—Advertisement—

,

ಕರ್ತವ್ಯನಿರತ ಕೆಎಸ್ಆರ್​ಟಿಸಿ ಭದ್ರತಾ ಸಿಬ್ಬಂದಿ ಹೃದಯಾಘಾತದಿಂದ ಸಾವು

Author Picture
Published On: November 6, 2025

—Advertisement—

Updated By: Priyalachhi

ಶಿವಮೊಗ್ಗ: ಸಾಗರದ ಕೆಎಸ್ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂದೀಪ್ (41) ಮೃತ ಕೆ ಎಸ್ ಆರ್ ಟಿ ಸಿ ಸಿಬ್ಬಂದಿ. ಸಂದೀಪ್ ಸಾಗರದ ಮಾರಿಕಾಂಬ ದೇವಾಲಯದ ಹಿಂಭಾಗದ ರಸ್ತೆಯ ನಿವಾಸಿಯಾಗಿದ್ದಾರೆ.

ಸಂದೀಪ್ ಬುಧವಾರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್​ರನ್ನು ಸಹೋದ್ಯೋಗಿಗಳು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸಂದೀಪ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ.

ಆಸ್ಪತ್ರೆಗೆ ಕರೆದುಕೊಂಡು ಬಂದ ಸಿಬ್ಬಂದಿ ಚಂದ್ರು ಮಾತನಾಡಿ, ”ನಾನು ಬಸ್​ನಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸ‌ ಮಾಡುತ್ತಿದ್ದೇನೆ. ರಾತ್ರಿ ನಾನು ಬಸ್ ಅನ್ನು ಡಿಪೋಗೆ ಬಿಡಲು ಬಂದಾಗ ಗೇಟ್ ಬಳಿ ಹಾರನ್ ಮಾಡಿದ್ರು ಸಹ ಸಂದೀಪ್ ಅವರು ಹೊರಗೆ ಬರಲಿಲ್ಲ. ಇವರು ಬಂದು ಬಸ್ ಚೆಕ್ ಮಾಡಿದ ಮೇಲೆಯೇ ಬಸ್ ಅನ್ನು ಒಳಗೆ ಬಿಡಬೇಕಿತ್ತು. ಬಹಳ ಹೊತ್ತು ಇವರು ಬಾರದ ಕಾರಣಕ್ಕೆ ಇವರ ರೂಂ ನಲ್ಲಿ ಹೋಗಿ ನೋಡಿದಾಗ ಇವರು ಕುಸಿದು ಬಿದ್ದಿದ್ದರು. ತಕ್ಷಣ ನಮ್ಮದೇ ಬಸ್​ನಲ್ಲಿ ಸಂದೀಪ್​ ಅವರನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದಾಗ ಅಷ್ಟೊತ್ತಿಗಾಗಲೇ ಸಂದೀಪ್ ತೀರಿ ಹೋಗಿದ್ದಾರೆ ಎಂದು ವೈದ್ಯರು ತಿಳಿಸಿದರು” ಎಂದರು.

ಶಾಸಕರಿಂದ ಸಂತಾಪ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕೆಎಸ್​ಆರ್​ಟಿಸಿ ಸಿಬ್ಬಂದಿ ಸಂದೀಪ್​ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಘಟನೆ: ಇತ್ತೀಚಿಗೆ ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಶಾಸಕ ಅಶೋಕ್​ ಪಟ್ಟಣ ಅವರ ಬೆಂಬಲದೊಂದಿಗೆ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಸಹೋದರ ಮಲ್ಲಣ್ಣ ಯಾದವಾಡ ಅವರು ಗೆಲುವು ಸಾಧಿಸಿದ್ದಾರೆ. ಈ ಗೆಲುವಿನ ಸಂಭ್ರಮಾಚರಣೆ ಬಳಿಕ ಪಿಕೆಪಿಎಸ್ ಮಾಜಿ ಅಧ್ಯಕ್ಷರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಶಾಸಕ ಅಶೋಕ್ ಪಟ್ಟಣ ಆಪ್ತ ಗಿರಿಯಪ್ಪ ಗಂಟೋಟಿ(40) ಹೃದಯಾಘಾತದಿಂದ ಮೃತಪಟ್ಟಿದ್ದರು. ಕಮಕೇರಿ ನಿವಾಸಿಯಾಗಿದ್ದ ಗಿರಿಯಪ್ಪ, ರಾಮದುರ್ಗ ತಾಲೂಕಿನಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಿದ್ದ ಮಲ್ಲಣ್ಣ ಯಾದವಾಡ ಪರವಾಗಿ ಶಾಸಕ ಅಶೋಕ ಪಟ್ಟಣ ಜೊತೆಗೂಡಿ ಪ್ರಚಾರ ಮಾಡಿದ್ದರು. ಆದರೆ, ಗೆಲುವಿನ ಸಂಭ್ರಮದಲ್ಲಿದ್ದಾಗ ಮೃತಪಟ್ಟಿದ್ದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp