BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಬೆಂಗಳೂರು: ATM ವಾಹನ ತಡೆದು ₹7 ಕೋಟಿಗೂ ಹೆಚ್ಚು ಹಣ ದರೋಡೆ

Author Picture
Published On: November 19, 2025

—Advertisement—

Updated By: Priyalachhi

ಬೆಂಗಳೂರು: ನಗರದಲ್ಲಿಂದು ಕೋಟ್ಯಂತರ ರೂಪಾಯಿ ದರೋಡೆ ನಡೆದಿದೆ. ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ಯಂತ್ರಗಳಿಗೆ ಹಣ ತುಂಬಿಸಲು ಕೊಂಡೊಯ್ಯುತ್ತಿದ್ದ ವಾಹನದಿಂದ 7.11 ಕೋಟಿ ರೂಪಾಯಿ ದೋಚಿದ್ದಾರೆ. ನಗರದ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ದುಷ್ಕೃತ್ಯ ನಡೆದಿದೆ.

ಏನಾಯ್ತು?:

  • ಸರ್ಕಾರಿ ವಾಹನದಂತೆ ಸ್ಟಿಕ್ಕರ್ ಹಾಕಿದ್ದ ಇನ್ನೋವಾ ಕಾರಿನಲ್ಲಿ ಬಂದಿದ್ದ 5ರಿಂದ 6 ಜನರಿದ್ದ ದರೋಡೆಕೋರರ ಗುಂಪು​ ಸೌತ್ ಎಂಡ್ ಸರ್ಕಲ್ ಬಳಿ ಎಟಿಂಎಗೆ ಹಣ ತುಂಬಿಸಿ ಹೊರಟಿದ್ದ ಕಸ್ಟೋಡಿಯನ್ ವಾಹನವನ್ನು ತಡೆದಿದ್ದಾರೆ.
  • ಬಳಿಕ ತಾವು ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಹಾಗೂ ಆರ್‌ಬಿಐ ಎನ್ನುತ್ತಾ ಕಸ್ಟೋಡಿಯನ್ ವಾಹನದಲ್ಲಿದ್ದ ಗನ್‌ಮ್ಯಾನ್ ಸಹಿತ ಎಲ್ಲ ಸಿಬ್ಬಂದಿಯನ್ನು ಕೆಳಗಿಳಿಸಿದ್ದಾರೆ.
  • ಚಾಲಕನನ್ನು ಮಾತ್ರ ಕೂರಿಸಿಕೊಂಡು ಜಯದೇವ ಆಸ್ಪತ್ರೆ ಕಡೆಯಿಂದ ಡೈರಿ ಸರ್ಕಲ್ ಕಡೆಗೆ ವಾಹನವನ್ನು ಕರೆದೊಯ್ದಿದ್ದಾರೆ.
  • ಫ್ಲೈ ಓವರ್ ಮೇಲೆ ಕಸ್ಟೋಡಿಯನ್ ವಾಹನವನ್ನು ನಿಲ್ಲಿಸಿ ಚಾಲಕನನ್ನು ಬೆದರಿಸಿ, 7.11 ಕೋಟಿ ರೂ ಹಣವಿದ್ದ ಪೆಟ್ಟಿಗೆಯನ್ನು ತಮ್ಮ ಕಾರಿಗೆ ಹಾಕಿಕೊಂಡು ಪರಾರಿಯಾಗಿದ್ದಾರೆ.
  • ದರೋಡೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು, ಸೋಕೋ ಟೀಂ ಅಧಿಕಾರಿಗಳು ಆಗಮಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ಭೇಟಿ ನೀಡಿದ್ದು ಮಾಹಿತಿ ಪಡೆದಿದ್ದಾರೆ. ಬೆಂಗಳೂರಿನ ಎಲ್ಲ ವಿಭಾಗಗಳ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು ಆರೋಪಿಗಳ ಪತ್ತೆ ಕಾರ್ಯ‌ ತೀವ್ರಗೊಂಡಿದೆ.

    ಅಂದಾಜು 7 ಕೋಟಿ ಹಣ ದರೋಡೆ- ಪೊಲೀಸ್ ಕಮೀಷನರ್: ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸರು ಆಯುಕ್ತ ಸೀಮಂತ್​ ಕುಮಾರ್​ ಸಿಂಗ್​, “ಸಿದ್ದಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದಕ್ಷಿಣ ಡಿಸಿಪಿ ಮತ್ತು ಪಶ್ಚಿಮ ವಿಭಾಗ ಜಂಟಿ ಪೊಲೀಸ್​ ಆಯುಕ್ತರು ಸ್ಥಳದಲ್ಲಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಅಂದಾಜು 7 ಕೋಟಿ ಹಣ ದರೋಡೆಯಾಗಿದೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಚಾಲಕನ ಹೇಳಿಕೆ ಕೂಡ ಪಡೆಯಲಾಗುತ್ತಿದೆ. ದರೋಡೆಕೋರರು ಶಸ್ತ್ರಾಸ್ತ್ರ ಹೊಂದಿದ್ದರಾ ಎಂಬ ಕುರಿತು ಕೂಡ ವಿಚಾರಣೆ ನಡೆಸಲಾಗುತ್ತಿದೆ. ನಗರದ ಸುತ್ತ ನಾಕಾಬಂದಿ ಹಾಕಿದ್ದು, ತಮ್ಮ ತಂಡ ಎಲ್ಲೆಡೆ ಕಾರ್ಯಪ್ರವೃತ್ತವಾಗಿದೆ. ಕಂಟ್ರೋಲ್​ ರೂಮ್​, ಬೇರೆ ಬೇರೆ ತಾಂತ್ರಿಕ ವಿಭಾಗ ಸೇರಿದಂತೆ ಎಲ್ಲರೂ ಆರೋಪಿಗಳನ್ನು ಪತ್ತೆ ಮಾಡುವ ಕಾರ್ಯದಲ್ಲಿ ನಿರತರಾಗಿದ್ದೇವೆ” ಎಂದು ಮಾಹಿತಿ ನೀಡಿದರು.

    ಶಂಕಿತ ಆರೋಪಿಗಳ ಚಿತ್ರ ಬಿಡುಗಡೆ: ಚಾಲಕ ನೀಡಿದ ಪ್ರಾಥಮಿಕ ಮಾಹಿತಿ ಅನುಸಾರ ಹಳೆ ಆರೋಪಿಗಳು ಹಾಗು ಕೆಲವು ಶಂಕಿತರೂ ಸೇರಿ 6 ಜನರ ಫೋಟೋ ಬಿಡುಗಡೆ ಮಾಡಲಾಗಿದೆ. ನಾಕಾ ಬಂದಿಯಲ್ಲಿರುವ ಸಿಬ್ಬಂದಿಗೆ ಈ ಫೋಟೊಗಳನ್ನು ರವಾನಿಸಿದ್ದು, ಪರಿಶೀಲನೆ ಮಾಡುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp