ರೈತರನ್ನು ಬೀದಿಗೆ ತಳ್ಳಲು ಸರ್ಕಾರ ಸಂಚು: ಆರ್.ಅಶೋಕ್ ಕಿಡಿ

0
5

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ರೈತರ ಭೂಮಿ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಈ ಕ್ರಮ ರೈತರಿಗೆ ದ್ರೋಹವಾಗಿದ್ದು, ಸರ್ಕಾರ ರೈತರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಪ್ರದೇಶವು ತೆಂಗು, ಮಾವು, ರೇಷ್ಮೆ ಹಾಗೂ ಹಾಲು ಉತ್ಪಾದನೆಗೆ ಹೆಸರುವಾಸಿಯಾದ ಫಲವತ್ತಾದ ಕೃಷಿಭೂಮಿಯಾಗಿದೆ. ಇಂತಹ ಜಮೀನನ್ನು ಸರ್ಕಾರ ಕಬಳಿಸಲು ಯತ್ನಿಸುತ್ತಿದೆ ಎಂದು ದೂರಿದರು.

“ಡಿಸಿಎಂ ಡಿ.ಕೆ. ಶಿವಕುಮಾರ್ ನಡೆಸಿದ ಸಭೆಗಳಲ್ಲಿ ನಕಲಿ ರೈತರನ್ನು ಕರೆಸಿ ಭೂಸ್ವಾಧೀನಕ್ಕೆ ಬೆಂಬಲವಿದೆ ಎಂಬ ಚಿತ್ರಣ ಸೃಷ್ಟಿಸಲಾಗಿದೆ. ಆದರೆ, ನಿಜವಾದ ರೈತರು ತಮ್ಮ ಭೂಮಿಯನ್ನು ಯಾವುದೇ ಕಾರಣಕ್ಕೂ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಹೇಳಿದರು.

ಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಆರಂಭದಿಂದಲೇ ಬೆಂಬಲ ನೀಡಿದ್ದು, ಮುಂದೆಯೂ ಅವರ ಪರ ನಿಲ್ಲಲಿದೆ ಎಂದು ತಿಳಿಸಿದರು.

ಬೆಂಗಳೂರಿನ ಸುತ್ತಮುತ್ತ ಈಗಾಗಲೇ ಸಾಕಷ್ಟು ಖಾಲಿ ಜಾಗಗಳಿವೆ. ಕೆಂಪೇಗೌಡ ಲೇಔಟ್ ಮತ್ತು ಶಿವರಾಮ ಕಾರಂತ ಲೇಔಟ್‌ಗಳಲ್ಲಿ ಲಕ್ಷಾಂತರ ಫ್ಲ್ಯಾಟ್‌ಗಳು ಮಾರಾಟವಾಗದೆ ಉಳಿದಿರುವಾಗ ಹೊಸ ಟೌನ್‌ಶಿಪ್ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

sambrama prabha editor suresh kt

LEAVE A REPLY

Please enter your comment!
Please enter your name here