ಕರ್ನಾಟಕ ರಾಜ್ಯ ವಸತಿ ಇಲಾಖೆ ಹಾಗೂ ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರಿನ ಆನೆಕಲ್ ತಾಲ್ಲೂಕು ಇಂಡ್ಲವಾಡಿಯಲ್ಲಿ ದೇಶದ 2ನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರೊಂದಿಗೆ ಪಾಲ್ಗೊಂಡು, ಶಿಲಾನ್ಯಾಸವನ್ನು ನೆರವೇರಿಸಲಾಯಿತು.
ಇದೇ ವೇಳೆ, ಮುಖ್ಯಮಂತ್ರಿಗಳ ‘ನಮ್ಮ ಮನೆ’ ಯೋಜನೆಗೆ ಚಾಲನೆ, ‘ಸೂರ್ಯಶೈನ್’ ಮತ್ತು ‘ಸೂರ್ಯ ಡಿವೈನ್’ ವಸತಿ ಸಮುಚ್ಛಯಗಳ ಶಂಕುಸ್ಥಾಪನೆ ಹಾಗೂ ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಾಂಕೇತಿಕವಾಗಿ ನಿವೇಶನ ಹಂಚಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ವಸತಿ ಮತ್ತು ವಕ್ಫ್ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಬಿ.ಝಡ್.ಜಮೀರ್ ಅಹ್ಮದ್ ಖಾನ್, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಕೆ.ಎಂ.ಶಿವಲಿಂಗೇಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಶಾಸಕರಾದ ಡಿ.ಶಿವಣ್ಣ, ಕೃಷ್ಣಪ್ಪ, ಪ್ರಸಾದ್ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯರಾದ ರಾಮೋಜಿಗೌಡ, ಬೆಂಗಳೂರು ಹಾಲು ಒಕ್ಕೂಟ ಮಹಾಮಂಡಳಿಯ ಅಧ್ಯಕ್ಷರಾದ ಡಿ.ಕೆ.ಸುರೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
