Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಬಿಹಾರ ಚುನಾವಣಾ ಫಲಿತಾಂಶವು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಬಾಗಿಲು ತೆರೆದಿದೆ: ಪ್ರಧಾನಿ ಮೋದಿ
Nation News

ಬಿಹಾರ ಚುನಾವಣಾ ಫಲಿತಾಂಶವು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಬಾಗಿಲು ತೆರೆದಿದೆ: ಪ್ರಧಾನಿ ಮೋದಿ

Sambrama Prabha NewsBy Sambrama Prabha NewsDecember 20, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದಂತೆ, 2026ರಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಿನ ಬಾಗಿಲು ತೆರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ವರ್ಚುಯಲ್ ಮೋಡ್‌ನಲ್ಲಿ ತಾಹೆರ್‌ಪುರ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪ್ರತಿಕೂಲ ಹವಾಮಾನದಿಂದಾಗಿ ಕಾರ್ಯಕ್ರಮ ನಡೆಯುತ್ತಿರುವ ಸ್ಥಳಕ್ಕೆ ತಲುಪಲು ಸಾಧ್ಯವಾಗದಿದ್ದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ಗೋಚರತೆ ಕಡಿಮೆ ಇದ್ದ ಕಾರಣ, ಹೆಲಿಕಾಪ್ಟರ್ ತಾಹೆರ್‌ಪುರದ ತಾತ್ಕಾಲಿಕ ಹೆಲಿಪ್ಯಾಡ್ ಮೈದಾನದ ಮೇಲೆ ಸ್ವಲ್ಪ ಹೊತ್ತು ಹಾರಾಟ ಮಾಡಿ ನಂತರ ಯು – ಟರ್ನ್ ತೆಗೆದುಕೊಂಡು ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಮರಳಿತು ಎಂದು ಹೇಳಿದರು.

ಬಂಗಾಳದ ಹಿಂದುಳಿದ ಪ್ರದೇಶಗಳಿಗೆ ಆಧುನಿಕ ಸಂಪರ್ಕವನ್ನು ಖಚಿತಪಡಿಸುವುದು ನಮ್ಮ ಪ್ರಯತ್ನಗಳ ಗುರಿಯಾಗಿದೆ. ಟಿಎಂಸಿ ನನ್ನನ್ನು ಮತ್ತು ಬಿಜೆಪಿಯನ್ನು ಎಷ್ಟು ಬೇಕಾದರೂ ವಿರೋಧಿಸಬಹುದು, ಆದರೆ ಬಂಗಾಳದ ಪ್ರಗತಿಯನ್ನು ನಿಲ್ಲಿಸಬಾರದು ಎಂದ ಪ್ರಧಾನಿ, ಬಂಗಾಳದಲ್ಲಿ ನುಸುಳುಕೋರರು ಟಿಎಂಸಿಯ ಆಶ್ರಯವನ್ನು ಆನಂದಿಸುತ್ತಿದ್ದಾರೆ. ಒಳನುಸುಳುಕೋರರನ್ನು ಗುರುತಿಸದಂತೆ ರಕ್ಷಿಸಲು ಟಿಎಂಸಿ ಬಂಗಾಳದಲ್ಲಿ ಎಸ್‌ಐಆರ್ ವಿರೋಧಿಸುತ್ತಿದೆ ಎಂದು ಆರೋಪಿಸಿದರು.

ಬಂಗಾಳವನ್ನು ಅಭಿವೃದ್ಧಿ ಮಾಡಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ. ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಿ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣ ರಾಜಕೀಯವು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಮತ್ತು ಬಂಗಾಳದಲ್ಲಿ ಟಿಎಂಸಿಯ ಮಹಾ ಜಂಗಲ್ ರಾಜ್ ಅನ್ನು ಬಿಜೆಪಿ ಕೊನೆಗೊಳಿಸುತ್ತದೆ ಎಂದು ಹೇಳಿದರು.

ಎಡ ಪಕ್ಷದ ಆಡಳಿತವು ತನ್ನ ಮೂರು ದಶಕಗಳ ಆಳ್ವಿಕೆಯಲ್ಲಿ ತ್ರಿಪುರವನ್ನು ನಾಶಮಾಡಿತ್ತು. ಬಿಜೆಪಿಯನ್ನು ಅಧಿಕಾರಕ್ಕೆ ತಂದ ನಂತರ ರಾಜ್ಯವು ಈಗ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ಬಿಜೆಪಿ ಆಡಳಿತದ ತ್ರಿಪುರಕ್ಕೆ ಹೋಲಿಸಿದರೆ ಬಂಗಾಳವು ಅಭಿವೃದ್ಧಿ ಗ್ರಾಫ್‌ನಲ್ಲಿ ಹಿಂದುಳಿದಿದೆ, ಅದು ಹೀಗೆ ಮಂದುವರಿಯುತ್ತದೆ ಎಂದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಪ್ರಧಾನಿ ಮೋದಿ
Add as Preferred on Google Follow on Google News
Share. WhatsApp Facebook Twitter Telegram
Previous Articleಜಾಗತಿಕ ಕಥೆಗಾರರ ಕ್ರಾಂತಿಗೆ ನಾಂದಿ ಹಾಡಿದ ಪ್ರಭಾಸ್
Next Article ಉತ್ತರ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026

ಶಿವಮೊಗ್ಗ-ತುಮಕೂರು ಚತುಷ್ಪಥ ಹೆದ್ದಾರಿ: 2027ರ ಮಾರ್ಚ್‌ಗೆ ಪೂರ್ಣ | ನಿತಿನ್ ಗಡ್ಕರಿ

August 1, 2026

ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?

July 29, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.