BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

, ,

ಬಿಹಾರ ಚುನಾವಣಾ ಫಲಿತಾಂಶ: ಕಾಂಗ್ರೆಸ್​​ಗೆ ಭಾರೀ ಮುಖಭಂಗ

Author Picture
Published On: November 14, 2025

—Advertisement—

Updated By: Priyalachhi

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಬಿಹಾರದಲ್ಲಿ ಎನ್​​ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಆರ್​ಜೆಡಿ ಹಾಗೂ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದೆ.

ಈ ನಡುವೆ ಬಿಹಾರದ ಸಂಪೂರ್ಣ ಫಲಿತಾಂಶ ಹೊರ ಬೀಳುವ ಮುನ್ನವೇ ಕಾಂಗ್ರೆಸ್​ ನಾಯಕರು ಮತಗಳ್ಳತನದ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಬಿಹಾರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಯಲ್ಲಿ ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ ಪಡೆದು ಮತ್ತೆ ಮಾತನಾಡುತ್ತೇನೆಂದು ಹೇಳಿದರು.

ಯಾಕೆ ಜನ ವೋಟ್ ಹಾಕಿಲ್ಲ, NDA ಯಾಕೆ ಇಷ್ಟು ದೊಡ್ಡ ಬಹುಮತದಲ್ಲಿದೆ ಎನ್ನುವುದು ಗೊತ್ತಿಲ್ಲ. ಇಲ್ಲೂ ಮತಗಳ್ಳತನವಾಗಿದೆ. ಆದರೆ ನಾವು ಜನರ ತೀರ್ಪು ಒಪ್ಪಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಅಜೆಂಡಾ ಓಬಿಸಿ ಅವರೇ ಬಿಹಾರದಲ್ಲಿ ಕೈ ಹಿಡಿದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ನಿತೀಶ್ ಕುಮಾರ್ ಯಾರು? ಅವರು ಓಬಿಸಿ ಅಲ್ಲವಾ? ಸಿಡಿಮಿಡಿಗೊಂಡರು,

ಮುಧೋಳದಲ್ಲಿ ರೈತರ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಬೇರೆ ಎಲ್ಲಾ ರೈತರು 3,300 ರೂ. ಕಬ್ಬು ರೇಟ್ ಪಡೆಯೋಕೆ ಒಪ್ಪಿಕೊಂಡಿದ್ದಾರೆ. ಆದರೆ, ಮುಧೋಳ ರೈತರು ಮಾತ್ರ ಒಪ್ಪಿಕೊಂಡಿಲ್ಲ. ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ. ಯಾರು ಕಬ್ಬು, ಟ್ರ್ಯಾಕ್ಟರ್, ಟ್ರಾಲಿಗಳನ್ನ ಸುಟ್ಟಿ ಹಾಕಿದ್ದಾರೆ ಅಂತ ವಿಚಾರಣೆ ಮಾಡಿಸೋಣ. ರೈತರು ನಾವು ಸುಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ವಿಚಾರಣೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp