• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸಂತ್ರಸ್ತರ ಪೈಕಿ ಸ್ಥಳೀಯರು ಹಾಗೂ ಕರ್ನಾಟಕದವರಿಗೆ ಮಾತ್ರ ಮನೆ ಕೊಡುತ್ತೇವೆ: ಸಚಿವ ಜಮೀರ್ ಅಹಮದ್ ಖಾನ್

Sambrama Prabha News by Sambrama Prabha News
January 9, 2026
in Politics
0
ಸಂತ್ರಸ್ತರ ಪೈಕಿ ಸ್ಥಳೀಯರು ಹಾಗೂ ಕರ್ನಾಟಕದವರಿಗೆ ಮಾತ್ರ ಮನೆ ಕೊಡುತ್ತೇವೆ: ಸಚಿವ ಜಮೀರ್ ಅಹಮದ್ ಖಾನ್

Updated By: Priyalachhi 

ಬೆಂಗಳೂರು: ಕೋಗಿಲು ಬಡಾವಣೆ ತೆರವು ಪ್ರಕರಣದಲ್ಲಿ ಸಂತ್ರಸ್ತರಾದ 161 ಕುಟುಂಬಗಳ ಪೈಕಿ ಕೇವಲ 26 ಮಂದಿಗಷ್ಟೇ ಪರ್ಯಾಯವಾಗಿ ಮನೆ ನೀಡಲು ನಿರ್ಧಾರ ಮಾಡಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಈ ಕುರಿತಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾಹಿತಿ ನೀಡಿದ್ದು, 26 ಮಂದಿಯ ದಾಖಲೆ ಪರಿಶೀಲನೆ ನಡೆಸಲಾಗಿದೆ. ಕೋಗಿಲು ಸಂತ್ರಸ್ತರಿಗೆ ಮನೆ ನೀಡುವ ವಿಚಾರವಾಗಿ ಸಚಿವ ಕೃಷ್ಣಬೈರೇಗೌಡರು ನನಗೆ ಕರೆ ಮಾಡಿದ್ದರು. 26 ಜನರ ದಾಖಲೆ ಪರಿಶೀಲನೆ ಮುಗಿದಿದೆ ಎಂದು ಹೇಳಿದ್ದಾರೆ ಎಂದರು.

ಕೋಗಿಲು ಸಂತ್ರಸ್ತರ ದಾಖಲೆಗಳನ್ನು ಇನ್ನು ಪರಿಶೀಲನೆ ನಡೆಸಲಾಗುತ್ತಿದೆ. ಒಟ್ಟು 261 ಮನೆಗಳ ಪೈಕಿ 161 ಮನೆಗಳನ್ನು ತೆರವು ಮಾಡಲಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅರ್ಜಿಗಳು ಜಾಸ್ತಿ ಬಂದಿವೆ. ಆದರೆ ಅವರಿಗೆಲ್ಲ ಮನೆಗಳು ಕೊಡಲು ಆಗುವುದಿಲ್ಲ. ಯಾರ ಮನೆಗಳನ್ನು ತೆರವು ಮಾಡಲಾಗಿದೆ ಅವರನ್ನು ಪರಿಗಣಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನ ಮಾಡಿದ್ದಾರೆ. ಸಂತ್ರಸ್ತರ ಪೈಕಿ ಸ್ಥಳೀಯರು ಹಾಗೂ ಕರ್ನಾಟಕದವರಿಗೆ ಮಾತ್ರ ಮನೆ ಕೊಡುತ್ತೇವೆ. ಅವರು ಐದು ವರ್ಷಗಳ ಕಾಲ ಬೆಂಗಳೂರು ನಿವಾಸಿಗಳು ಆಗಿರಬೇಕು ಎಂದು ತಿಳಿಸಿದರು.

Tags: ಸಚಿವ ಜಮೀರ್ ಅಹಮದ್ ಖಾನ್
Previous Post

ಕೇರಳ ರಾಜ್ಯದಲ್ಲಿ ಮಲೆಯಾಳಿ ಭಾಷೆಯನ್ನು ಉಳಿಸುವ ಸ್ವಾತಂತ್ರ್ಯ ಅಲ್ಲಿನ ರಾಜ್ಯ ಸರ್ಕಾರಕ್ಕೆ ಇದೆ: ಸಿಎಂ

Next Post

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ: ಸಿಎಂ ಸಿದ್ದರಾಮಯ್ಯ

Next Post
ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ: ಸಿಎಂ ಸಿದ್ದರಾಮಯ್ಯ

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.