BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಖಾಸಗಿ ಆಂಬ್ಯುಲೆನ್ಸ್​ಗಳ ನಿಯಂತ್ರಣ, ನಿರ್ದಿಷ್ಟ ದರ ನಿಗದಿಗಾಗಿ ತಿದ್ದುಪಡಿ ಮಸೂದೆಗೆ ಸಂಪುಟ ಅಸ್ತು

Author Picture
Published On: November 28, 2025

—Advertisement—

Updated By: Priyalachhi

ಬೆಂಗಳೂರು: ಖಾಸಗಿ ಆಂಬ್ಯುಲೆನ್ಸ್​ಗಳನ್ನು ನಿಯಂತ್ರಿಸಲು ಹಾಗೂ ಸಂಚಾರಿ ವೈದ್ಯಕೀಯ ಘಟಕಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆ ಎಂದು ನೋಂದಾಯಿಸಲು ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಸಂಪುಟ ಒಪ್ಪಿಗೆ ನೀಡಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಯಿತು. ಸ್ವಯಂ ಪ್ರೇರಿತವಾಗಿ ನೋಂದಾಯಿಸಿದ ಖಾಸಗಿ ಆಂಬ್ಯುಲೆನ್ಸ್‌ ಸೇವಾ ನಿರ್ವಾಹಕರನ್ನು ನಿಯಂತ್ರಿಸಲು ಮತ್ತು ಸಂಚಾರಿ ವೈದ್ಯಕೀಯ ಘಟಕಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಯೆಂದು ನೋಂದಾಯಿಸಲು ಅವಶ್ಯಕವಾಗಿರುವುದರಿಂದ ತಿದ್ದುಪಡಿಯನ್ನು ತರಲಾಗುತ್ತಿದೆ. ಪ್ರಸ್ತುತ ಅಧಿನಿಯಮದಲ್ಲಿ ತಾತ್ಕಾಲಿಕ ನೋಂದಣಿಗೆ ಅವಕಾಶ ಇಲ್ಲದೇ ಇರುವುದರಿಂದ ಕೇಂದ್ರ ಅಧಿನಿಯಮದ ಮಾದರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಸ್ವ ಮಾನ್ಯತೆ ಪತ್ರ ಒದಗಿಸಿದ ವೈದ್ಯಕೀಯ ಸಂಸ್ಥೆಗಳಿಗೆ 30 ದಿನಗಳೊಳಗಾಗಿ ಖಾಯಂ ನೋಂದಣಿ ನೀಡಲು ತಿದ್ದುಪಡಿಯನ್ನು ಪ್ರಸ್ತಾಪಿಸಲಾಗಿದೆ.

ಖಾಸಗಿ ಆಂಬ್ಯುಲೆನ್ಸ್‌ಗಳ ಸೇವೆಯನ್ನು ಮೊಬೈಲ್ ಆ್ಯಪ್ ಮೂಲಕ ಪಡೆಯಲು ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ (ಕೆಪಿಎಂಇ) ಕಾಯ್ದೆಯಂತೆ ಅವುಗಳ ಸೇವೆಗೆ ನಿರ್ದಿಷ್ಟ ದರ ನಿಗದಿಪಡಿಸಲು ಈ ತಿದ್ದುಪಡಿ ಮಸೂದೆ ಅನುವು ಮಾಡಿಕೊಡಲಿದೆ. ಈ ಮಸೂದೆಯಲ್ಲಿ ಮೋಟಾರು ವಾಹನಗಳ ಅಧಿನಿಯಮ 1988 ಮತ್ತು ಅದರ ಅಡಿ ರಚಿಸಲಾದ ನಿಯಮಗಳ ಜೊತೆಗೆ ಐಚ್ಚಿಕವಾಗಿ ನೋಂದಾಯಿಸಿದ ಆಂಬ್ಯುಲೆನ್ಸ್ ಸೇವಾದಾರರನ್ನು ಅಗ್ರೆಗೇಟರ್​​ನಂತೆ ನಿಯಂತ್ರಿಸಲು ನಿಯಮ ರೂಪಿಸಲಾಗಿದೆ.

ಮಾನಸಿಕ ಆರೋಗ್ಯ ಸಂಸ್ಥೆ ಮತ್ತು ಸಂಚಾರಿ ವೈದ್ಯಕೀಯ ಘಟಕಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆ ಎಂದು ನೋಂದಾಯಿಸಲು ನಿಯಮ ರೂಪಿಸಲಾಗಿದೆ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ನೋಂದಾಯಿತ ವೈದ್ಯಕೀಯ ಸಂಸ್ಥೆಗಳ ಸಂಘದ ಪ್ರತಿನಿಧಿಯನ್ನು ಅಥವಾ ಆಯುಷ್ ವೈದ್ಯಕೀಯ ವೃತ್ತಿಪರ ಸಂಘದ ಪ್ರತಿನಿಧಿ ಒಬ್ಬರನ್ನು ನೇಮಿಸಲು ಅವಕಾಶ ನೀಡಲಾಗಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp