ವರದಿ: ಪ್ರಿಯಲಚ್ಛಿ
ಈಗಾಗಲೇ ನಿರ್ನಾಮವಾಗಿ ಹೋಗಿರುವ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುವುದಾಗಿ ಹೇಳುವ ಮೂಲಕ ಕರ್ನಾಟಕದ ಭವಿಷ್ಯವನ್ನೇ ನಿರ್ನಾಮ ಮಾಡಲು ನಿರ್ಧರಿಸಿದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಆ ಪಕ್ಷಕ್ಕೆ ಠೇವಣಿ ಸಿಗದಂತೆ ನೋಡಿಕೊಂಡು, ಬೇರುಸಮೇತ ಕಿತ್ತೊಗೆಯಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಮಂಗಳವಾರ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವರು ಉತ್ತರಿಸಿದರು.