Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಶಬರಿಮಲೆಗೆ ತೆರಳುವ ರಾಜ್ಯದ ಭಕ್ತರಿಗಾಗಿ ಮುಜರಾಯಿ ಇಲಾಖೆ ಸಹಾಯವಾಣಿ ಕೇಂದ್ರ ತೆರೆದಿದೆ
Special News Latest News

ಶಬರಿಮಲೆಗೆ ತೆರಳುವ ರಾಜ್ಯದ ಭಕ್ತರಿಗಾಗಿ ಮುಜರಾಯಿ ಇಲಾಖೆ ಸಹಾಯವಾಣಿ ಕೇಂದ್ರ ತೆರೆದಿದೆ

Sambrama Prabha NewsBy Sambrama Prabha NewsJanuary 15, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಕೇರಳದ ಪ್ರಸಿದ್ಧ ಯಾತ್ರಾ ಕ್ಷೇತ್ರ ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರವನ್ನು ಕರ್ನಾಟಕ ಸರ್ಕಾರ ತೆರೆದಿದೆ. ವಿಶೇಷ ಮಾಹಿತಿ ಮತ್ತು ತುರ್ತು ಸಂದರ್ಭಗಳಲ್ಲಿ ಇದು ನೆರವಿಗೆ ಬರಲಿದೆ.

ಶಬರಿಮಲೆಯಲ್ಲಿ ನಡೆಯುವ ಮಂಡಲ ಪೂಜೆ ಮತ್ತು ಮಕರವಿಳಕ್ಕು ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಹೆಚ್ಚಿನ ಭಕ್ತರು ಯಾತ್ರೆ ಕೈಗೊಳ್ಳುತ್ತಾರೆ. ಈ ಕಾರಣದಿಂದಾಗಿ ಯಾತ್ರಾರ್ಥಿಗಳಿಗೆ ಸೂಕ್ತ ಸಹಕಾರ ನೀಡಲು ಮತ್ತು ಮಾಹಿತಿ ಒದಗಿಸಲು ಸಹಾಯವಾಣಿ ಕೇಂದ್ರವನ್ನು ಮುಜರಾಯಿ ಇಲಾಖೆ ಆರಂಭಿಸಿದೆ. ಜ.14ರಿಂದ 19ರ ತನಕ ಸಹಾಯವಾಣಿ ಕೇಂದ್ರ ಕೆಲಸ ಮಾಡಲಿದೆ.

ಬೆಂಗಳೂರಿನ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಂ.ಮೋಹನ್ ಕುಮಾರ್, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಚೇರಿ ಅಧೀಕ್ಷಕ ಕೆ.ಎಂ.ಗೋಪಿನಾಥ್ ನಂಬೀಶ, ಕುಕ್ಕೆ ದೇವಳದ ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್ ಅವರನ್ನು ಸಹಾಯವಾಣಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಲು ಮುಜರಾಯಿ ಇಲಾಖೆ ನಿಯೋಜಿಸಿದೆ.

ಸಂಕ್ರಾತಿ ವೇಳೆ ಅತ್ಯಧಿಕ ಸಂಖ್ಯೆಯಲ್ಲಿ ಕರ್ನಾಟದ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳುವ ಕಾರಣ ತುರ್ತು ಸಂದರ್ಭದಲ್ಲಿ ಸಹಾಯವಾಣಿ ಕೇಂದ್ರ ಸಹಕಾರ ನೀಡಲಿದೆ. ಭಕ್ತರು ಅಗತ್ಯಬಿದ್ದಲ್ಲಿ ಶಬರಿಮಲೆಯ ಈ ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸಬಹುದು.

ಸಹಾಯವಾಣಿ ವಿವರ:

ಎಂ.ಮೋಹನ್ ಕುಮಾರ್ – 9880055733

ಕೆ.ಎಂ.ಗೋಪಿನಾಥನ್ – 9448437831

ಪ್ರಮೋದ್ ಕುಮಾರ್ ಎಸ್ – 9448529841

ಶಬರಿಮಲೆಯಲ್ಲಿ ಮಕರ ಜ್ಯೋತಿ ರೂಪದಲ್ಲಿ ಭಗವಾನ್ ಅಯ್ಯಪ್ಪಸ್ವಾಮಿ ತನ್ನ ಭಕ್ತರಿಗೆ ಬುಧವಾರ ಕಾಣಿಸಿಕೊಂಡರು. ಮಕರ ಜ್ಯೋತಿ ದರ್ಶನ ಪಡೆದ ಭಕ್ತರು, ಮಣಿಕಂಠನ ಜಪಿಸಿ ಭಕ್ತಿ ಸಮರ್ಪಿಸಿದರು.

ಭಕ್ತರಿಗೆ ವಿಶೇಷ ವ್ಯವಸ್ಥೆ: ಮಂಡಲ ಪೂಜೆಯ ಸಮಯದಲ್ಲಿ ಶಬರಿಮಲೆ ಅಯ್ಯಪ್ಪ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ಬಿಸ್ಕತ್ತು ಮತ್ತು ಕುಡಿಯುವ ನೀರು ಸೌಲಭ್ಯ ಮಾಡಲಾಗಿತ್ತು. ಮಕ್ಕಳು ಮತ್ತು ಮಹಿಳೆಯರಿಗೆ ವಿಶೇಷ ಸರತಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಳ್ಳರಿಂದ ಭಕ್ತರನ್ನು ರಕ್ಷಿಸಲು ವಿಶೇಷ ಮೇಲ್ವಿಚಾರಣಾ ವ್ಯವಸ್ಥೆ ಕೂಡಾ ಮಾಡಲಾಗಿತ್ತು. ಅನ್ನದಾನ ಮಂಟಪದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಶಬರಿಮಲೆ ಬೆಟ್ಟ ಹತ್ತುವಾಗ ಸ್ನಾಯು ನೋವಿನಿಂದ ಬಳಲುತ್ತಿರುವ ಯಾತ್ರಾರ್ಥಿಗಳಿಗೆ ಸಹಾಯ ಮಾಡಲು ಸನ್ನಿದಾನದಲ್ಲಿ 24 ಗಂಟೆಗಳ ಉಚಿತ ಫಿಜಿಯೋಥೆರಪಿ ಚಿಕಿತ್ಸಾ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಪಂಬಾ ಮತ್ತು ಸನ್ನಿದಾನದಲ್ಲಿ ಆಫ್-ರೋಡ್ ಆಂಬ್ಯುಲೆನ್ಸ್‌ಗಳು 24 ಗಂಟೆಗಳ ಕಾಲ ಸೇವೆ ನೀಡುತ್ತಿವೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಶಬರಿಮಲೆಗೆ
Add as Preferred on Google Follow on Google News
Share. WhatsApp Facebook Twitter Telegram
Previous Articleರಾಹುಲ್ ಭೇಟಿಯ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳಬೇಡಿ: DKS
Next Article ಯಾವುದೇ ಪಕ್ಷಕ್ಕೆ ಕೇವಲ ಮತಬ್ಯಾಂಕ್ ಆಗಲು ಇಷ್ಟಪಡಲ್ಲ ‘ಬಸವ ಶಕ್ತಿ ಸಮಾವೇಶ’
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

September 2, 2026

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

August 31, 2026

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

August 29, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.