BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು

Author Picture
Published On: April 2, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದ ಬಿಕ್ಕಟ್ಟಿನ ನಡುವೆಯೇ ದೇಶದ ಸ್ಥಿತಿಗತಿಗಳನ್ನು ಸಮತೋಲನದಲ್ಲಿಡಲು ಕೇಂದ್ರ ಸರ್ಕಾರ ಕಾರ್ಯಪ್ರವೃತ್ತಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಮಹತ್ವದ ಸಭೆ ನಡೆಸಿದ್ದಾರೆ.

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಬಳಿಕ ಪ್ರಧಾನಿ ಮೋದಿಯವರು ಸಚಿವರೊಂದಿಗೆ ಬುಧವಾರ ಸಭೆ ನಡೆಸಿದ್ದು, ಜನಸಾಮಾನ್ಯರಿಗೆ ಯಾವುದೇ ರೀತಿಯ ಹೊರೆ ಅಥವಾ ತೊಂದರೆ ಆಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಿವಿಧ ಸಚಿವಾಲಯಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಸಭೆಯಲ್ಲಿ ಜಾಗತಿಕ ಮಟ್ಟದಲ್ಲಿ ಉಂಟಾಗುತ್ತಿರುವ ತೈಲ ಹಾಗೂ ಅನಿಲ ಸರಬರಾಜಿನ ಅನಿಶ್ಚಿತತೆ, ಸಾಗಣೆ ವ್ಯತ್ಯಯಗಳು ಹಾಗೂ ಬೆಲೆ ಏರಿಳಿತದ ಪರಿಣಾಮಗಳು ಭಾರತದಲ್ಲಿ ಹೇಗೆ ಪ್ರತಿಫಲಿಸಬಹುದು ಎಂಬುದರ ಕುರಿತು ಸಮಗ್ರ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ,

ಸಭೆಯಲ್ಲಿ ದೇಶದಲ್ಲಿ ಇಂಧನ ಭದ್ರತೆ ಕಾಪಾಡುವುದು ಅತ್ಯಂತ ಪ್ರಮುಖ ಎಂದು ಒತ್ತಿ ಹೇಳಿರುವ ಪ್ರಧಾನಮಂತ್ರಿಗಳು, ಎಲ್‌ಪಿಜಿ ಮತ್ತು ಎಲ್‌ಎನ್‌ಜಿ ಪೂರೈಕೆ ನಿರಂತರವಾಗಿರಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ,

ಸಂಪುಟ ಕಾರ್ಯದರ್ಶಿ ಸೋಮನಾಥನ್ ಸಭೆಯಲ್ಲಿ ಮಾತನಾಡಿ, ವಿವಿಧ ದೇಶಗಳಿಂದ ಪರ್ಯಾಯ ಆಮದು ವ್ಯವಸ್ಥೆಗಳನ್ನು ಬಲಪಡಿಸುವ ಮೂಲಕ ಎಲ್‌ಪಿಜಿ, ಎಲ್‌ಎನ್‌ಜಿ ಹಾಗೂ ವಿದ್ಯುತ್ ಲಭ್ಯತೆಯನ್ನು ಸ್ಥಿರವಾಗಿಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಜೊತೆಗೆ ಪೈಪ್‌ನ್ಯಾಚುರಲ್ ಗ್ಯಾಸ್ (PNG) ಬಳಕೆಯನ್ನು ನಗರ ಪ್ರದೇಶಗಳಲ್ಲಿ ವಿಸ್ತರಿಸುವ ಯೋಜನೆಗಳಿಗೂ ಒತ್ತು ನೀಡಲಾಗಿದೆ ಎಂದು ಹೇಳಿದರು.

ಬಳಿಕ ಕೃಷಿ ಕ್ಷೇತ್ರಕ್ಕೂ ವಿಶೇಷ ಮಹತ್ವ ನೀಡಲಾಗಿದ್ದು, ಮುಂಗಾರು ಹಂಗಾಮಿನ ಮೊದಲು ರಸಗೊಬ್ಬರ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಸೂಚಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp