• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸಿಎಂ ಹುದ್ದೆ ಕನಸು ಕೈ ಬಿಟ್ಟ DCM?

Sambrama Prabha News by Sambrama Prabha News
November 12, 2025
in Latest News, Politics
0
ಸಿಎಂ ಹುದ್ದೆ ಕನಸು ಕೈ ಬಿಟ್ಟ DCM?

Updated By: Priyalachhi

ಬೆಂಗಳೂರು: ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದು, ಹಾಲಿ ಮುಖ್ಯಮಂತ್ರಿಯೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ಏನು ತಪ್ಪೆಂದು ಪ್ರಶ್ನಿಸಿದ್ದಾರೆ.

2028 ರಲ್ಲಿ ಸಿದ್ದರಾಮಯ್ಯ ಅವರ ಐದು ವರ್ಷಗಳ ಅವಧಿ ಪೂರ್ಣಗೊಂಡ ನಂತರ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬಹುದು ಎಂಬ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರ ಇತ್ತೀಚಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಪ್ರತಿಕ್ರಿಯೆ ನೀಡುವಾಗ ಈ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 2 ವರ್ಷ 6 ತಿಂಗಳು ಪೂರ್ಣಗೊಳ್ಳುತ್ತಿದ್ದು, ನವೆಂಬರ್ ನಲ್ಲಿ ಸರ್ಕಾರದ ನಾಯಕತ್ವ ಬದಲಾವಣೆಯಾಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿತ್ತು.

ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್ “ತುಂಬಾ ಸಂತೋಷ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆದರೆ ಏನು ತಪ್ಪು? ಮುಖ್ಯಮಂತ್ರಿ ಅಲ್ಲಿದ್ದಾರೆ. ಅವರು ಇರಲಿ. ನಮಗೆ ದುಃಖವಿಲ್ಲ. ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ನಾವು ಒಗ್ಗಟ್ಟಿನಿಂದ ಮುಂದುವರಿಯುತ್ತೇವೆ” ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

Tags: DCMಸಿದ್ದರಾಮಯ್ಯ ಸಿಎಂ
Previous Post

ಸೀದಾ-ಸಾದಾ ಲುಕ್​​ನಲ್ಲಿ ಉಪ್ಪಿ ಹೆಂಡ್ತಿ! ಸೆಪ್ಟೆಂಬರ್-21 ಚಿತ್ರದ ಫೋಟೋಸ್ ಔಟ್

Next Post

GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ

Next Post
GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ

GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.