• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು

Sambrama Prabha News by Sambrama Prabha News
January 7, 2026
in Politics
0
ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು

Updated By: Priyalachhi 

ಬೆಂಗಳೂರು: ಬಳ್ಳಾರಿ ಗುಂಡಿನ ದಾಳಿಯಲ್ಲಿ ಸಾವಿಗೀಡಾದ ಕಾರ್ಯಕರ್ತನಿಗೆ 25ಲಕ್ಷ ರೂ ನಗದು ಪರಿಹಾರ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಹೊಸ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ದೂರು ದಾಖಲಾಗಿದೆ.

ಹೌದು.. ರಾಜ್ಯದ ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದ್ದು, ಹಿಂದೂ ಸಂಘಟನೆಗಳ ಮುಖಂಡ ತೇಜಸ್ ಗೌಡ ಆದಾಯ ತೆರಿಗೆ ಇಲಾಖೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಜನವರಿ 1 ರಂದು ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಹತ್ಯೆಯಾದ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರದ ಹಣವನ್ನು ವಿತರಿಸಿದ್ದರು. 25 ಲಕ್ಷ ರೂಪಾಯಿ ಹಣವನ್ನು ಬಟ್ಟೆ ಬ್ಯಾಗ್ ನಲ್ಲಿ ಮುಚ್ಚಿ ರಾಜಶೇಖರ್ ರೆಡ್ಡಿ ಅವರ ತಾಯಿಗೆ ನೀಡಿದ್ದರು. ಇದೀಗ ಇದೇ ಹಣ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಸಂಕಷ್ಟ ತಂದೊಡ್ಡಿದೆ.

ಮೂಲಗಳ ಪ್ರಕಾರ ಆದಾಯ ತೆರಿಗೆ ನಿಯಮಾವಳಿಗಳಂತೆ 2 ಲಕ್ಷ ರೂಗಿಂತ ಹೆಚ್ಚಿನ ನಗದನ್ನು ಯಾವುದೇ ರೂಪದಲ್ಲಿ ನೀಡುವಂತಿಲ್ಲ. ಆದಾಗ್ಯೂ ಓರ್ವ ಜನಪ್ರತಿನಿಧಿಯಾಗಿ 25ಲಕ್ಷ ರೂ ನಗದನ್ನು ಪರಿಹಾರವಾಗಿ ನೀಡಿರುವುದನ್ನು ಪ್ರಶ್ನಿಸಿ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲಿಸಲಾಗಿದೆ.

Tags: ಸಚಿವ ಜಮೀರ್ ಅಹ್ಮದ್
Previous Post

ಬುಧವಾರದ ಪಂಚಾಂಗ, ರಾಶಿಭವಿಷ್ಯ

Next Post

ಬಿಡಿಎ ಅಂದ್ರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕ ತೆಗೆದುಹಾಕಿ, ಕಾನೂನು ಚೌಕಟ್ಟಲ್ಲಿ ಕೆಲಸ ಮಾಡಿ: ಡಿಕೆಶಿ

Next Post
ಬಿಡಿಎ ಅಂದ್ರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕ ತೆಗೆದುಹಾಕಿ, ಕಾನೂನು ಚೌಕಟ್ಟಲ್ಲಿ ಕೆಲಸ ಮಾಡಿ: ಡಿಕೆಶಿ

ಬಿಡಿಎ ಅಂದ್ರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕ ತೆಗೆದುಹಾಕಿ, ಕಾನೂನು ಚೌಕಟ್ಟಲ್ಲಿ ಕೆಲಸ ಮಾಡಿ: ಡಿಕೆಶಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.