BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಕಿಚ್ಚ ಸುದೀಪ್, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

Author Picture
Published On: November 22, 2025

—Advertisement—

Updated By: Priyalachhi

ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ‘ಬಿಗ್​​ಬಾಸ್ ಶೋ’ ವೀಕ್ಷಕರ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ವಿವಾದವೂ ಹೆಚ್ಚಾಗುತ್ತಿದೆ.

ಈ ಬಾರಿ ಮನೆಯಲ್ಲಿರುವ ಮಹಿಳಾ ಸ್ಪರ್ಧಿಗಳ ಪೈಕಿ ಅಶ್ವಿನಿ ಗೌಡ ಅವರ ಆಕ್ರಮಣಕಾರಿ ಸ್ವಭಾವ ಕುರಿತು ವೀಕ್ಷಕರಿಂದ ಟೀಕೆಗಳು ವ್ಯಕ್ತವಾಗುತ್ತಿವೆ. ರಕ್ಷಿತಾ, ಗಿಲ್ಲಿ, ರಘು ಸೇರಿದಂತೆ ಮತ್ತಿತರ ಸ್ಪರ್ಧಿಗಳೊಂದಿಗೆ ಆಗಾಗ್ಗೆ ಜಗಳ, ಪದ ಬಳಕೆ ಸೇರಿದಂತೆ ಮತ್ತಿತರ ಕಾರಣಗಳನ್ನು ಮುಂದಿಟ್ಟು ಅನೇಕ ವೀಕ್ಷಕರು ಸಾಮಾಜಿಕ ಜಾಲತಾಣಗಳ ಮೂಲಕ ಕಿಡಿಕಾರುತ್ತಿದ್ದಾರೆ.

ಈ ಹಿಂದೆ ರಕ್ಷಿತಾ ಅವರನ್ನು s(ಸ್ಲಂ) ಎಂದಿದ್ದ ಅಶ್ವಿನಿ ಗೌಡ, ಅಮಾವಾಸ್ಯೆ ಅಂತಲೂ ಕರೆಯುವ ಮೂಲಕ ಅವಮಾನಿಸಿದ್ದಾರೆ ಎಂದು ವೀಕ್ಷಕರು ಸಾಮಾಜಿಕ ಜಾಲತಾಣಗಳ ಮೂಲಕ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಸುದೀಪ್ ವಿರುದ್ಧವೂ ಟೀಕೆ: ಅಲ್ಲದೇ, ಕಾರ್ಯಕ್ರಮದ ನಿರೂಪಕರಾದ ಕಿಚ್ಚ ಸುದೀಪ್ ವಿರುದ್ಧವೂ ಟೀಕೆಗಳು ಕೇಳಿಬರುತ್ತಿವೆ. ವಾರಾಂತ್ಯದಲ್ಲಿ ಬೇರೆ ಎಲ್ಲರಿಗೂ ತಿದ್ದಿ ಬುದ್ದಿವಾದ ಹೇಳುವ ಸುದೀಪ್, ಅಶ್ವಿನಿ ಗೌಡ ವಿಚಾರದಲ್ಲಿ ಮೌನ ವಹಿಸುತ್ತಾರೆ. ವಾರ್ನಿಂಗ್ ನೀಡಲ್ಲ ಎಂದು ಎಷ್ಟೋ ವೀಕ್ಷಕರು ಹೇಳಿಕೊಳ್ಳುತ್ತಿದ್ದಾರೆ.

ರಾಮನಗರ ಡಿವೈಎಸ್ಪಿ ಕಚೇರಿಯಲ್ಲಿ ದೂರು ದಾಖಲು: ಈ ಮಧ್ಯೆ ಇದೀಗ ನಿರೂಪಕ ಕಿಚ್ಚ ಸುದೀಪ್ ಹಾಗೂ ಸ್ಪರ್ಧಿ ಅಶ್ವಿನಿಗೌಡ ವಿರುದ್ಧ ದೂರು ದಾಖಲಾಗಿದೆ. ಸ್ಪರ್ಧಿ ರಕ್ಷಿತಾ ಶೆಟ್ಟಿಗೆ ಅವಮಾನಕಾರಿ ಆಗುವ ರೀತಿಯಲ್ಲಿ ಹೇಳಿಕೆ ನೀಡಿರುವ ಆರೋಪದ ಮೇಲೆ ರಾಮನಗರ ಡಿವೈಎಸ್ಪಿ ಕಚೇರಿಯಲ್ಲಿ ಸಾಮಾಜಿಕ ಹೋರಾಟಗಾರ್ತಿ ಸಂಧ್ಯಾ ಪವಿತ್ರ ಎನ್ನುವವರು ದೂರು ದಾಖಲಿಸಿದ್ದಾರೆ.

ರಕ್ಷಿತಾ ವಿರುದ್ಧ ಅಶ್ವಿನಿ ಗೌಡ ಮಾನಹಾನಿಕರ ಪದ ಬಳಕೆ ಮಾಡಿದ್ದಾರೆ. ಕಾರ್ಯಕ್ರಮದ ನಿರೂಪಕರಾದ ಕಿಚ್ಚ ಸುದೀಪ್ ರಕ್ಷಿತಾಗೆ ಬೆದರಿಕೆ ಹಾಕುವ ರೀತಿ ಮಾತನಾಡಿದ್ದಾರೆ. ಇದೆಲ್ಲವನ್ನೂ ಕೂಡಾ ಖಾಸಗಿ ವಾಹಿನಿ ಪ್ರಸಾರ ಮಾಡಿ ರಕ್ಷಿತಾ ಮಾನಹಾನಿಯಾಗುವಂತೆ ಮಾಡಿದೆ. ಅಲ್ಲದೇ ಸ್ಪರ್ಧಿ ರಿಷಾ, ಸಹಸ್ಪರ್ಧಿ ಗಿಲ್ಲಿ ಮೇಲೆ ಹಲ್ಲೆ‌ ಮಾಡಿದ್ದಾರೆ. ಈ ಬಗ್ಗೆ ಕಾರ್ಯಕ್ರಮದ ಮುಖ್ಯಸ್ಥರು ಯಾವುದೇ ಕ್ರಮವಹಿಸಿಲ್ಲ. ಹಾಗಾಗಿ ಈ ಎಲ್ಲಾ ಅಂಶಗಳನ್ನ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಸುದೀಪ್ ಈ ಪದ ಬಳಕೆ ಮಾಡಿದ್ದು ಎಷ್ಟು ಸರಿ? ಇತ್ತೀಚೆಗೆ ರಕ್ಷಿತಾ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದ ಸುದೀಪ್, ‘ಪಿತ್ತ ನೆತ್ತಿಗೆ ಏರುತ್ತದೆ’ ಎಂದು ಹೇಳಿದ್ದರು. ಆ ಮಾತಿಗೆ ಸಂಧ್ಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದೀಪ್ ಈ ಪದ ಬಳಕೆ ಮಾಡಿದ್ದು ಎಷ್ಟು ಸರಿ? ಇಂತಹ ಪದವನ್ನು ಬಳಕೆ ಮಾಡಿದ್ದು ಸರಿನಾ? ಜೊತೆಗೆ ಅಶ್ವಿನಿ ಗೌಡ ಎಸ್ ಹಾಗೂ ಸ್ಲಂ ಎಂದು ಬಳಸುತ್ತಾರೆ. ಹಾಗಾಗಿ ನಾನು ಈ ಬಗ್ಗೆ ದೂರು ಕೊಟ್ಟಿದ್ದೇನೆ’ಎಂದು ಸಂಧ್ಯಾ ಹೇಳಿದ್ದಾರೆ. ರಿಷಾ ವಿರುದ್ಧವೂ ದೂರು ನೀಡಲಾಗಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp