Updated By: Priyalachhi

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ, ನಕಲಿ ಸುದ್ದಿ, ತಪ್ಪು ಮಾಹಿತಿಯ ಹರಡುವಿಕೆ ಹಾಗೂ ದುರುದ್ದೇಶಿತಪೂರಿತ ಪ್ರಚಾರಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ‘ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್’ ಅಭಿವೃದ್ಧಿಪಡಿಸಲು ನಿರ್ಧರಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟವು ಗುರುವಾರ ನಡೆದ ಸಭೆಯಲ್ಲಿ ರೂ. 67.26 ಕೋಟಿ ವೆಚ್ಚದಲ್ಲಿ AI ತಂತ್ರಜ್ಞಾನ ಆಧಾರಿತ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ.

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ಮಸೂದೆ–2025ಗೆ ಅನುಮೋದನೆ ನೀಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದು, ಇದೀಗ ಮಸೂದೆಯು ರಾಷ್ಟ್ರಪತಿ ಅಂಗಳ ತಲುಪಿದೆ. ಹೀಗಾಗಿ ಮಸೂದೆ ಜಾರಿ ವಿಳಂಬವಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣದ ಕ್ರಮವಾಗಿ ನೀತಿಗತ ಮಾರ್ಗದ ಮೂಲಕ ದ್ವೇಷ ಭಾಷಣ ಮತ್ತು ನಕಲಿ ಸುದ್ದಿಗಳನ್ನು ನಿಯಂತ್ರಿಸಲು ಮುಂದಾಗಿದೆ.

ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು, ಸುದ್ದಿ ಮತ್ತು ಪ್ರಚಾರ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ, ಸುಳ್ಳು ಸುದ್ದಿ ಮೇಲೆ ಕಣ್ಣಿಡಲು ಎಐ ಆಧಾರಿತ ತಂತ್ರಾಂಶ ವ್ಯವಸ್ಥೆ ಮಾಡಲು ಸಂಪುಟ ನಿರ್ಧಾರ ಮಾಡಿದೆ ಎಂದು ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version