BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಸಿಎಂ ಬದಲಾವಣೆ 4-5 ನಾಯಕರ ನಡುವಿನ ಗುಟ್ಟಿನ ವಿಚಾರ, ಪಕ್ಷಕ್ಕೆ ಮುಜುಗರ ತರುವುದಿಲ್ಲ: ಡಿಕೆಶಿ

Author Picture
Published On: November 25, 2025

—Advertisement—

Updated By: Priyalachhi

ರಾಮನಗರ: ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರುವುದು, ಪಕ್ಷವನ್ನು ದುರ್ಬಲಗೊಳಿಸುವುದು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರಿದ್ದರೆ ನಾವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಇಂದು ಮಾಧ್ಯಮವರೊಂದಿಗೆ ಅವರು ಮಾತನಾಡಿದರು.

ಅದು ಗುಟ್ಟಿನ ವಿಚಾರ, ಬಹಿರಂಗಪಡಿಸಲಾರೆ: ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಲಿದ್ದಾರೆಯೇ? ಎಂದು ಕೇಳಿದಾಗ, ಈ ವಿಚಾರ ನನಗೆ ಗೊತ್ತಿಲ್ಲ. ಇದು ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದರು.

ಇದೇ ವೇಳೆ, ಸಿಎಂ ಹಿರಿಯ ನಾಯಕರು. ಅವರು ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ವಿರೋಧ ಪಕ್ಷದ ನಾಯಕರಾಗಿಯೂ ಅವರು ಶ್ರಮಿಸಿದ್ದಾರೆ. ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆ ಗುರಿಯತ್ತ ಗಮನ ಹರಿಸಬೇಕು ಎಂದು ಹೇಳಿದರು.

ಅಧಿಕಾರ ಹಂಚಿಕೆ ಒಪ್ಪಂದ ಆಗಿತ್ತೇ? ಎಂಬ ಪ್ರಶ್ನೆಗೆ, ನಾನು ಆ ಬಗ್ಗೆ ಏಕೆ ಮಾತನಾಡಲಿ?, ನೀವುಗಳೇ ಏನೇನೋ ಬರೆಯುತ್ತಿದ್ದೀರಿ‌ ಎಂದರು. ಅಧಿಕಾರ ಹಂಚಿಕೆ ವಿಚಾರವಾಗಿ ಬಸವರಾಜ ರಾಯರೆಡ್ಡಿ, ಸದಾನಂದ ಗೌಡರ ಹೇಳಿಕೆಗಳಿಗೆ, ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಅವರ ವಕ್ತಾರನಲ್ಲ ಎಂದು ತಿಳಿಸಿದರು.

ನೀವು ಸಿಎಂ ಆಗಬೇಕೆಂದು ಜನರು ಪೂಜೆ ಮಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ನನಗೆ ಅಧಿಕಾರ ಸಿಗಲಿ ಎಂದು ಈಗ ಪೂಜೆ ಮಾಡುತ್ತಿರುವುದಕ್ಕಿಂತ, ನಾನು ಜೈಲಿಗೆ ಹೋದಾಗ ನನ್ನ ತಾಯಂದಿರು, ಯುವಕರು, ಹಿರಿಯರು, ದೇವಾಲಯದ ಅರ್ಚಕರು ಮಾಡಿದ ಪ್ರಾರ್ಥನೆಯನ್ನು ಮರೆಯಲು ಸಾಧ್ಯವಿಲ್ಲ. ಬಿಜೆಪಿ ಅವಧಿಯಲ್ಲಿ ನಾನು ಜೈಲಿಂದ ಬಿಡುಗಡೆ ಆದಾಗ ಪೊಲೀಸರ ಬೆದರಿಕೆಗೂ ಹಿಂಜರಿಯದೇ ನನ್ನನ್ನು ಜನ ಸ್ವಾಗತಿಸಿದರು. ನಾನು ಜೈಲಲ್ಲಿ ಇದ್ದಾಗ ಕರವೇ ನಾರಾಯಣ ಗೌಡರಿಗೆ ಪ್ರತಿಭಟನೆ ನಡೆಸದಂತೆ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಬೆದರಿಕೆ ಹಾಕಿದ್ದರು. ಕೆಲವು ಸ್ವಾಮೀಜಿಗಳು ಬಂದರು, ಕೆಲವರು ಬರಲಿಲ್ಲ. ಆಗ ಕಟ್ಟಿಕೊಂಡ ಹರಕೆ ಮುಗಿಸಲು ಇನ್ನೂ ನನಗೆ ಆಗುತ್ತಿಲ್ಲ. ಅನೇಕರು ನಾನು ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಿರಲಿಲ್ಲ. ನಾನು ಇಂದು ಡಿಸಿಎಂ ಆಗಿದ್ದು, ಪಕ್ಷದ ಅಧ್ಯಕ್ಷನಾಗಿದ್ದೇನೆ. ಕಷ್ಟಕಾಲದಲ್ಲಿದ್ದಾಗ ಮಾಡಿದ ಪ್ರಾರ್ಥನೆ, ಆಗ ಅವರು ನನಗೆ ಆತ್ಮಸ್ಥೈರ್ಯ ತುಂಬಿದ್ದು, ನನಗೆ ಬಹಳ ವಿಶೇಷ ಎಂದು ತಿಳಿಸಿದರು.

ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಬೇಕೆಂದು ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲೂ ಜನ ಪಕ್ಷಕ್ಕೆ ಬೆಂಬಲ ನೀಡಿದ್ದಾರಲ್ಲವೇ ಎಂಬುದಕ್ಕೆ, ನಾನು ಚುನಾವಣೆಯ ಸಂದರ್ಭದಲ್ಲಿ ಮಹದೇವಪ್ಪನವರ ಕ್ಷೇತ್ರ ಮಂಡ್ಯ ಸೇರಿದಂತೆ ಎಲ್ಲ ಕಡೆಗಳಲ್ಲಿ ನನ್ನ ಮುಖ ನೋಡಿ ಮತ ಹಾಕಿ ಎಂದೂ ಕೇಳಿದ್ದೇನೆ. ಜನ ನಮ್ಮ ಸಾಮೂಹಿಕ ನಾಯಕತ್ವಕ್ಕೆ ಮತ ಹಾಕಿದ್ದಾರೆ. ನನ್ನೊಬ್ಬನಿಗಾಗಿ ಮತ ಹಾಕಿದ್ದಾರೆ ಎಂದು ನಾನು ಹೇಳುವುದಿಲ್ಲ. 224 ಕ್ಷೇತ್ರಗಳಲ್ಲಿ ನಮಗಿಂತ ನಮ್ಮ ಕಾರ್ಯಕರ್ತರು ಹೆಚ್ಚು ಶ್ರಮ ಹಾಕಿದ್ದಾರೆ ಎಂದು ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp