾವಿ: ರಾಜ್ಯ ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಗಳನ್ನು ನಡೆಸಲು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.

ಗುರುವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಲು ಕೆಲ ಷರತ್ತುಗಳ ಅನ್ವಯ ಅನುಮತಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಜನಾಭಿಪ್ರಾಯ ಸಂಗ್ರಹದ ಜೊತೆಗೆಯಲ್ಲಿ ನಿಯಮಗಳನ್ನು ರೂಪಿಸಲು ಗೃಹ ಸಚಿವರಿಗೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಕಾಲ್ತುಳಿತ ದುರಂತ ಬಳಿಕ ಸ್ಟೇಡಿಯಂನಲ್ಲಿ ಪಂದ್ಯಗಳು ನಡೆದಿರಲಿಲ್ಲ. ಆದರೆ, ಇದೀಗ ನಿವೃತ್ತ ನ್ಯಾ. ಮೈಕಲ್‌ ಡಿ ಕುನ್ಹಾ ವರದಿ ಆಧರಿಸಿ ಷರತ್ತುಗಳ ಅನ್ವ. ಕ್ರಿಕೆಟ್‌ ಪಂದ್ಯಗಳನ್ನು ಆಡಿಸಲು ಸರ್ಕಾರ ಅನುಮತಿ ನೀಡಿದ್ದು, ಭದ್ರತೆ ಜವಾಬ್ದಾರಿಯನ್ನು ಗೃಹ ಇಲಾಖೆಗೆ ನೀಡಲಾಗಿದೆ.

sambrama prabha editor suresh kt

LEAVE A REPLY

Please enter your comment!
Please enter your name here