Updated By: Priyalachhi

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಇಂದು (ನವೆಂಬರ್ 3) ಮಹತ್ವದ ದಿನ. ದರ್ಶನ್ ಸೇರಿ ಎಲ್ಲಾ ಆರೋಪಿಗಳು ಇಂದು (ನವೆಂಬರ್ 3) ಕೋರ್ಟ್​ಗೆ ಹಾಜರಿ ಹಾಕುವ ಸಾಧ್ಯತೆ ಇದೆ. ಬೆಳಿಗ್ಗೆ 10 ಗಂಟೆಯ ಬಳಿಕ ದರ್ಶನ್ ಹಾಗೂ ಗ್ಯಾಂಗ್​ನ ಕರೆದುಕೊಂಡು ಹೋಗುವ ಸಾಧ್ಯತೆ ಇದೆ. ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ದೋಷಾರೋಪ ನಿಗದಿ ಆಗಲಿದೆ. ಆರೋಪಿಗಳ ಮೇಲೆ ಪೊಲೀಸರು ಹೇರಿರುವ ಆರೋಪಗಳನ್ನು ಓದಿ ಹೇಳಲಾಗುತ್ತದೆ. ಆರೋಪಗಳನ್ನು ಒಪ್ಪಿಕೊಳ್ಳುತ್ತೀರೆಯೇ ಎಂದು ಆರೋಪಿಗಳಿಗೆ ಕೇಳಲಾಗುತ್ತದೆ. ಆರೋಪಿಗಳು ತಮ್ಮ ಮೇಲಿರುವ ಆರೋಪಗಳನ್ನು ಒಪ್ಪಿಕೊಂಡರೆ ಶಿಕ್ಷೆ ಪ್ರಕಟ ಆಗುತ್ತದೆ. ಆರೋಪಗಳನ್ನು ನಿರಾಕರಿಸಿದರೆ ಸಾಕ್ಷ್ಯಗಳ ವಿಚಾರಣೆ ನಡೆಯಲಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version