Updated By: Priyalachhi 

ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯ ನ್ಯಾಯಾಲಯಗಳಲ್ಲಿ ಪ್ರಕರಣಗಳು ಅತಿ ಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ ಕೋರ್ಟ್​ ಕೇಸ್ ಸಂಬಂಧಿಸಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಅವರು, “ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಒಟ್ಟು 19 ಸಾವಿರ ಪ್ರಕರಣಗಳು ಬಾಕಿಯಿವೆ. ಈ ಪೈಕಿ ಸುಮಾರು 13 ಸಾವಿರ ಪ್ರಕರಣಗಳು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲೇ ಬಾಕಿ ಇವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲೇ ಹೆಚ್ಚು ಸಂಖ್ಯೆಯಲ್ಲಿ ನ್ಯಾಯಾಲಯ ಪ್ರಕರಣಗಳು ಬಾಕಿಯಿದ್ದರೆ ರಾಜ್ಯದ ಇತರ ಭಾಗಗಳ ಅಧಿಕಾರಿಗಳೊಂದಿಗೆ ಏನೆಂದು ಸಭೆ ನಡೆಸಲಿ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೇವಲ 6 ಸಾವಿರ ಪ್ರಕರಣಗಳು ಮಾತ್ರ ಬಾಕಿ ಇದ್ದು, ಈ ನಾಲ್ಕು ಜಿಲ್ಲೆಗಳ ಅಧಿಕಾರಿಗಳು ತಮ್ಮ ಕೆಲಸಕ್ಕೆ ವೇಗ ನೀಡಿದರೆ ಮಾತ್ರ ರಾಜ್ಯಮಟ್ಟದಲ್ಲಿ ಪ್ರಶ್ನಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

“ಸಭೆಯಲ್ಲಿ ನಾಲ್ಕೂ ಜಿಲ್ಲೆಗಳ ಪ್ರಗತಿಯ ವಿವರಗಳನ್ನು ಪರಿಶೀಲಿಸಿದ ಸಚಿವರು, ಕಳೆದ ಅಕ್ಟೋಬರ್​ನಲ್ಲಿ ಈ ನಾಲ್ಕು ಜಿಲ್ಲೆಗಳಲ್ಲಿ 15,364 ಪ್ರಕರಣಗಳು ಬಾಕಿ ಇದ್ದದ್ದು ಈಗ 13,610ಕ್ಕೆ ಇಳಿದಿರುವುದು ಉತ್ತಮ ಬೆಳವಣಿಗೆ. ಆದರೂ, ಮಿಸ್ಸಿಂಗ್​ ರೆಕಾರ್ಡ್​ಗಳು, ಆರ್ ಸಿಸಿಎಂಎಸ್ ನಲ್ಲಿ ವಿಲೇವಾರಿ ಆಗದ ಪ್ರಕರಣಗಳು ಹಾಗೂ ಅನರ್ಹ ಪ್ರಕರಣಗಳು ಹಾಗೂ ಆದೇಶಕ್ಕಾಗಿ ಕಾಯ್ದಿರಿಸಿದ ಪ್ರಕರಣಗಳನ್ನು ಜನವರಿ ಅಂತ್ಯದೊಳಗೆ ಮುಗಿಸಿದರೆ ಈ ಸಂಖ್ಯೆ ಮತ್ತಷ್ಟು ಸುಧಾರಿಸುತ್ತದೆ” ಎಂದು ಸಲಹೆ ನೀಡಿದರು.
Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version