Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಭೆಯ ನಾಡು…
Special News Exclusive Latest News

ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಭೆಯ ನಾಡು…

Sambrama Prabha NewsBy Sambrama Prabha NewsNovember 1, 2025No Comments3 Mins Read
Share WhatsApp Facebook Twitter Telegram
Share
WhatsApp Facebook Twitter Telegram

ಲೇಖನ: ಪ್ರಿಯಲಚ್ಚಿ

ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ಏಕೀಕೃತ ರಾಜ್ಯವಾದದ್ದು ನವೆಂಬರ್ 1, 1973 ರಂದು, ಕರ್ನಾಟಕ ರಾಜ್ಯವೆಂದು ಮರುನಾಮಕರಣಗೊಂಡು 52 ವರ್ಷ ಪೂರ್ಣಗೊಂಡಿರುವ ಸುದಿನ ಈ ನವೆಂಬರ್ 01. ಈ ಬಾರಿಯೂ ನಮ್ಮ ಕನ್ನಡದ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದರ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಲು ತಮ್ಮೆಲ್ಲರಿಗೂ ಮನವಿ.

ಕನ್ನಡಿಗರಾದ ನಾವು ನುಡಿ ಕನ್ನಡ, ನಡೆ ಕನ್ನಡ, ಉಸಿರು ಕನ್ನಡ ಎಂದು ಜೀವಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಇದೇ ವೇಳೆ ಕನ್ನಡದ ಬಗ್ಗೆ, ಕನ್ನಡಿಗರ ಬಗ್ಗೆ ಹೆಮ್ಮೆ ಪಡುವ ವಿಷಯಗಳು ಆಗಾಗ ಕೇಳಿಬರುತ್ತಿರುತ್ತವೆ. ನಾಮಫಲಕಗಳಲ್ಲಿ ಶೇಕಡ.50 ಕ್ಕಿಂತ ಹೆಚ್ಚು ಕನ್ನಡ ಬಳಸಬೇಕು ಎಂಬ ಪ್ರತಿಭಟನೆಗಳು, ಕೂಗದೇ, ಚೀರದೇ ಸೈಲಾಂಟಾಗಿ ನಮ್ಮೊಂದಿಗೆ ಕನ್ನಡ ಕಲಿಯಿರಿ ಎಂಬ ಅಪ್ಲಿಕೇಶನ್‌ ಬಿಡುಗಡೆ ಮಾಡಿದ ಆಟೋ ಚಾಲಕನ ಹೊಸ ಪ್ರಯತ್ನಗಳು, ಹೀಗೆ ಹಲವು.

ಅಂದಹಾಗೆ ಈಗ ನವೆಂಬರ್ 01 ರಂದು ಮಾತ್ರವಲ್ಲದೇ ಇಡೀ ತಿಂಗಳು ರಾಜ್ಯದ ಎಲ್ಲೆಡೆ ಮಾತ್ರವಲ್ಲದೇ ವಿದೇಶಗಳಲ್ಲು ಸಹ ಕನ್ನಡಿಗರು ಕನ್ನಡ ಭಾಷೆಯ ಹಬ್ಬ ಆಚರಿಸುವುದು, ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ನೆನೆದು ಮೆಲುಕುಹಾಕುವುದು ಸಾಮಾನ್ಯ. ಇದೊಂದು ಸಡಗರದ ಹಬ್ಬ ಸಹ ಎಲ್ಲಿರಿಗೂ. ಇನ್ನು ಶಾಲಾ, ಕಾಲೇಜುಗಳಲ್ಲಿ ಈ ಹಬ್ಬವನ್ನು ಹಲವು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕವೇ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಕನ್ನಡ ರಾಜ್ಯೋತ್ಸವದ ಬಗ್ಗೆ ಪ್ರಬಂಧ ಬರಹದ ಸ್ಪರ್ಧೆ, ಭಾಷಣ ಸ್ಪರ್ಧೆ ನಡೆಸುವ ಮೂಲಕವು ಈ ಉತ್ಸವ ಆಚರಿಸಲಾಗುತ್ತದೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅವರು ಪ್ರಬಂಧ ಸ್ಪರ್ಧೆಗೆ, ಭಾಷಣಕ್ಕೆ ಸಹಾಯವಾಗುವ ಕನ್ನಡ ರಾಜ್ಯೋತ್ಸವ ಕುರಿತ ಕೆಲವು ಮಾಹಿತಿ ಇಲ್ಲಿದೆ.
ವಿದ್ಯಾರ್ಥಿಗಳು ತಾವು ಬರೆಯುವ ಪ್ರಬಂಧ, ಮಾತನಾಡುವ ಭಾಷಣ ಕನ್ನಡ ರಾಜ್ಯೋತ್ಸವದ ಕುರಿತು ಹೇಗೆಲ್ಲಾ ಇರಬೇಕು, ಏನೆಲ್ಲಾ ಇರಬೇಕು ಎಂದು ಇಲ್ಲಿ ತಿಳಿಸಲಾಗಿದೆ. ಈ ಅಂಶಗಳನ್ನು ನಿಮ್ಮ ಕಾರ್ಯಕ್ರಮಗಳಿಗೆ ಅಳವಡಿಸಿಕೊಳ್ಳಿ.

ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

ಪ್ರತಿವರ್ಷ ನವೆಂಬರ್ 1 ರಂದು ವಿದ್ಯಾರ್ಥಿಗಳಾದ ನಾವು ಮಾತ್ರವಲ್ಲದೇ ಇಡೀ ರಾಜ್ಯದಲ್ಲಿ ಎಲ್ಲ ಕನ್ನಡಿಗರೂ ಸಹ ಈ ದಿನವನ್ನು ಮರೆಯಲಾರರು. ಕಾರಣ ಇಂದು ಕನ್ನಡ ರಾಜ್ಯೋತ್ಸವ. ಆದರೆ ಈ ತಿಂಗಳೆಲ್ಲ ನಾವು ಈ ಶುಭದಿನವನ್ನು ಆಚರಿಸುವುದು ಸಾಮಾನ್ಯವು ಸಹ. ಈ ದಿನವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ನಮ್ಮ ಕನ್ನಡ ನಾಡನ್ನು ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಭೆಯ ನಾಡು, ತಾಯಿ ಭುವನೇಶ್ವರಿಯ ನಾಡು ಎಂಬೆಲ್ಲ ಹೆಸರುಗಳಿಂದ ಕರೆಯುತ್ತೇವೆ. ಹಚ್ಚಹಸುರಿನ ಸುಂದರ ಬೆಟ್ಟ ಗುಡ್ಡಗಳ. ನದಿಗಳು ಹರಿಯುವ, ಸಾಧು-ಸಂತರು-ದಾಸರು- ಶಿವಶರಣರು – ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರಿಗೆ ಒಂದು ಧೀಮಂತ ಶಕ್ತಿ ಇದೆ. ಈ ಸುಂದರ, ಸಮೃದ್ಧ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಅದೃಷ್ಟ. ನವೆಂಬರ್ 1 ರಂದು ನಾವೆಲ್ಲರೂ ಅತ್ಯಂತ ಸಡಗರ-ಸಂಭ್ರಮದಿಂದ ಎಲ್ಲ ಜಾತಿ ಮತ ಧರ್ಮಗಳ ಜನರು ಸೇರಿ ಒಗ್ಗೂಡಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ.

ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡ ದಿನವೆಂದು ಆಚರಿಸಲಾಗುತ್ತದೆ. ಈ ದಿನವನ್ನು ಕರ್ನಾಟಕ ರಾಜ್ಯ ರಚನೆಯ ದಿನ ಅಥವಾ ಕರ್ನಾಟಕ ದಿನ ಎಂದೂ ಕರೆಯಲಾಗುತ್ತದೆ. 1956 ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. ಆದರೆ

ಕರ್ನಾಟಕ ಹೆಸರು ಬಂದದ್ದು ಹೇಗೆ ಎಂದು ನೋಡುವುದಾದರೆ…, ಕರ್ನಾಟಕ ಪದದ ಮೂಲ ಸಂಸ್ಕೃತ ಭಾಷೆ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ.

ಆದರೆ ಕರ್ನಾಟಕ ಎಂಬ ಪದದ ಹುಟ್ಟು ಅಥವಾ ಅರ್ಥದ ಬಗ್ಗೆ ಹಲವು ಅಭಿಪ್ರಾಯಗಳಿವೆ. ಕರು + ನಾಡು = ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ. ಕರು ಎಂದರೆ ಕಪ್ಪು, ಇದರರ್ಥ ಕಪ್ಪು ಮಣ್ಣಿನ ನಾಡು ಎಂದು ಹೇಳಲಾಗುತ್ತದೆ.

ಹಳೆಯ ಗ್ರಂಥಗಳು ಇದನ್ನು ಕರ್ನಾಟ ಎಂಬ ಪದದಿಂದ ಪಡೆಯಲಾಗಿದೆ ಎಂದು ಸೂಚಿಸುತ್ತವೆ. ಕೆಲವು ಮೂಲಗಳು ಕರ್ನಾಟಕವನ್ನು ಎತ್ತರದ ಭೂಮಿಗೆ ಅನುವಾದಿಸಿವೆ. ಕನ್ನಡಿಗರ ನಾಡನ್ನು ಮೈಸೂರು ರಾಜ್ಯದಿಂದ ಕರ್ನಾಟಕ ಎಂದು ಹೆಸರಿಡಬೇಕು ಎಂದು ಮೊದಲು 1972 ರ ಜುಲೈನಲ್ಲಿ ಈ ಬಗ್ಗೆ ಚರ್ಚೆ ಎದ್ದಿದ್ದು ಇದೆ ಸ್ನೇಹಿತರೇ. ದೀರ್ಘಾವಧಿಯ ಚರ್ಚೆಗಳ ನಂತರ ರಾಜ್ಯ ವಿಧಾನಸಭೆಯಲ್ಲೂ ಇದಕ್ಕೆ ಸರ್ವಾನುಮತದಿಂದ ಅನುಮತಿ ಸಿಕ್ಕಿತು.

1950 ರಲ್ಲಿ ಭಾರತವು ಗಣರಾಜ್ಯವಾಯಿತು. ನಂತರ ನಿರ್ದಿಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ದೇಶದಲ್ಲಿ ವಿವಿಧ ಪ್ರಾಂತ್ಯಗಳು ರಚನೆಯಾದವು. ಇದು ಮೈಸೂರು ರಾಜ್ಯಕ್ಕೆ ಜನ್ಮ ನೀಡಿತು. ನವೆಂಬರ್ 1, 1956 ರಂದು ಮೈಸೂರು ಸಂಸ್ಥಾನವು ಹಿಂದಿನ ಮೈಸೂರು ಸಂಸ್ಥಾನದ ಬಹುತೇಕ ಪ್ರದೇಶವನ್ನು ಒಳಗೊಂಡಿತ್ತು. ಉತ್ತರ ಕರ್ನಾಟಕದ ಜನರು ಮೈಸೂರು ಹೆಸರನ್ನು ಉಳಿಸಿಕೊಳ್ಳಲು ಒಲವು ತೋರಲಿಲ್ಲ. ಏಕೆಂದರೆ ಇದು ಹಿಂದಿನ ಸಂಸ್ಥಾನದ ಮತ್ತು ಹೊಸ ರಾಜ್ಯದ ದಕ್ಷಿಣ ಪ್ರದೇಶಗಳೊಂದಿಗೆ ನಿಕಟ ಸಂಬಂಧ ಹೊಂದಿತ್ತು. ಈ ಹಿನ್ನೆಲೆಗಳಿಂದ ರಾಜ್ಯದ ಹೆಸರನ್ನು ಕರ್ನಾಟಕ ಎಂದು ನವೆಂಬರ್ 1 ರಂದು 1973 ರಂದು ಬದಲಾಯಿಸಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್‌ ಅರಸು ರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ನವೆಂಬರ್ 1 ರಂದು ರಾಜ್ಯದಾದ್ಯಂತ ರಾಜ್ಯೋತ್ಸವ ದಿನವನ್ನು ಕೆಂಪು ಮತ್ತು ಹಳದಿ ಕನ್ನಡ ಧ್ವಜದ ಮೂಲಕ ರಾಜ್ಯದಾದ್ಯಂತ ಅತ್ಯಂತ ಸಂತೋಷ ಮತ್ತು ಸಡಗರದಿಂದ ಆಚರಿಸಲಾಗುತ್ತದೆ. ಕನ್ನಡ ಗೀತೆ ‘ಜಯ ಭಾರತ ಜನನೀಯ ತನುಜಾತೆ. ಜಯಹೇ ಕರ್ನಾಟಕ ಮಾತೆ’ ಹಾಡುವುದರೊಂದಿಗೆ ಇಡೀ ರಾಜ್ಯವು ಈ ದಿನದಂದು ಕನ್ನಡದ ಹಬ್ಬವನ್ನು ಆಚರಣೆ ಮಾಡುತ್ತಿದೆ.

ಕನ್ನಡಾಂಬೆಯ ಮಕ್ಕಳಾದ ನಾವು ಈ ಮಾಹಿತಿಯನ್ನು ಸದಾ ತಿಳಿದಿರಬೇಕು. ಅಷ್ಟೇ ಅಲ್ಲ ಕರ್ನಾಟಕಕ್ಕೆ ಆಗಮಿಸುವ ಅನ್ಯಭಾಷಿಗರಿಗೆ ಕನ್ನಡವನ್ನು ಕಲಿಸಿ, ನಾವು ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ವಿಸ್ತರಿಸಬೇಕು.

ನಾವು ಕೇವಲ ನವೆಂಬರ್ ಕನ್ನಡಿಗರಾಗದೇ, ‘ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರ ದಲ್ಲಿ ಕನ್ನಡವನ್ನೇ ಬಳಸುತ್ತೇನೆ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ, ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟಿಬದ್ಧರಾಗಿರುತ್ತೇವೆ’ ಎಂದು ಇದೇ ವೇಳೆ ನಿಶ್ಚಯಿಸೋಣ.

ಧನ್ಯವಾದಗಳು.
ಜೈ ಕನ್ನಡಾಂಬೆ, ಜೈ ಕರ್ನಾಟಕ ಮಾತೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
article Kannada Rajyotsava ಕನ್ನಡ ರಾಜ್ಯೋತ್ಸವ
Add as Preferred on Google Follow on Google News
Share. WhatsApp Facebook Twitter Telegram
Previous Articleಭಾರತ-ಆಸ್ಟ್ರೇಲಿಯಾ ಮೂರನೇ ಟಿ20 ಯಾವಾಗ? ಎಲ್ಲಿ?
Next Article ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

September 2, 2026

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

September 2, 2026

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

August 31, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.