Updated By: Priyalachhi

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಕುಸ್ತಿ ಕದನ ನಡೆಯುತ್ತಿರುವ ನಡುವಲ್ಲೇ ರಾಜ್ಯ ಬಿಜೆಪಿಯಲ್ಲೂ ರೆಬೆಲ್ಸ್ ಟೀಮ್ ಮತ್ತೆ ಸಕ್ರಿಯವಾಗಿದೆ.

ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ. ನಾಯಕ್, ಬಿ.ಪಿ. ಹರೀಶ್, ಮಾಜಿ ಸಂಸದ ಸಿದ್ದೇಶ್ವರ ಮತ್ತು ಜೆಡಿಎಸ್‌ನ ಎನ್.ಆರ್. ಸಂತೋಷ್ ಸೇರಿದಂತೆ ಹಲವು ರೆಬೆಲ್ ನಾಯಕರು ದೆಹಲಿಗೆ ತೆರಳಿದ್ದಾರೆ.

ಮಂಗಳವಾರ ದೆಹಲಿ ತಲುಪಿರುವ ಬಂಡಾಯ ನಾಯಕರ ಗುಂಪು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದು, ರಾಜ್ಯ ಬಿಜೆಪಿಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲು ಮುಂದಾಗಿದ್ದಾರೆ.

ಇಷ್ಟು ದಿನ ಸೈಲೆಂಟ್ ಆಗಿದ್ದ ರೆಬೆಲ್ಸ್ ತಂಡವು ರಾಜ್ಯ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನವನ್ನು ಹೈಕಮಾಂಡ್ ಮುಂದೆ ಮಂಡಿಸಲು ಮತ್ತೆ ಆಕ್ಟಿವ್ ಆಗಿದ್ದಾರೆ.

ಈ ನಡುವೆ ಬಂಡಾಯ ನಾಯಕರ ದೆಹಲಿ ಭೇಟಿಗೆ ಬಿಜೆಪಿ ಹಿರಿಯ ನಾಯಕರು ಆಶ್ಚರ್ಯ ವ್ಯಕ್ತಪಡಿಸಿದ್ದು, ಇದ್ದಕ್ಕಿದ್ದಂತೆ ಬಂಡಾಯಕ್ಕೆ ಕಾರಣ ಕುರಿತು ಪ್ರಶ್ನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version