BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

, ,

ಯಶ್ ಅನ್ನು ರಾವಣನ ಪಾತ್ರಕ್ಕೆ ಆರಿಸಿದ್ದೇಕೆ?

Author Picture
Published On: November 1, 2025

—Advertisement—

ವರದಿ: ಪ್ರಿಯಲಚ್ಚಿ

ಸದ್ಗುರು ಮತ್ತು ಯಶ್: ಸಿನಿಮಾ ಭಾರತದ ಅತ್ಯಂತ ದೊಡ್ಡ ಬಜೆಟ್​​ನ ಸಿನಿಮಾ ಆಗಿದೆ. ಸುಮಾರು ಎರಡು ವರ್ಷಗಳಿಂದಲೂ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾನಲ್ಲಿ ರಣ್​ಬೀರ್ ಕಪೂರ್ ರಾಮ, ಸಾಯಿ ಪಲ್ಲವಿ ಸೀತೆಯಾಗಿ ನಟಿಸಿದ್ದಾರೆ. ನಟ ಯಶ್ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಅನ್ನು ಹಾಲಿವುಡ್​​ನನ ಟಾಪ್ ಸ್ಟುಡಿಯೋದ ಮಾಲೀಕ ನಮಿತ್ ಮಲ್ಹೋತ್ರಾ ಮತ್ತು ಯಶ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಯಶ್ ಅವರಿಗೆ ಆಪ್ತರೂ ಆಗಿರುವ ಸದ್ಗುರು ಅವರು ಯಶ್ ಅವರನ್ನು ರಾವಣನ ಪಾತ್ರಕ್ಕೆ ಆಯ್ಕೆ ಮಾಡಿರುವ ಬಗ್ಗೆ ತಕರಾರು ವ್ಯಕ್ತಪಡಿಸಿದ್ದಾರೆ.

ಸದ್ಗುರು ಅವರು ಜನಪ್ರಿಯ ವ್ಯಕ್ತಿಗಳೊಡನೆ ಸಂವಾದ ನಡೆಸುತ್ತಿರುತ್ತಾರೆ. ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಿರುತ್ತಾರೆ. ಇದೀಗ ‘ರಾಮಾಯಣ’ ನಿರ್ಮಾಪಕ ನಮಿತ್ ಮಲ್ಹೋತ್ರಾ ಜೊತೆಗೆ ಸಂವಾದ ನಡೆಸಿದರು. ಈ ವೇಳೆ ಸದ್ಗುರು ಅವರು ಯಶ್ ಅವರನ್ನು ರಾವಣನ ಪಾತ್ರಕ್ಕೆ ಆಯ್ಕೆ ಮಾಡಿರುವ ಬಗ್ಗೆ ತಕರಾರು ವ್ಯಕ್ತಪಡಿಸಿದರು.

‘ಯಶ್ ನನಗೆ ಚೆನ್ನಾಗಿ ಪರಿಚಿತರು, ಅವರು ಅದು ಹೇಗೆ ರಾವಣನ ಪಾತ್ರ ಒಪ್ಪಿದರು ಗೊತ್ತಿಲ್ಲ. ಅವರು ಅದ್ಭುತ ವ್ಯಕ್ತಿ. ಯಶ್ ಬಹಳ ಸ್ಪುರದ್ರೂಪಿ ನಟ. ಅವರನ್ನು ರಾವಣನ ಪಾತ್ರಕ್ಕೆ ಹೇಗೆ ಆಯ್ಕೆ ಮಾಡಿದಿರಿ?’ ಎಂದು ಸದ್ಗುರು ನಮಿತ್ ಅವರನ್ನು ಪ್ರಶ್ನೆ ಮಾಡಿದರು. ಸದ್ಗುರು ಪ್ರಶ್ನೆಗೆ ಉತ್ತರಿಸಿದ ನಮಿತ್ ‘ನಾವು ಸೂಪರ್ ಸ್ಟಾರ್ ಲೆವೆಲ್​​ನ ನಟನೇ ರಾವಣನ ಪಾತ್ರದಲ್ಲಿ ನಟಿಸಬೇಕು ಎಂದು ಹುಡುಕುತ್ತಿದ್ದೆವು, ಯಶ್ ಹ್ಯಾಂಡ್ಸಮ್ ನಟ ಜೊತೆಗೆ ಅವರು ಅದ್ಭುತವಾದ ಪ್ರತಿಭೆಯುಳ್ಳವರೂ ಸಹ ಹೌದು. ರಾವಣ ತನ್ನಲ್ಲಿ ಹಲವು ಭಿನ್ನ ವ್ಯಕ್ತಿತ್ವಗಳನ್ನು ಹೊಂದಿದ್ದವ. ಆ ಪಾತ್ರ ಮಾಡಲು ಯಶ್ ಸಹ ಉತ್ಸುಕರಾಗಿದ್ದರು’ ಎಂದಿದ್ದಾರೆ.

ನಮಿತ್ ಅವರ ಉತ್ತರದಿಂದ ಸಂತುಷ್ಟರಾಗದ ಸದ್ಗುರು, ‘ಸಾಮಾನ್ಯವಾಗಿ ವಿಲನ್​​ಗಳು ಮೊಂಡು ಮೂಗು ಹೊಂದಿದವರು, ಕುರುಚಲು ಮುಖ ಹೊಂದಿದವರು ಆಗಿರುತ್ತಾರೆ. ಆದರೆ ನೀವು ಚೂಪಾದ ಮೂಗು ಹೊಂದಿದ ಸ್ಮಾರ್ಟ್ ಆಗಿರುವ ಯಶ್ ಅನ್ನು ಆಯ್ಕೆ ಮಾಡಿದ್ದೀರಿ’ ಎಂದು ತಮ್ಮದೇ ಶೈಲಿಯಲ್ಲಿ ನಕ್ಕರು.

ಬಳಿಕ ರಣ್​​ಬೀರ್ ಕಪೂರ್ ಅವರು ರಾಮನ ಪಾತ್ರ ನಿರ್ವಹಿಸುತ್ತಿರುವ ಬಗ್ಗೆ ಕೆಲವರು ಎತ್ತಿರುವ ಆಕ್ಷೇಪದ ಬಗ್ಗೆ ಮಾತನಾಡಿರುವ ಸದ್ಗುರು, ‘ಯಾರೋ ನಟ ಹಿಂದೆ ಯಾವುದೋ ಪಾತ್ರಗಳಲ್ಲಿ ನಟಿಸಿದ್ದಾನೆ ಎಂದ ಮಾತ್ರಕ್ಕೆ ಈಗ ರಾಮನ ಪಾತ್ರದಲ್ಲಿ ನಟಿಸಬಾರದು ಎಂಬುದು ಸರಿಯಲ್ಲ. ಆತ ನಟನಷ್ಟೆ, ನಾಳೆ ಆತ ಬೇರೆ ಯಾವುದೋ ಸಿನಿಮಾನಲ್ಲಿ ರಾವಣನ ಪಾತ್ರದಲ್ಲೂ ನಟಿಸಬಹುದು’ ಎಂದಿದ್ದಾರೆ ಸದ್ಗುರು.

‘ರಾಮಾಯಣ’ ಸಿನಿಮಾನಲ್ಲಿ ಯಶ್ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಯಶ್ ಸಹ ನಿರ್ಮಾಪಕರೂ ಸಹ ಆಗಿದ್ದಾರೆ. ‘ರಾಮಾಯಣ’ ಸಿನಿಮಾಕ್ಕೆ ಎಆರ್ ರೆಹಮಾನ್ ಮತ್ತು ಖ್ಯಾತ ಸಂಗೀತ ನಿರ್ದೇಶಕ ಹಾನ್ಸ್ ಜೈಮರ್ ಸಂಗೀತ ನೀಡಿದ್ದಾರೆ. ಸಿನಿಮಾ ನಿರ್ದೇಶನ ಮಾಡುತ್ತಿರುವುದು ನಿತೀಶ್ ತಿವಾರಿ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp