Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರಾಹುಲ್​ ಗಾಂಧಿ ಅವರ ಲಡಾಖ್​ ಬಿಕ್ಕಟ್ಟಿನ ಕುರಿತ ಹೇಳಿಕೆ ಲೋಕಸಭೆಯಲ್ಲಿ ತೀವ್ರ ಗದ್ದಲ
Politics Nation News

ರಾಹುಲ್​ ಗಾಂಧಿ ಅವರ ಲಡಾಖ್​ ಬಿಕ್ಕಟ್ಟಿನ ಕುರಿತ ಹೇಳಿಕೆ ಲೋಕಸಭೆಯಲ್ಲಿ ತೀವ್ರ ಗದ್ದಲ

Sambrama Prabha NewsBy Sambrama Prabha NewsFebruary 2, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ನವದೆಹಲಿ: ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂ.ಎಂ.ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯಲ್ಲಿನ ವಾಕ್ಯವನ್ನು ಉಲ್ಲೇಖಿಸಲು ಪ್ರಯತ್ನಿಸಿದ್ದು ಲೋಕಸಭೆಯಲ್ಲಿಂದು ಭಾರೀ ಗದ್ದಲ ಸೃಷ್ಟಿಸಿತು.

ರಾಹುಲ್​ ಗಾಂಧಿ ಅವರು ಲಡಾಖ್​ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಲು ಆರಂಭಿಸಿದಾಗ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪುಸ್ತಕ ಪ್ರಕಟವಾಗಿಲ್ಲ. ಅದರ ಮಾಹಿತಿ ಸುಳ್ಳಾಗಿದೆ. ಸದನದಲ್ಲಿ ಈ ಬಗ್ಗೆ ಚರ್ಚಿಸುವಂತಿಲ್ಲ ಎಂದರು.

ಆದರೂ, ರಾಹುಲ್ ಗಾಂಧಿ​ ಮಾಜಿ ಸೇನಾ ಮುಖ್ಯಸ್ಥರ ಹೇಳಿಕೆಯನ್ನು ಪ್ರಸ್ತಾಪಿಸಲು ಪದೇ ಪದೇ ಪ್ರಯತ್ನಿಸಿದರು. ಪುಸ್ತಕ ಪ್ರಕಟವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಕೇಳಿದರು.

ದಿ ಕ್ಯಾರವಾನ್ ನಿಯತಕಾಲಿಕೆಯು ಫೆಬ್ರವರಿಯಲ್ಲಿ ತನ್ನ ಮುಖಪುಟದಲ್ಲಿ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆಯ ಕುರಿತು ಪ್ರಕಟಿಸಿದೆ. ಇದು ಲಡಾಖ್​ ಕುರಿತು ಕೇಂದ್ರ ಸರ್ಕಾರ ಮತ್ತು ಚೀನಾದ ನಡುವಿನ ಗಡಿ ಬಿಕ್ಕಟ್ಟಿನ ಬಗ್ಗೆ ವಿವರಿಸಲಾಗಿದೆ ಎಂದು ಹೇಳಲಾಗಿದೆ.

ಸ್ಪೀಕರ್​ ಎಚ್ಚರಿಕೆ, ರಾಹುಲ್​ ಪಟ್ಟು: ಸ್ಪೀಕರ್​ ಓಂ ಬಿರ್ಲಾ ಅವರು ನಿಯಮಾವಳಿಗಳ ಪ್ರಕಾರ, ಮಾತನಾಡಲು ವಿಪಕ್ಷ ನಾಯಕ ರಾಹುಲ್​ ಗಾಂಧಿ ಅವರಿಗೆ ಪದೇ ಪದೇ ಸೂಚಿಸಿದರು. ಆದಾಗ್ಯೂ, ರಾಹುಲ್​ ಅವರು ಮಾಜಿ ಸೇನಾಧಿಕಾರಿಯ ಹೇಳಿಕೆಯನ್ನು ಪ್ರಸ್ತಾಪಿಸಿದರು. ಇದೇ ವಿಷಯವಾಗಿ ಸದನದಲ್ಲಿ ತೀವ್ರ ಗದ್ದಲ ಏರ್ಪಟ್ಟಿತು. ವಿಪಕ್ಷ ಸದಸ್ಯರು ಲೇಖನ ಅಧಿಕೃತವಾಗಿದೆ. ಅದನ್ನು ಸದನದಲ್ಲಿ ಉಲ್ಲೇಖಿಸಬಹುದು ಎಂದು ಪಟ್ಟು ಹಿಡಿದರು.

ಇತ್ತ, ರಾಜನಾಥ್​ ಸಿಂಗ್​ ಅಪ್ರಕಟಿತ ಪುಸ್ತಕ ಮತ್ತು ನಿಯತಕಾಲಿಕೆಗಳಲ್ಲಿ ಬರೆದ ಮಾತ್ರಕ್ಕೆ ಅದನ್ನು ಸದನದಲ್ಲಿ ಮಂಡಿಸುವಂತಿಲ್ಲ. ಇದು ನಿಯಮಕ್ಕೆ ವಿರುದ್ಧ ಎಂದು ವಾದಿಸಿದರು. ಇದನ್ನು ಗೃಹ ಸಚಿವ ಅಮಿತ್​ ಶಾ ಬೆಂಬಲಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ರಾಹುಲ್ ಗಾಂಧಿ
Add as Preferred on Google Follow on Google News
Share. WhatsApp Facebook Twitter Telegram
Previous Articleಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳ ಸಮಸ್ಯೆ ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು: ಲಕ್ಷ್ಮೀ ಹೆಬ್ಬಾಳ್ಕರ್
Next Article ಇಡೀ ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಗುರುತಿಸಿ ಗಡೀಪಾರು: ಗೃಹ ಸಚಿವ ಜಿ.ಪರಮೇಶ್ವರ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.