Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಘನತ್ಯಾಜ್ಯ ಟಿಪ್ಪಿಂಗ್‌ ಶುಲ್ಕ ನಿಗದಿಯಲ್ಲಿ ಭಾರೀ ಹಗರಣ: ಸದ್ದಿಲ್ಲದೇ 39,437 ಕೋಟಿ ರೂ. ಮೊತ್ತಕ್ಕೆ ಕ್ಯಾಬಿನೆಟ್ ಒಪ್ಪಿಗೆ!
Exclusive Latest News

ಘನತ್ಯಾಜ್ಯ ಟಿಪ್ಪಿಂಗ್‌ ಶುಲ್ಕ ನಿಗದಿಯಲ್ಲಿ ಭಾರೀ ಹಗರಣ: ಸದ್ದಿಲ್ಲದೇ 39,437 ಕೋಟಿ ರೂ. ಮೊತ್ತಕ್ಕೆ ಕ್ಯಾಬಿನೆಟ್ ಒಪ್ಪಿಗೆ!

Sub EditorBy Sub EditorMay 26, 2026No Comments2 Mins Read
Share WhatsApp Facebook Twitter Telegram
CM DCM
Share
WhatsApp Facebook Twitter Telegram

ಬೆಂಗಳೂರು: ರಾಜಧಾನಿ ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆ (MSW) ಯೋಜನೆಗೆ ಸಂಬಂಧಿಸಿದಂತೆ ಟಿಪ್ಪಿಂಗ್‌ ಶುಲ್ಕ ನಿಗದಿಯಲ್ಲಿ ಭಾರೀ ಅಕ್ರಮವೊಂದು ಬೆಳಕಿಗೆ ಬಂದಿದೆ. ಈ ಕುರಿತು ಸಮಗ್ರ ತನಿಖಾ ವರದಿ ಪ್ರಕಟಿಸಿರುವ ದಿ ಫೈಲ್‌ ಕನ್ನಡ ತನಿಖಾ ನ್ಯೂಸ್‌ ಪೋರ್ಟಲ್‌ ಪ್ರಕರಣದ ಗಂಭೀರತೆಯನ್ನು ಜನರ ಮುಂದಿಟ್ಟಿದೆ.

ಆರ್ಥಿಕ ಇಲಾಖೆಯ ಕಟ್ಟುನಿಟ್ಟಿನ ಎಚ್ಚರಿಕೆ ಹಾಗೂ ವಿರೋಧದ ನಡುವೆಯೂ ರಾಜ್ಯ ಸಚಿವ ಸಂಪುಟವು ಸದ್ದಿಲ್ಲದೇ 39,437.37 ಕೋಟಿ ರೂಪಾಯಿಗಳ ಪರಿಷ್ಕೃತ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ತ್ಯಾಜ್ಯವನ್ನು ಸಾಗಾಣಿಕೆ ಕೇಂದ್ರಗಳಿಂದ ನಿಗದಿತ ಸಂಸ್ಕರಣೆ ಕೇಂದ್ರಗಳಿಗೆ ದ್ವಿತೀಯ ಸಾಗಾಣಿಕೆ, ಸಂಸ್ಕರಣೆ ಮತ್ತು ವಿಲೇವಾರಿ ಮಾಡುವ ಕಾರ್ಯಕ್ಕಾಗಿ ಬರೋಬ್ಬರಿ 30 ವರ್ಷಗಳ ದೀರ್ಘಾವಧಿಗೆ ಈ ಟೆಂಡರ್ ನೀಡಲಾಗಿದ್ದು, ವಾರ್ಷಿಕ ಶೇ.5 ರಷ್ಟು ಶುಲ್ಕ ಏರಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಹಣಕಾಸು ಇಲಾಖೆಯ ಎಚ್ಚರಿಕೆ ಕಡೆಗಣನೆ

ಒಬ್ಬರೇ ವೆಂಡರ್‌ಗೆ 30 ವರ್ಷಗಳ ಕಾಲ ಗುತ್ತಿಗೆ ನೀಡಿದರೆ, ಸರ್ಕಾರವು ಕೇವಲ ಅವರೊಬ್ಬರನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ ಎಂದು ಆರ್ಥಿಕ ಇಲಾಖೆ ಎಚ್ಚರಿಸಿತ್ತು. ಅಲ್ಲದೆ, ವಾರ್ಷಿಕ ಶೇ.5 ರಷ್ಟು ದರ ಏರಿಕೆ ನೀಡಿದರೆ, 30 ವರ್ಷಗಳ ಅಂತ್ಯಕ್ಕೆ ಮೂಲ ದರವು ಪ್ರಸ್ತುತ ದರಕ್ಕಿಂತ ಶೇಕಡಾ 430% ರಷ್ಟು ಹೆಚ್ಚಾಗಲಿದೆ. ಹೀಗಾಗಿ ದರ ಏರಿಕೆಯನ್ನು ಶೇ. 2.5 ಕ್ಕೆ ಮಿತಿಗೊಳಿಸಬೇಕು ಎಂದು ಸಲಹೆ ನೀಡಿತ್ತು. ಆದರೆ, ಈ ಯಾವುದೇ ಎಚ್ಚರಿಕೆಗಳನ್ನು ಪರಿಗಣಿಸದೆ ಸರ್ಕಾರ ಗುತ್ತಿಗೆಗೆ ಅಸ್ತು ಎಂದಿದೆ.

ಕ್ಯಾಬಿನೆಟ್‌ನಲ್ಲಿ ದಿಢೀರ್ ಅನುಮೋದನೆ!

ಅಚ್ಚರಿಯೆಂದರೆ, ಮೇ 22, 2026 ರಂದು ನಡೆದ ಸಚಿವ ಸಂಪುಟ ಸಭೆಯ ಮುಖ್ಯ ಕಾರ್ಯಸೂಚಿಯಲ್ಲಿ ಈ ವಿಚಾರವೇ ಇರಲಿಲ್ಲ. ಸಭೆ ಮುಕ್ತಾಯಗೊಳ್ಳಲು ಕೆಲವೇ ನಿಮಿಷಗಳು ಬಾಕಿ ಇರುವಾಗ, ದಿಢೀರನೆ ಹೆಚ್ಚುವರಿ ಕಾರ್ಯಸೂಚಿಯಲ್ಲಿ (Additional Agenda) ಈ ವಿಷಯವನ್ನು ತಂದು ಒಪ್ಪಿಗೆ ಪಡೆಯಲಾಗಿದೆ. ಇದರಿಂದಾಗಿ ಬಹುತೇಕ ಸಚಿವರಿಗೂ ಈ ಬೃಹತ್ ಮೊತ್ತದ ಯೋಜನೆಯ ಪೂರ್ಣ ಮಾಹಿತಿ ಇಲ್ಲದಂತಾಗಿದೆ.

ಭೂಮಿಯೇ ಇಲ್ಲದೆ ಟೆಂಡರ್ ಫೈನಲ್

ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಬೇಕಾದ ಜಾಗವನ್ನು ಇನ್ನೂ ವಶಕ್ಕೆ ಪಡೆಯದೆ, ಭೂಮಿಯ ಲಭ್ಯತೆಯೇ ಇಲ್ಲದಿದ್ದರೂ ಟೆಂಡರ್ ಅಂತಿಮಗೊಳಿಸಿರುವುದು ಸಾರ್ವಜನಿಕ ಸಂಪನ್ಮೂಲಗಳ ದುರುಪಯೋಗಕ್ಕೆ ನೇರ ದಾರಿಯಾಗಿದೆ.

ಯತ್ನಾಳ್ ಪತ್ರಕ್ಕೂ ಡೋಂಟ್ ಕೇರ್

ಬೆಂಗಳೂರು ಘನತ್ಯಾಜ್ಯ ನಿರ್ವಹಣೆಯ ಉತ್ತರ ಮತ್ತು ದಕ್ಷಿಣ ಪ್ಯಾಕೇಜ್‌ಗಳ ಟೆಂಡರ್‌ನಲ್ಲಿ ನಿರ್ದಿಷ್ಟ ಕಂಪನಿಯೊಂದಕ್ಕೆ (ಡೆಲ್ಲಿ ಎಂಎಸ್‌ಡಬ್ಲ್ಯೂ ಸೊಲ್ಯೂಷನ್ಸ್‌) ಅನುಕೂಲ ಮಾಡಿಕೊಡಲು ಟೆಂಡರ್ ಷರತ್ತುಗಳನ್ನೇ ಬದಲಾಯಿಸಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಆರ್ಥಿಕ ಇಲಾಖೆಯು ಈ ಪತ್ರದ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ, ತಜ್ಞರ ಸಮಿತಿ ರಚಿಸುವಂತೆ ಸೂಚಿಸಿತ್ತು. ಆದರೆ, ಅದನ್ನೂ ಕಡೆಗಣಿಸಲಾಗಿದೆ.

ದಕ್ಷಿಣ ಪ್ಯಾಕೇಜ್‌ಗೆ ಶೇ. 19.43 ರಷ್ಟು ಹೆಚ್ಚುವರಿ ಪಾವತಿ

ಮೂರು ಬಾರಿ ಕರೆಯಲಾದ ಟೆಂಡರ್ ಪ್ರಕ್ರಿಯೆಯ ನಂತರ ಡೆಲ್ಲಿ ಎಂಎಸ್‌ಡಬ್ಲ್ಯೂ ಸೊಲ್ಯೂಷನ್ಸ್ ಸಂಸ್ಥೆಯು ಎಲ್-1 ಆಗಿ ಹೊರಹೊಮ್ಮಿತ್ತು. ಹಲವು ಸುತ್ತಿನ ದರ ಸಂಧಾನಗಳ ನಂತರ ಅಂತಿಮವಾಗಿ ಪ್ರತಿ ಟನ್ ತ್ಯಾಜ್ಯಕ್ಕೆ 2,151 ರೂ. ಟಿಪ್ಪಿಂಗ್ ಶುಲ್ಕ ನಿಗದಿಪಡಿಸಲಾಗಿದೆ. ಇದು ಟೆಂಡರ್ ಅಂದಾಜು ಮೊತ್ತಕ್ಕಿಂತ ಶೇ. 19.43 ರಷ್ಟು ಹೆಚ್ಚಾಗಿದೆ.

ಒಟ್ಟಾರೆಯಾಗಿ, ಯಾವುದೇ ಸೂಕ್ತ ಪರಿಶೀಲನೆ ಇಲ್ಲದೆ, ತಜ್ಞರ ಸಮಿತಿ ವರದಿಯನ್ನೂ ಕಾಯದೆ ಸಾವಿರಾರು ಕೋಟಿ ರೂಪಾಯಿಗಳ ಬಿಲ್‌ಗೆ ಕ್ಯಾಬಿನೆಟ್ ಗ್ರೀನ್ ಸಿಗ್ನಲ್ ನೀಡಿರುವುದು ಇದೀಗ ಆಡಳಿತ ವಲಯದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಪೂರ್ಣ ವರಿಯನ್ನು the-file-in ನಲ್ಲಿ ಓದಿ

ಒಟ್ಟು ಯೋಜನೆ ಮೊತ್ತ
₹39,437.37 ಕೋಟಿ
ಸದ್ದಿಲ್ಲದೇ ಕ್ಯಾಬಿನೆಟ್ ಅನುಮೋದನೆ!

ಗುತ್ತಿಗೆ ಅವಧಿ
30 ವರ್ಷಗಳು
ದೀರ್ಘಾವಧಿ ಟೆಂಡರ್ ಹೊರೆ

ವಾರ್ಷಿಕ ದರ ಏರಿಕೆ
5% ಹೆಚ್ಚಳ
ಆರ್ಥಿಕ ಇಲಾಖೆ ಹೇಳಿದ್ದು: 2.5% ಮಾತ್ರ

30ನೇ ವರ್ಷಕ್ಕೆ ದರ ಏರಿಕೆ
430% ಹೆಚ್ಚಳ
ಮೂಲ ದರಕ್ಕಿಂತ ಬೃಹತ್ ಏರಿಕೆ

ಪ್ರತಿ ಟನ್ ಟಿಪ್ಪಿಂಗ್ ಶುಲ್ಕ
₹2,151
ದಕ್ಷಿಣ ಪ್ಯಾಕೇಜ್ ದರ

ಹೆಚ್ಚುವರಿ ಪಾವತಿ ಭರ
19.43%
ಅಂದಾಜು ಮೊತ್ತಕ್ಕಿಂತ ಅಧಿಕ
ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
BBMP Waste Management Bengaluru MSW Scam Garbage Tender Scam Karnataka Cabinet Sambramaprabha Exclusive Tipping Fee Scam ಆರ್ಥಿಕ ಇಲಾಖೆ ಎಚ್ಚರಿಕೆ ಕ್ಯಾಬಿನೆಟ್ ಅನುಮೋದನೆ ಘನತ್ಯಾಜ್ಯ ನಿರ್ವಹಣೆ ಟಿಪ್ಪಿಂಗ್ ಶುಲ್ಕ ಹಗರಣ ಡೆಲ್ಲಿ ಎಂಎಸ್‌ಡಬ್ಲ್ಯೂ ಸೊಲ್ಯೂಷನ್ಸ್ ಬಿಬಿಎಂಪಿ ಟೆಂಡರ್ ಅಕ್ರಮ ಬೆಂಗಳೂರು ತ್ಯಾಜ್ಯ ಹಗರಣ ಯತ್ನಾಳ್ ಪತ್ರ
Add as Preferred on Google Follow on Google News
Share. WhatsApp Facebook Twitter Telegram
Previous Articleವಿಚಿತ್ರ ತಿರುವು: ಹಸು ಕಾಪಾಡುತ್ತಿರುವ ಮುಸ್ಲಿಮರು, ಮಾರಾಟಕ್ಕೆ ಅರ್ಥಿಸುತ್ತಿರುವ ಹಿಂದೂ ರೈತರು
Next Article ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!
Sub Editor
  • Website

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

September 13, 2026

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

September 12, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.