Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಕೊಲೆಯಾದ ರೀತಿಯಲ್ಲಿ ಬಿಬಿಎಂ ವಿದ್ಯಾರ್ಥಿನಿಯ ಶವ ಪತ್ತೆ!
Crime News

ಕೊಲೆಯಾದ ರೀತಿಯಲ್ಲಿ ಬಿಬಿಎಂ ವಿದ್ಯಾರ್ಥಿನಿಯ ಶವ ಪತ್ತೆ!

Sambrama Prabha NewsBy Sambrama Prabha NewsNovember 25, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು : ಕೊಲೆಯಾದ ರೀತಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ನೆಲಮಂಗಲ ಬಳಿ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ದೇವಿಶ್ರೀ (21) ಕೊಲೆಯಾದ ರೀತಿಯಲ್ಲಿ ಪತ್ತೆಯಾದ ವಿದ್ಯಾರ್ಥಿನಿ.

ನೆಲಮಂಗಲ ಬಳಿಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕೆಯ ಜೊತೆ ರೂಮ್​ಗೆ ಬಂದಿದ್ದ ಆಕೆಯ ಸ್ನೇಹಿತ ಘಟನೆ ಬಳಿಕ ನಾಪತ್ತೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಬೆನ್ನತ್ತಿದ್ದಾರೆ.

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ರೆಡ್ಡಪ್ಪ ಜಗದಂಭ ದಂಪತಿಯ ಮಗಳಾದ ದೇವಿಶ್ರೀ, ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು ಬೆಂಗಳೂರಿಗೆ ಬಂದಿದ್ದಳು. ಪ್ರತಿಷ್ಠಿತ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ಈಕೆ, ತಮ್ಮೇನಹಳ್ಳಿಯ ಪಿಜಿಯೊಂದರಲ್ಲಿ ವಾಸವಾಗಿದ್ದಳು.

ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆದರೆ, ನಾಪತ್ತೆಯಾಗಿರುವ ಆಕೆಯ ಸ್ನೇಹಿತನಿಗಾಗಿ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೀಲ ಶಂಕಿಸಿ ಪತ್ನಿಯ ಕೊಲೆ (ಪ್ರತ್ಯೇಕ ಘಟನೆ): ಶೀಲ ಶಂಕಿಸಿ ಪತಿಯೊಬ್ಬ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕು ಜನ್ನಘಟ್ಟ ಗ್ರಾಮದಲ್ಲಿ ನಡೆದಿದೆ. ಕಾವ್ಯ (28) ಕೊಲೆಯಾದ ಪತ್ನಿ. ಶಿವರಾಜ್ ಕೊಲೆ ಮಾಡಿದ ಪತಿ.

8 ವರ್ಷಗಳ ಹಿಂದೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಮೂಲದ ಕಾವ್ಯಾಳನ್ನ ಶಿವರಾಜ್ ಮದುವೆಯಾಗಿದ್ದ. ಪತಿ – ಪತ್ನಿಗೆ 6 ವರ್ಷದ ಒಂದು ಹೆಣ್ಣು ಮಗು ಸಹ ಇದೆ. ಪತ್ನಿ ಪ್ರಜ್ಞೆ ತಪ್ಪಿದ್ದಾಳೆ ಎಂದು ನಾಟಕವಾಡಿದ್ದ ಪತಿ, ಪತ್ನಿಯನ್ನ ಕೊಲೆ ಮಾಡಿ ಪೊಲೀಸರ ಎದುರು ತಪ್ಪೊಪ್ಪಿಕೊಂಡಿದ್ದಾನೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಜಸ್ಟಿನ್ ಜೋಸೆಫ್ (21) ಹಾಗೂ ಸ್ಟೆರಿನ್ ಎಲ್ಜಾ ಸಜಿ (19) ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸಂಭವಿಸಿತ್ತು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ರೈಲ್ವೆ ಠಾಣೆ ಪೊಲೀಸರು, ಮೃತರ ಪೋಷಕರಿಗೆ ಮಾಹಿತಿ ರವಾನಿಸಿದ್ದಾರೆ.

ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್​ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಸೂಪರ್ ಫಾಸ್ಟ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿದ್ದಾರೆ. ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರ ವಿವರಗಳನ್ನು ಪರಿಶೀಲಿಸಿದ ನಂತರ ಅವರ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ವಿದ್ಯಾರ್ಥಿನಿ
Add as Preferred on Google Follow on Google News
Share. WhatsApp Facebook Twitter Telegram
Previous Articleಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್
Next Article ಸತತ 2ನೇ ಬಾರಿಗೆ ಕಬಡ್ಡಿ ವಿಶ್ವಕಪ್​ ಗೆದ್ದ ಭಾರತ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮಹಿಳಾ ಸ್ವೀಕಾರ ಕೇಂದ್ರದಲ್ಲಿ ಹೆಣ್ಣು ಮಕ್ಕಳ ದುರುಪಯೋಗ ಆರೋಪ; ಬೆಂಗಳೂರು ಕೇಂದ್ರವೊಂದರಲ್ಲೇ 1,776 ಮಹಿಳೆ, ಹೆಣ್ಣು ಮಕ್ಕಳ ನಾಪತ್ತೆ, ಗಡುವು ಮೀರಿದರೂ ವರದಿ ನೀಡದ ಡಿಜಿಪಿ, ಸರ್ಕಾರದ ಕಾರ್ಯದರ್ಶಿ

August 11, 2026

ಪಾವಗಡ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ – ಸರ್ಕಾರಿ ಅಧಿಕಾರಿಯ ಕಾಮಲೀಲೆ ಬಹಿರಂಗ!

July 31, 2026

ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್

July 22, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.