ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. ನಾಳೆ ಶಿಕ್ಷೆ ಪ್ರಮಾಣ ಕುರಿತಂತೆ ವಾದ ಮಂಡನೆ ನಡೆಯಲಿದೆ.

2016ರ ಜೂನ್ 15ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.

ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ಇಂದು ಪ್ರಕರಣ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಿದ್ದರು.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ವಿನಯ್ ಕುಲಕರ್ಣಿ ಎ15 ಆರೋಪಿಯಾಗಿದ್ದು ಒಳಸಂಚು ಹಿನ್ನೆಲೆಯಲ್ಲಿ ಅಪರಾಧಿ ಎಂದು ಘೋಷಿಸಲಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version