ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಲೋಕಸಭೆ ಚುನಾವಣೆಗೆ ಎಂಟು ತಿಂಗಳಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ತಯಾರಿ ಶುರು ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಸಭೆ ನಡೆಸಿ ಹೊಣೆ ನಿಗದಿಪಡಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಯೋಜಿಸುವಂತೆ ಸೂಚಿಸಿದ್ದಾರೆ. ಮೊದಲ ದಿನದ ಚಿತ್ರ ನೋಟ ಹೀಗಿತ್ತು
ಲೋಕಸಭೆ ಚುನಾವಣೆ ತಯಾರಿ ಭಾಗ ಹಾಗೂ ಶಾಸಕರ ಅಹವಾಲು ಆಲಿಕೆಯ ಸಭೆಗಳನ್ನು ಸಿಎಂ ಸಿದ್ದರಾಮಯ್ಯ ಸೋಮವಾರ ಆರಂಭಿಸಿದರು.
ಬೆಂಗಳೂರಿನಲ್ಲಿ ತುಮಕೂರ ಉಸ್ತುವಾರಿ ಸಚಿವ ಡಾ.ಜಿ.,ಪರಮೇಶ್ವರ್ ಹಾಗೂ ಸಚಿವ ರಾಜಣ್ಣ, ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು.
ಸಿಎಂ ಸಿದ್ದರಾಮಯ್ಯ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಶಾಸಕರ ಜತೆ ಚರ್ಚಿಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಹಾಗೂ ಶಾಸಕರೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿದರು.