BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಯುವಕನ ಲಾಡ್ಜ್​ಗೆ ಕರೆದೊಯ್ದು 58 ಗ್ರಾಂ ಚಿನ್ನಾಭರಣ ದೋಚಿದ ಯುವತಿ

Author Picture
Published On: November 12, 2025

—Advertisement—

Updated By: Priyalachhi

ಬೆಂಗಳೂರು: ಡೇಟಿಂಗ್ ಆ್ಯಪ್ ಮುಖಾಂತರ ಪರಿಚಯವಾದ ಯುವಕನನ್ನು ಯುವತಿಯೊಬ್ಬಳು ಲಾಡ್ಜ್​ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ಅವಿನಾಶ್ ಕುಮಾರ್ ವಂಚನೆಗೊಳಗಾದವ. ಈತ ನೀಡಿದ ದೂರಿನ ಮೇರೆಗೆ ಕವಿಪ್ರಿಯಾ ಎಂಬಾಕೆಯ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶೋಧಕಾರ್ಯ ನಡೆಸುತ್ತಿದ್ದಾರೆ.

ಪೀಣ್ಯದ ನಾಗಸಂದ್ರದ ಪಿಜಿ(ಪೇಯಿಂಗ್ ಗೆಸ್ಟ್)ಯೊಂದರಲ್ಲಿ ವಾಸವಾಗಿದ್ದ ಅವಿನಾಶ್, ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ಹ್ಯಾಪನ್ ಆ್ಯಪ್ ಹೆಸರಿನ ಡೇಟಿಂಗ್ ಆ್ಯಪ್​ನಲ್ಲಿ ಯುವಕನನ್ನು ಆರೋಪಿತೆ ಪರಿಚಯಿಸಿಕೊಂಡಿದ್ದಳು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಪೋನ್​ನಲ್ಲಿ ಮಾತನಾಡುತ್ತಿದ್ದರು. ಮಾತುಕತೆಯಂತೆ ನ.1ರಂದು ಇಂದಿರಾನಗರದ ರೆಸ್ಟೋರೆಂಟ್​ವೊಂದರಲ್ಲಿ ಇಬ್ಬರೂ ಭೇಟಿಯಾಗಿ ಮದ್ಯ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ಧಾರೆ.

ಮದ್ಯ ಸೇವಿಸಿಯದ ಬಳಿಕ ನಾನು ಪಿಜಿಗೆ ಹೋಗಲು ಸಾಧ್ಯವಿಲ್ಲ ಎಂದೆದೆ. ಹೀಗಾಗಿ ಯುವತಿ ಲಾಡ್ಜ್​ವೊಂದರಲ್ಲಿ ರೂಮ್ ಬುಕ್ ಮಾಡಿದಳು. ಆನ್‌ಲೈನ್​ನಲ್ಲಿ ಆರ್ಡರ್ ಮಾಡಿದ್ದ ಊಟವನ್ನು ಇಬ್ಬರು ಕುಳಿತುಕೊಂಡು ಸೇವಿಸಿದೆವು. ಬಳಿಕ ಯುವತಿ ಕುಡಿಯಲು ನೀರು ಕೊಟ್ಟಳು. ಸೇವಿಸಿದ ಬಳಿಕ ನನಗೆ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿತು. ಬೆಳಗ್ಗೆದ್ದು ನೋಡಿದಾಗ ಚಿನ್ನದ ಸರ, ಚಿನ್ನದ ಕೈಬಳೆ, 10 ಸಾವಿರ ನಗದು ಸೇರಿದಂತೆ ಒಟ್ಟು 6.80 ಲಕ್ಷ ರೂ ಮೌಲ್ಯದ 58 ಗ್ರಾಂ ಚಿನ್ನಾಭರಣ ಇರಲಿಲ್ಲ. ಯುವತಿ ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾಳೆ ಎಂದು ಅವಿನಾಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp