ರಾಜಕೀಯರಾಜ್ಯರಾಷ್ಟ್ರೀಯ

ಶೀಘ್ರವೇ ಉಳಿದ `ಗ್ಯಾರಂಟಿ ಯೋಜನೆ’ಗಳ ಅನುಷ್ಠಾನ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ

We will implement the rest of the guarantee schemes soon: CM Siddaramaiah

ಬೆಂಗಳೂರು : ರಾಜ್ಯ ಸರ್ಕಾರವು ಈಗಾಗಲೇ ಮೂರು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಉಳಿದ ಗ್ಯಾರಂಟಿಗಳ ಜಾರಿ ಪ್ರಕ್ರಿಯೆ ಮುಂದುವರೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಸದನದಲ್ಲಿ ಗ್ಯಾರಂಟಿಗಳ ಬಗ್ಗೆ ಚರ್ಚೆ ನಡೆಯಿತು.

ವಿಧಾನಸಭೆಯಲ್ಲಿ ಸಚಿವ ಆರ್. ಅಶೋಕ್ ಅವರು ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಎಲ್ಲಾ ಗ್ಯಾರಂಟಿಗಳನ್ನು ನಾವು ಅನುಷ್ಠಾನಗೊಳಿಸುತ್ತೇವೆ. ಈಗಾಗಲೇ ಮೂರು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಉಳಿದ ಗ್ಯಾರಂಟಿಗಳ ಜಾರಿ ಪ್ರಕ್ರಿಯೆ ಮುಂದುವರೆದಿದೆ.ಶೀಘ್ರವೇ ಉಳಿದ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ...

Back to top button
>