• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಧರ್ಮಸ್ಥಳ ಪ್ರಕರಣ: ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

Sambrama Prabha News by Sambrama Prabha News
November 20, 2025
in Crime News, Exclusive, Latest News
0
ಧರ್ಮಸ್ಥಳ ಪ್ರಕರಣ: ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು

Updated By: Priyalachhi

ಬೆಳ್ತಂಗಡಿ (ದಕ್ಷಿಣ ಕನ್ನಡ) : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್​​ಐಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ. 20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಯ ವರದಿಯನ್ನು ಸಲ್ಲಿಸಿದೆ.

ಬೆಳ್ತಂಗಡಿ ಎಸ್​​ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡದವರು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ವರದಿಯನ್ನು ಸೆಕ್ಷನ್​ 215ರ ಅಡಿಯಲ್ಲಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ. ಹೆಚ್. ಟಿ ಮುಂದೆ ಇಂದು (ನ.20) ಮಧ್ಯಾಹ್ನ 3:15 ಗಂಟೆಗೆ ಸಲ್ಲಿಕೆ ಮಾಡಿದ್ದಾರೆ.

ಎಸ್‌ಐಟಿ ವರದಿಯಲ್ಲಿ ಸುಮಾರು 3,923 ಪುಟಗಳನ್ನು ನಮೂದಿಸಿದ್ದಾರೆ. ಐವರು ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬುವುದಾಗಿಯೂ ವರದಿಯಲ್ಲಿ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ ವರದಿಯಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.

ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ವರದಿಯ ಬಗ್ಗೆ ನ್ಯಾಯಾಲಯ ಪರಿಶೀಲಿಸಿ ಇದರ ಆಧಾರದಲ್ಲಿ ಮುಂದಿನ ತನಿಖೆ ಬಗ್ಗೆ ಸೂಚನೆ ನೀಡುವಂತೆ ವರದಿಯಲ್ಲಿ ಕೇಳಿಕೊಂಡಿರುವುದಾಗಿ ತಿಳಿದು ಬಂದಿದೆ. ಒಟ್ಟು ಪ್ರಕರಣದ ತನಿಖೆ ಮುಗಿಸಿದ ಬಳಿಕ ಮುಂದಿನ ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.

ಧರ್ಮಸ್ಥಳ ಪ್ರಕರಣದ ಬಗ್ಗೆ ಸರ್ಕಾರಕ್ಕೂ SIT ವರದಿ: ಧರ್ಮಸ್ಥಳ ಪ್ರಕರಣ ಸಂಬಂಧ ಸರ್ಕಾರಕ್ಕೂ ವಿಶೇಷ ತನಿಖಾ ತಂಡ (ಎಸ್​ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳನ್ನು ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ನಮಗೂ ಅವರು ವರದಿ ನೀಡುತ್ತಾರೆ: ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕೋರ್ಟ್​​ಗೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗುತ್ತದೆ. ಸರ್ಕಾರಕ್ಕೂ ಅವರು ವರದಿ ಕೊಡುತ್ತಾರೆ. ಸರ್ಕಾರವೇ ಎಸ್‌ಐಟಿ ರಚಿಸಿರುವುದಲ್ವಾ? ನಮಗೂ ಅವರು ವರದಿ ನೀಡುತ್ತಾರೆ. ವರದಿ ಬಂದ ಬಳಿಕ ಏನಿದೆ ಎಂದು ತಿಳಿಯಲಿದೆ. ಏನು ಷಡ್ಯಂತ್ರ ನಡೆದಿದೆ, ಯಾರೆಲ್ಲಾ ಕಾರಣ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.

Tags: ಧರ್ಮಸ್ಥಳ ಪ್ರಕರಣ
Previous Post

ಬೆಂಗಳೂರು ಶೇ. 8.5 ರಷ್ಟು ಬೆಳವಣಿಗೆಯೊಂದಿಗೆ ಮುಂಬೈ, ದೆಹಲಿಗಿಂತ ಹೆಚ್ಚು ವೇಗವಾಗಿ ಬೆಳೆಯುತ್ತಿದೆ

Next Post

ವಾಯು ಗುಣಮಟ್ಟ ಸೂಚ್ಯಂಕ ಪ್ರಕಟ: ರಾಜ್ಯದಲ್ಲೇ ಮೈಸೂರಿಗೆ ಮೊದಲ ಸ್ಥಾನ, ದೇಶದಲ್ಲಿ 3ನೇ ಪಟ್ಟ

Next Post
ವಾಯು ಗುಣಮಟ್ಟ ಸೂಚ್ಯಂಕ ಪ್ರಕಟ: ರಾಜ್ಯದಲ್ಲೇ ಮೈಸೂರಿಗೆ ಮೊದಲ ಸ್ಥಾನ, ದೇಶದಲ್ಲಿ 3ನೇ ಪಟ್ಟ

ವಾಯು ಗುಣಮಟ್ಟ ಸೂಚ್ಯಂಕ ಪ್ರಕಟ: ರಾಜ್ಯದಲ್ಲೇ ಮೈಸೂರಿಗೆ ಮೊದಲ ಸ್ಥಾನ, ದೇಶದಲ್ಲಿ 3ನೇ ಪಟ್ಟ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.