• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

AI ತಂತ್ರಜ್ಞಾನ ಬಳಕೆಗೆ ರಾಜ್ಯ ಸರ್ಕಾರ ಮುಂದು

Sambrama Prabha News by Sambrama Prabha News
February 6, 2026
in Latest News, Nation News
0
AI ತಂತ್ರಜ್ಞಾನ ಬಳಕೆಗೆ ರಾಜ್ಯ ಸರ್ಕಾರ ಮುಂದು

Updated By: Priyalachhi

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ, ನಕಲಿ ಸುದ್ದಿ, ತಪ್ಪು ಮಾಹಿತಿಯ ಹರಡುವಿಕೆ ಹಾಗೂ ದುರುದ್ದೇಶಿತಪೂರಿತ ಪ್ರಚಾರಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ‘ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್’ ಅಭಿವೃದ್ಧಿಪಡಿಸಲು ನಿರ್ಧರಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟವು ಗುರುವಾರ ನಡೆದ ಸಭೆಯಲ್ಲಿ ರೂ. 67.26 ಕೋಟಿ ವೆಚ್ಚದಲ್ಲಿ AI ತಂತ್ರಜ್ಞಾನ ಆಧಾರಿತ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ.

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ಮಸೂದೆ–2025ಗೆ ಅನುಮೋದನೆ ನೀಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದು, ಇದೀಗ ಮಸೂದೆಯು ರಾಷ್ಟ್ರಪತಿ ಅಂಗಳ ತಲುಪಿದೆ. ಹೀಗಾಗಿ ಮಸೂದೆ ಜಾರಿ ವಿಳಂಬವಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣದ ಕ್ರಮವಾಗಿ ನೀತಿಗತ ಮಾರ್ಗದ ಮೂಲಕ ದ್ವೇಷ ಭಾಷಣ ಮತ್ತು ನಕಲಿ ಸುದ್ದಿಗಳನ್ನು ನಿಯಂತ್ರಿಸಲು ಮುಂದಾಗಿದೆ.

ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು, ಸುದ್ದಿ ಮತ್ತು ಪ್ರಚಾರ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ, ಸುಳ್ಳು ಸುದ್ದಿ ಮೇಲೆ ಕಣ್ಣಿಡಲು ಎಐ ಆಧಾರಿತ ತಂತ್ರಾಂಶ ವ್ಯವಸ್ಥೆ ಮಾಡಲು ಸಂಪುಟ ನಿರ್ಧಾರ ಮಾಡಿದೆ ಎಂದು ಹೇಳಿದರು.

Tags: AI
Previous Post

ಶುಕ್ರವಾರದ ಪಂಚಾಂಗ, ಭವಿಷ್ಯ

Next Post

ನಮ್ಮ ಮೆಟ್ರೋ ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ: ಸಿಎಂ

Next Post
ನಮ್ಮ ಮೆಟ್ರೋ ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ: ಸಿಎಂ

ನಮ್ಮ ಮೆಟ್ರೋ ದರ ಏರಿಕೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ: ಸಿಎಂ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.