BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

‘ನೋಡಲೇಬೇಕಾದ ಚಿತ್ರ, ಹೆಣ್ಣುಮಕ್ಕಳಿಗೆ ಎಚ್ಚರಿಕೆಯ ಗಂಟೆ’: ‘ಮಾರುತ’ ವೀಕ್ಷಿಸಿದ ಪೊಲೀಸರು

Author Picture
Published On: November 18, 2025

—Advertisement—

Updated By: Priyalachhi

‘ಮಾರುತ’. ಪಡ್ಡೆ ಹುಲಿ ಸಿನಿಮಾ ಖ್ಯಾತಿಯ ಶ್ರೇಯಸ್ ಮಂಜು ಹಾಗೂ ದುನಿಯಾ ವಿಜಯ್ ಅಭಿನಯಿಸಿರುವ ಬಹುನಿರೀಕ್ಷಿತ ಚಿತ್ರ. ಎಸ್.ನಾರಾಯಣ್ ನಿರ್ದೇಶನದ ಈ ಚಿತ್ರ ಇದೇ ವಾರ ಪ್ರೇಕ್ಷಕರೆದುರು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ಬಿಡುಗಡೆಗೂ ಮುನ್ನ ಪೊಲೀಸ್ ಇಲಾಖೆಯವರಿಗಾಗಿ ಚಿತ್ರತಂಡ ವಿಶೇಷ ಪ್ರದರ್ಶನ ಆಯೋಜಿಸಿತ್ತು. ಬೆಂಗಳೂರು ನಗರದ ಭದ್ರತಾ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮಂಜುನಾಥ ಬಾಬು ಸೇರಿದಂತೆ ಪೊಲೀಸ್ ಸಿಬ್ಬಂದಿ ಸಿನಿಮಾ ವೀಕ್ಷಿಸಿದರು.

ಬಳಿಕ ಮಾತನಾಡಿದ ಉಪ ಪೊಲೀಸ್ ಆಯುಕ್ತರಾದ ಮಂಜುನಾಥ್ ಬಾಬು ಅವರು, “ಮೊದಲು ಸಮಾಜಕ್ಕೆ ಇಂಥ ಉತ್ತಮ ಚಿತ್ರವನ್ನು ನಿರ್ಮಾಣ ಮಾಡಿಕೊಟ್ಟ ನಿರ್ಮಾಪಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿರ್ದೇಶಕ ಎಸ್.ನಾರಾಯಣ್ ಅವರು ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ವಿಷಯವನ್ನಿಟ್ಟುಕೊಂಡು ಅದ್ಭುತ ಸಿನಿಮಾ ಮಾಡಿದ್ದಾರೆ. ಚಿತ್ರದಲ್ಲಿರುವ ಎಲ್ಲ ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ. ದುನಿಯಾ ವಿಜಯ್ ಅವರದಂತೂ ಅದ್ಭುತ ಅಭಿನಯ. ಸಾಮಾಜಿಕ ಜಾಲತಾಣಗಳಿಂದ ಎಷ್ಟು ಅನುಕೂಲ ಇದೆಯೋ, ಅಷ್ಟೇ ತೊಂದರೆ ಕೂಡಾ ಇದೆ ಅನ್ನುವುದನ್ನು ಸಿನಿಮಾದಲ್ಲಿ ಉತ್ತಮವಾಗಿ ತೋರಿಸಿದ್ದಾರೆ. ಹಿರಿಯರು, ಕಿರಿಯರು ಎಂಬ ಭೇದ-ಭಾವವಿಲ್ಲದೇ ಎಲ್ಲ ವಯಸ್ಸಿನವರು ಅವಶ್ಯವಾಗಿ ನೋಡುವಂಥ ಸಿನಿಮಾ. ಅದರಲ್ಲೂ ಹೆಣ್ಣುಮಕ್ಕಳಿಗೆ ಎಚ್ಚರಿಕೆಯ ಗಂಟೆ. ಈಗಿನ ಯುವಪೀಳಿಗೆ ಈ ಚಿತ್ರ ನೋಡಿ ತಿಳಿದುಕೊಳ್ಳುವುದು ಬಹಳಷ್ಟಿದೆ. ಎಲ್ಲರೂ ತಪ್ಪದೇ ಕುಟುಂಬ ಸಮೇತ ಹೋಗಿ ಈ ಚಿತ್ರ ವೀಕ್ಷಿಸಿ” ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp