BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

, ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೊಡ್ಡ ಅವಮಾನ: ಡಿಕೆ ಶಿವಕುಮಾರ್

Author Picture
Published On: May 13, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ನೀಟ್ ಪರೀಕ್ಷೆ ರದ್ದಾಗಿರುವುದು ದೊಡ್ಡ ಅಪಮಾನ. ಇದರ ಬಗ್ಗೆ ಸಂಸದರು ಹಾಗೂ ಕೇಂದ್ರ ಸಚಿವರು ಮಾತನಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದರು.

ಬಿಡಿಎ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೀಟ್ ಪರೀಕ್ಷೆ ರದ್ದುಗೊಳಿಸಿರುವ ಬಗ್ಗೆ ಕೇಳಿದಾಗ, “ಇದು ನಮ್ಮೆಲ್ಲರಿಗೂ ದೊಡ್ಡ ಅವಮಾನ. ಮಕ್ಕಳು ಜೀವನದಲ್ಲಿ ಏನಾದರೂ ಆಗಬೇಕು ಎಂಬ ಕನಸು ಕಟ್ಟಿಕೊಂಡು ಕಷ್ಟಪಟ್ಟು ಓದಿರುತ್ತಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅವರಿಗೆ ಬಹಳ ತೊಂದರೆಯಾಗುತ್ತದೆ. ಇಂತಹ ಪ್ರಕರಣಗಳು ನಂಬಿಕೆಯನ್ನೇ ಕಳೆಯುತ್ತವೆ.

ಈ ಹಿಂದೆ ಪಿಎಸ್ಐ ಹಗರಣ ಸೇರಿದಂತೆ ಅನೇಕ ಪ್ರಕರಣ ನೋಡಿದ್ದೇವೆ. ಇದಕ್ಕೆ ಬಿಜೆಪಿ ಸಂಸದರು ಉತ್ತರ ನೀಡಬೇಕು. ಅಶ್ವತ್ ನಾರಾಯಣ ಅವರ ಹೇಳಿಕೆ ನೋಡುತ್ತಿದ್ದೆ. ಉತ್ತರ ನೀಡದಿರುವುದೇ ಒಳ್ಳೆಯದು ಎಂದಿದ್ದಾರೆ. ಅವರು ಶಿಕ್ಷಣ ಸಚಿವರಾಗಿದ್ದರು.

ಇದು ಸರಿಯೇ ಇಲ್ಲವೇ ಎಂದು ಹೇಳಬೇಕಲ್ಲವೇ? ಬೇರೆ ಸಮಯದಲ್ಲಿ ಮಾತನಾಡುವ ಸಂಸದರು ಹಾಗೂ ಕೇಂದ್ರದ ಸಚಿವರು ಈ ವಿಚಾರದ ಬಗ್ಗೆ ಈಗ ಮಾತನಾಡಬೇಕು. ಇದು ಯಾರ ವೈಫಲ್ಯ? ಎಂದು ಹೇಳಬೇಕು. ಈ ಪ್ರಕರಣ ಕರ್ನಾಟಕದಲ್ಲಿ ಆಗಿದ್ದರೆ ಇಷ್ಟು ಹೊತ್ತಿಗೆ ಬಿಲ್ಡಿಂಗ್ ಮೇಲೆ ಕೂತು ಕೂಗಾಡುತ್ತಿದ್ದರು” ಎಂದು ತಿಳಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp