BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊ? ಡಿಕೆಶಿಯೋ?

Author Picture
Published On: November 2, 2025

—Advertisement—

Updated By: Priyalachhi

ನಗರದ ರಸ್ತೆ ಗುಂಡಿಗಳ ಬಗ್ಗೆ ಕೇಳಿದ್ದಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಬೇಜವಾಬ್ದಾರಿಯ ಪರಮಾವಧಿ.

ಬೆಂಗಳೂರು: ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಯನ್ನು ಗಮನಿಸಿದ್ದೇನೆ. ಅವರ ಹೇಳಿಕೆ ಬೇಜವಾಬ್ದಾರಿತನವಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾ? ಅಥವಾ ಡಿ.ಕೆ. ಶಿವಕುಮಾರ್ ಅವರಾ? ಎನ್ನುವ ಪ್ರಶ್ನೆ ಮೂಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ರಸ್ತೆ ಗುಂಡಿಗಳ ಬಗ್ಗೆ ಕೇಳಿದ್ದಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕಿಡಿಕಾರಿದರು.

ಸಿಎಂ ಹೇಳಿಕೆ ನೋಡಿದರೆ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಅಸಮರ್ಥನಾಗಿದ್ದೇನೆಂದು ಹೇಳಿದ ರೀತಿ ಇದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಾ ಅಥವಾ ಡಿಕೆ.ಶಿವಕುಮಾರ್ ಅವರಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಸಿಎಂ ಸಭೆ ಮಾಡಿ ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದರು. ಆದರೆ, ರಸ್ತೆಗಳಲ್ಲಿ ಗುಂಡಿಗಳು ಹಾಗೆಯೇ ಇವೆ. ಅಧಿಕಾರಿಗಳು ಇವರ ಮಾತಿಗೆ ಎಷ್ಟು ಬೆಲೆ ಕೊಡುತ್ತಿದ್ದಾರೆಂಬುದು ಇದರಿಂದ ಗೊತ್ತಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜಾತಿ ಗಣತಿ ಕುರಿತು ಮಾತನಾಡಿ, ಸಿದ್ದರಾಮಯ್ಯ ಅವರು ರಾಜ್ಯದ ಜನರ ಕಲ್ಯಾಣಕ್ಕಾಗಿ ಅಲ್ಲದೆ, ತಮ್ಮ ಗುಪ್ತ ಕಾರ್ಯಸೂಚಿಗಾಗಿ ಮಾಡಿದ ಸಮೀಕ್ಷೆಯಾಗಿದೆ ಎಂದು ಕಿಡಿಕಾರಿದರು.

ಸಮೀಕ್ಷೆಯಿಂದ ಸರ್ಕಾರ ಏನು ಸಾಧಿಸುತ್ತದೆ. ಜನರು ಅದಕ್ಕೆ ಎಷ್ಟರ ಮಟ್ಟಿಗೆ ಪ್ರತಿಕ್ರಿಯಿಸಿದ್ದಾರೆ. ಎಲ್ಲಾ ಜಾತಿಗಳಲ್ಲಿಯೂ ಬಡವರು ಮತ್ತು ಅನಕ್ಷರಸ್ಥರು ಇದ್ದಾರೆ. ಸರ್ಕಾರ ಮೊದಲು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಬೇಕು. ರಾಜ್ಯದಲ್ಲಿ ಶಾಲೆಗಳು, ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಕರ ಕೊರತೆ ತುಂಬಾ ಇದೆ ಎಂದು ಹೇಳಿದರು.

ತ್ಯಾಜ್ಯ ವಿಲೇವಾರಿ ಕುರಿತು ಮಾತನಾಡಿ, ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡುವುದನ್ನು ಬಿಟ್ಟು ಮನೆಗಳ ಮುಂದೆ ಕಸ ಸುರಿಯುವುದು ಸರಿಯಲ್ಲ. ಕಸ ವಿಲೇವಾರಿಗೆ ಸೂಕ್ತ ಜಾಗ ಇಲ್ಲ. ಹೀಗಾಗಿ ಮನೆಗಳ ಮುಂದೆ ತಂದು ಹಾಕಿದರೆ ಜನರೇ ಕಸ ವಿಲೇ ಮಾಡಿಕೊಳ್ಳುತ್ತಾರೆ ಎನ್ನುವ ಭಾವನೆ ಇರಬಹುದು. ಆ ಉದ್ದೇಶದಿಂದ ಸರಕಾರ ಮನೆಗಳ ಮುಂದೆ ಕಸ ಸುರಿಯುವ ವಿನೂತನ ಕಾರ್ಯಕ್ರಮ ಮಾಡಿದೆ ಎಂದು ಟೀಕಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp