Updated By: Priyalachhi

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ತಂಡವನ್ನು ಪ್ರಕಟಿಸಿದೆ. ಗಾಯದ ಕಾರಣ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಶುಭಮನ್ ಗಿಲ್ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದ್ದು, ಕೆ.ಎಲ್.ರಾಹುಲ್​ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.

ರಿಷಭ್ ಪಂತ್ ಮತ್ತು ರುತುರಾಜ್ ಗಾಯಕ್ವಾಡ್ ಅವರೂ ತಂಡ ಸೇರಿದ್ದಾರೆ. ವೇಗದ ಬೌಲರ್​ಗಳಾದ ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ಮತ್ತು ಅರ್ಷದೀಪ್ ಸಿಂಗ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಭಾರತದ ಏಕದಿನ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆ.ಎಲ್.ರಾಹುಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಎಲ್ಲಿ, ಯಾವಾಗ ಪಂದ್ಯ?:

ಮೊದಲ ಏಕದಿನ ಪಂದ್ಯ: ಭಾನುವಾರ, ನವೆಂಬರ್ 30 (ರಾಂಚಿ)

ಎರಡನೇ ಏಕದಿನ ಪಂದ್ಯ: ಬುಧವಾರ, ಡಿಸೆಂಬರ್ 3 (ರಾಯ್‌ಪುರ)

ಮೂರನೇ ಏಕದಿನ ಪಂದ್ಯ: ಶನಿವಾರ, ಡಿಸೆಂಬರ್ 6 (ವಿಶಾಖಪಟ್ಟಣಂ)

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version