BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಕರ್ನಾಟಕದ ತೆರಿಗೆ ಪಾಲು ಕನಿಷ್ಟ ಶೇ.4.7 ಮರು ನಿಗದಿಯಾಗಲಿ: ಸಿಎಂ

Author Picture
Published On: January 31, 2026

—Advertisement—

Updated By: Priyalachhi

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯಯುತ ತೆರಿಗೆ ಪಾಲು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಹಾಗೂ ವಿಶೇಷ ಅನುದಾನ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು 16ನೇ ಹಣಕಾಸು ಆಯೋಗದ ಮುಂದೆ ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು, ಈ ಕುರಿತು ‘ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ’ ಎಂಬ ಹೆಸರಿನಲ್ಲಿ ಅಭಿಯಾನವನ್ನು ಆರಂಭಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸರಣಿಯಾಗಿ ಪೋಸ್ಟ್ ಹಂಚಿಕೊಂಡಿರುವ ಅವರು, ಹಲವು ಬೇಡಿಕೆಗಳನ್ನು ಮಂಡಿಸಿದ್ದಾರೆ.

ಕರ್ನಾಟಕದ ಆರ್ಥಿಕ ಸ್ಥಿತಿಯನ್ನು ನೋಡಿದರೆ, 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ವರದಿಯಿಂದಾಗಿ ಶೇ 23ರಷ್ಟು ತೆರಿಗೆ ಪಾಲು ನೇರವಾಗಿ ಕಡಿಮೆಯಾಯಿತು. ಕೆಲವು ಆರ್ಥಿಕ ಅಜ್ಞಾನಿಗಳು ಈ ಸಂಗತಿಯನ್ನು ಅರ್ಥ ಮಾಡಿಕೊಳ್ಳದೆ ವಿತಂಡವಾದ ಮಾಡುತ್ತಾರೆ.

14ನೇ ಹಣಕಾಸು ಆಯೋಗವು ಶೇ 4.71ರಷ್ಟು ಪಾಲನ್ನು ನಮಗೆ ಒದಗಿಸಿತ್ತು. 15ನೇ ಹಣಕಾಸು ಆಯೋಗವು ಇದನ್ನು ಶೇ 3.64ಕ್ಕೆ ಇಳಿಸುವ ಮೂಲಕ ಘೋರ ಅನ್ಯಾಯ ಮಾಡಿತು. ಉದಾಹರಣೆಗೆ, ರಾಜ್ಯಗಳಿಗೆ ಹಂಚಿಕೆ ಮಾಡುವ 100 ರೂಪಾಯಿಯಲ್ಲಿ ಮೊದಲು ಕರ್ನಾಟಕಕ್ಕೆ ರೂ.4.71 ಸಿಗುತ್ತಿದ್ದರೆ, 15ನೇ ಆಯೋಗವು ಅದನ್ನು ರೂ.3.64ಗೆ ಇಳಿಸಿತು. ಇದರಿಂದ ರಾಜ್ಯಕ್ಕೆ ನೇರವಾಗಿ ಸುಮಾರು ರೂ.80 ಸಾವಿರ ಕೋಟಿಯಷ್ಟು ಬೃಹತ್ ಪ್ರಮಾಣದ ತೆರಿಗೆ ಪಾಲು ಸಿಗದೆ ಅನ್ಯಾಯವಾಯಿತು.

ದೇಶದ ಆರ್ಥಿಕ ಶಕ್ತಿಯಲ್ಲಿ ಚಾಲಕ ಸ್ಥಾನದಲ್ಲಿರುವ ಕರ್ನಾಟಕ ತಲಾವಾರು ಆರ್ಥಿಕ ಉತ್ಪಾದಕತೆಯಲ್ಲಿ ಮೊದಲ ಸ್ಥಾನದಲ್ಲಿದೆ. ತೆರಿಗೆ, ಸೆಸ್‌ ಮುಂತಾದ ರೂಪದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕದಿಂದ ರೂ.4.5 ಲಕ್ಷ ಕೋಟಿಯಿಂದ ರೂ.5 ಲಕ್ಷ ಕೋಟಿಗಳಷ್ಟು ಸಂಗ್ರಹಿಸುತ್ತದೆ. ರಾಜ್ಯದ ಒಟ್ಟಾರೆ ಆಯವ್ಯಯದಲ್ಲಿ ಇಡೀ ದೇಶದಲ್ಲಿಯೇ ಕೇಂದ್ರದಿಂದ ಅತ್ಯಂತ ಕಡಿಮೆ ತೆರಿಗೆ ಪಾಲು ಮತ್ತು ಅನುದಾನ ಪಡೆಯುವ ರಾಜ್ಯವೂ ಕರ್ನಾಟಕವೇ ಆಗಿರುವುದು ದುರದೃಷ್ಟಕರ. ಈ ಹಿನ್ನೆಲೆಯಲ್ಲಿ ನಮಗೆ 14ನೇ ಹಣಕಾಸು ಆಯೋಗವು ನೀಡಿದ್ದ ಶೇ 4.71ರಷ್ಟು ಪಾಲನ್ನು ಕೊಟ್ಟರೆ ಮಾತ್ರ ನಾವು ನಿಟ್ಟುಸಿರು ಬಿಡುವಂತಾಗುತ್ತದೆ. ಅದಕ್ಕಿಂತ ಹೆಚ್ಚು ಕೊಟ್ಟರೆ ಮಾತ್ರ ನೈಜವಾಗಿ ನ್ಯಾಯ ಸಿಕ್ಕಂತಾಗುತ್ತದೆ ಎಂದು ಹೇಳಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp