BREAKING NEWS
ಕೇವಲ 39 ಸೆಕೆಂಡುಗಳ ಅಂತರದಲ್ಲಿ 2 ಭೀಕರ ಭೂಕಂಪ: ವೆನೆಜುವೆಲಾದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿನ ಶಂಕೆ!   •   “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ   •   ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?   •   ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •  

—Advertisement—

,

Blood sugar ನಿಯಂತ್ರಣದಲ್ಲಿಲ್ಲವೇ? ನಿರ್ಲಕ್ಷಿಸಿದರೆ ಕಣ್ಣಿನ ದೃಷ್ಟಿ ಕಳೆದುಕೊಳ್ಳುತ್ತೀರಾ ಹುಷಾರ್..!

Author Picture
Published On: April 14, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಡಯಾಬಿಟಿಸ್ (ಮಧುಮೇಹ) ದೇಹದ ಹಲವಾರು ಅಂಗಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸಾಕಷ್ಟು ಮಂದಿಗೆ ತಿಳಿದೇ ಇರುತ್ತದೆ. ಆದರೆ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ಕಣ್ಣುಗಳಿಗೂ ಗಂಭೀರ ಹಾನಿ ಉಂಟಾಗಬಹುದು ಎಂಬುದನ್ನು ಅನೇಕರು ಗಮನಿಸುವುದಿಲ್ಲ.

ದೀರ್ಘಕಾಲ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿದ್ದರೆ ಕಣ್ಣಿನ ರೆಟಿನಾದ ಸೂಕ್ಷ್ಮ ರಕ್ತನಾಳಗಳು ಹಾನಿಗೊಳಗಾಗಿ ಡಯಾಬಿಟಿಕ್ ರೆಟಿನೋಪತಿ, ಕಾಟರಾಕ್ಟ್ ಮತ್ತು ಗ್ಲೂಕೋಮಾ ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ.

ಆದರೆ, ಸಮಸ್ಯೆಯನ್ನು ಸರಿಯಾದ ಜೀವನಶೈಲಿ ಮತ್ತು ಕೆಲವು ಸರಳ ಅಭ್ಯಾಸಗಳ ಮೂಲಕ ದೂರಾಗಿಸಿಕೊಳ್ಳಬಹುದು.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಿ

ಕಣ್ಣುಗಳ ಆರೋಗ್ಯವನ್ನು ಕಾಪಾಡಿಕೊಳ್ಳಲು ಅತ್ಯಂತ ಮುಖ್ಯವಾದದ್ದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿ ಇರಿಸುವುದು. ಸಕ್ಕರೆ ಮಟ್ಟ ಹೆಚ್ಚು ಇದ್ದರೆ ರೆಟಿನಾದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಹಾನಿಗೊಳಗಾಗುತ್ತವೆ. ಇದರಿಂದ ಮಸುಕಾದ ದೃಷ್ಟಿ, ರೆಟಿನಾದಲ್ಲಿ ದ್ರವ ಸೋರಿಕೆ, ರಕ್ತಪೂರೈಕೆ ಕಡಿಮೆಯಾಗುವುದು, ಕ್ರಮೇಣ ದೃಷ್ಟಿ ಹಾನಿಯಾಗುವ ಸಮಸ್ಯೆ ಎದುರಾಗುತ್ತದೆ.

ರಕ್ತದೊತ್ತಡವನ್ನು ನಿಯಮಿತವಾಗಿ ಪರಿಶೀಲಿಸಿ

ಮಧುಮೇಹ ಇರುವವರಲ್ಲಿ ಹೆಚ್ಚಿನ ರಕ್ತದೊತ್ತಡ ಕಣ್ಣಿನ ಸಮಸ್ಯೆಯನ್ನು ಮತ್ತಶ್ಟು ಹೆಚ್ಚಿಸುತ್ತದೆ. ರಕ್ತದೊತ್ತಡ ನಿಯಂತ್ರಣದಲ್ಲಿ ಇದ್ದರೆ ರೆಟಿನಾದ ರಕ್ತಪ್ರಸರಣ ಸುಧಾರಿಸುತ್ತದೆ, ಕಣ್ಣಿನಲ್ಲಿ ರಕ್ತಸ್ರಾವದ ಅಪಾಯ ಕಡಿಮೆಯಾಗುತ್ತದೆ ಮತ್ತು ಡಯಾಬಿಟಿಕ್ ರೆಟಿನೋಪತಿ ತೀವ್ರಗೊಳ್ಳುವುದನ್ನು ತಡೆಯಬಹುದು.

ವರ್ಷಕ್ಕೊಮ್ಮೆ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಿ

ಡಯಾಬಿಟಿಕ್ ಕಣ್ಣಿನ ಸಮಸ್ಯೆಗಳು ಆರಂಭಿಕ ಹಂತದಲ್ಲಿ ಯಾವುದೇ ಲಕ್ಷಣಗಳನ್ನು ತೋರಿಸದೇ ಇರಬಹುದು. ಆದ್ದರಿಂದ ವರ್ಷಕ್ಕೊಮ್ಮೆ ಡಿಲೇಟೆಡ್ ಐ ಎಕ್ಸಾಮಿನೇಷನ್ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ.

ಈ ಪರೀಕ್ಷೆಯಿಂದ ಮೈಕ್ರೋ ಅನ್ಯೂರಿಸಮ್, ರೆಟಿನಾ ಊತ, ಅಸಾಮಾನ್ಯ ರಕ್ತನಾಳಗಳ ಬೆಳವಣಿಗೆ, ಮ್ಯಾಕ್ಯುಲರ್ ಬದಲಾವಣೆಗಳನ್ನು ಆರಂಭದಲ್ಲೇ ಪತ್ತೆಹಚ್ಚಬಹುದು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp